Karnataka TET Result 2022: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಪ್ರಕಟ: ದಿನಾಂಕ, ವೆಬ್ಸೈಟ್ ವಿವರ ಇಲ್ಲಿದೆ
ಬೆಂಗಳೂರು, ಡಿಸೆಂಬರ್ 9: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) 2022ರ ಫಲಿತಾಂಶ ಮುಂದಿನ ವಾರಾಂತ್ಯಕ್ಕೆ ಪ್ರಕಟಗೊಳ್ಳಲಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2022 ಅನ್ನು ಮುಂದಿನ ವಾರಾಂತ್ಯದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
KARTET 2022 ಫಲಿತಾಂಶವನ್ನು ಪ್ರಕಟಿಸಲಿದೆ. schooleducation.kar.nic.in ನಲ್ಲಿ ಲಭ್ಯವಿರುತ್ತದೆ.
ಈ ವಿಚಾರವಾಗಿ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಬರೆದುಕೊಂಡಿರುವ ನಾಗೇಶ್, 'ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶವನ್ನು ಮುಂದಿನ ವಾರಾಂತ್ಯದಲ್ಲಿ ಪ್ರಕಟಿಸಲಾಗುವುದು' ಎಂದು ತಿಳಿಸಿದ್ದಾರೆ.
ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುವುದು.@BSBommai
— B.C Nagesh (@BCNagesh_bjp) December 8, 2022
ನವೆಂಬರ್ 6ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿತ್ತು. ನವೆಂಬರ್ 9ರಂದು ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು.
ಈ ವರ್ಷ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾತಿ ಶೇ.92 ಇದೆ. ಈ ಕುರಿತು ಬಿ.ಸಿ.ನಾಗೇಶ್ ಈ ಹಿಂದೆ ಟ್ವೀಟ್ ಮಾಡಿದ್ದರು. ನವೆಂಬರ್ 6 ರಂದು ಎರಡು ಅವಧಿಗಳಲ್ಲಿ ಪರೀಕ್ಷೆಯನ್ನು ನಡೆಸಲಾಯಿತು - ಪತ್ರಿಕೆ 1 ಅನ್ನು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಪತ್ರಿಕೆ 2 ಅನ್ನು ಮಧ್ಯಾಹ್ನ 1:30 ರಿಂದ 4:30 ರವರೆಗೆ ನಡೆಸಲಾಯಿತು.

ಅದರ ನಂತರ, ನವೆಂಬರ್ 9ರಂದು ಪತ್ರಿಕೆ 1 ಮತ್ತು 2 ರ ಉತ್ತರ ಕೀಗಳನ್ನು ಬಿಡುಗಡೆ ಮಾಡಲಾಯಿತು. ತಾತ್ಕಾಲಿಕ ಉತ್ತರ ಕೀ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ನವೆಂಬರ್ 17 ರ ಸಂಜೆ 5:30 ರ ವರೆಗೆ ಸಮಯವಿತ್ತು.
ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರ ಖಾಲಿ ಹುದ್ದೆಗಳಿಗೆ ನೇಮಿಸಿಕೊಳ್ಳಲು KARTET ಪರೀಕ್ಷೆಯನ್ನು ನಡೆಸಲಾಗುತ್ತದೆ. ಪೇಪರ್ 1 ಅನ್ನು ಕೆಳ ಪ್ರಾಥಮಿಕ ಶಿಕ್ಷಕರನ್ನು (1 ರಿಂದ 5 ನೇ ತರಗತಿಗಳು) ನೇಮಕ ಮಾಡಲು ನಡೆಸಲಾಗುತ್ತದೆ. 6 ರಿಂದ 8 ನೇ ತರಗತಿಗಳಿಗೆ ಶಿಕ್ಷಕರನ್ನು ಶಿಕ್ಷಕರನ್ನು ನೇಮಿಸಿಕೊಳ್ಳಲು ಪೇಪರ್ 2 ಅನ್ನು ನಡೆಸಲಾಗುತ್ತದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications