Get Updates
Get notified of breaking news, exclusive insights, and must-see stories!

ಪಠ್ಯಗಳ ಬಗ್ಗೆ ಪಟ್ಟು ಬಿಡದ ಸರ್ಕಾರ: ಸಣ್ಣ ಮಾರ್ಪಾಡು ಮಾಡಿ ಚಕ್ರತೀರ್ಥ ಪಠ್ಯವೇ ಬೋಧಿಸಲು ನಿರ್ಧಾರ

ಬೆಂಗಳೂರು, ಜೂ. 3: ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ಕೈಬಿಡಬೇಕು ಎಂದು ನಾಡಿನ ಮಠಾಧೀಶರು, ಸಾಹಿತಿಗಳು ಒತ್ತಾಯ ಮಾಡಿರುವುದರ ಮಧ್ಯೆಯೂ ಸಹ ಸರ್ಕಾರ ಕೆಲವು ಮಾರ್ಪಾಡುಗಳೊಂದಿಗೆ ಪರಿಷ್ಕೃತ ಪಠ್ಯವನ್ನೇ ಮುಂದುವರಿಸಲು ನಿರ್ಧರಿಸಿದೆ.

ರೋಹಿತ್ ಚಕ್ರತಿರ್ಥ ಸಮಿತಿ ಪರಿಷ್ಕರಿಸಿರುವ ಪಠ್ಯಗಳ ಬಗ್ಗೆ ನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರಕ್ಕೂ ಸಹ ಇದು ಮುಜುಗರ ತಂದಿತ್ತು. ಆದರೆ, ಸರ್ಕಾರ ಮಾತ್ರ ತನ್ನ ನಿಲುವುನಿಂದ ಹಿಂದೆ ಸರಿದಂತೆ ಕಾಣುತ್ತಿಲ್ಲ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆದಿರುವ ಬೆಳವಣಿಗೆಗಳ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶುಕ್ರವಾರ ಸರ್ಕಾರಕ್ಕೆ ವರದಿ ನೀಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡರಾತ್ರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುಖ್ಯಮಂತ್ರಿಯ ಹೇಳಿಕೆಯ ಸಾರಾಂಶ ಹೀಗಿದೆ..

ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ.

Karnataka Textbook Row: Rohit Chakratirtha Revision Text Continue

ಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು.

ಆದಿಚುಂಚನಗಿರಿ ಪೀಠದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್‌ ಕ್ರೈಮ್‌ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ.

Karnataka Textbook Row: Rohit Chakratirtha Revision Text Continue

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಬಂದಿರುವ ಆರೋಪ / ಆಕ್ಷೇಪಣೆಗಳಿಗೆ ಸ್ಪಷ್ಟೀಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟೀಕರಣವನ್ನು ಕೊಡಲಾಗಿದೆ. ಪ್ರಸ್ತುತ ಆಕ್ಷೇಪ ಮಾಡಿರುವಂತೆ ಮಹಾನ್‌ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ.

ಸರ್ಕಾರದ ನಿರ್ಧಾರಗಳು ಹೀಗಿವೆ...

1) ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.

2) ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ. ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.

3) ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.

4) ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದೆ.

5) ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.

Recommended Video

      ಶಿಖರ್ ಧವನ್ ಗೆ ರಾಹುಲ್ ದ್ರಾವಿಡ್ ಹೀಗೆ ಹೇಳಿದ್ದೇಕೆ | OneIndia Kannada

      6) ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+