ಮಂಗಳೂರು, ಮೈಸೂರು, ಧಾರವಾಡದಲ್ಲಿ ಐಟಿ ಪಾರ್ಕ್ : ಪ್ರಿಯಾಂಕ್ ಖರ್ಗೆ
ಕರ್ನಾಟಕದ ಎರಡನೇ ಸ್ತರದ ನಗರಗಳಾದ ಮಂಗಳೂರು, ಮೈಸೂರು, ಧಾರವಾಡದಲ್ಲಿ ಶೀಘ್ರವೇ ಐಟಿ/ಬಿಟಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರು, ಮಾರ್ಚ್ 24: ಮಂಗಳೂರು- ಮೈಸೂರು, ಧಾರವಾಡದಂಥ ಎರಡನೇ ಸ್ತರದ ನಗರಗಳಲ್ಲಿ ಶೀಘ್ರವಾಗಿ ಐಟಿ, ಬಿಟಿ ಪಾರ್ಕ್ ಸ್ಥಾಪಿಸಲು ಕ್ರಮಕೈಗೊಳ್ಳುವದಾಗಿ ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಮೊಹಿದ್ದೀನ್ ಬಾವಾ ಅವರು ಕೇಳಿದ ಪ್ರಶ್ನೆಗೆ ಸಚಿವ ಖರ್ಗೆ ಉತ್ತರಿಸಿದರು. ಬೆಂಗಳೂರನ್ನು ಮಾತ್ರ ಕೇಂದ್ರವಾಗಿಟ್ಟುಕೊಂಡು ಐಟಿ ಉದ್ಯಮ ಬೆಳೆಸಿದರೆ ಸಾಲದು. ಮಂಗಳೂರಿನಂಥ 2ನೇ ಸ್ತರದ ನಗರಗಳಲ್ಲೂ ಐಟಿ ಪಾರ್ಕ್ ಸ್ಥಾಪಿಸಬೇಕು. ಸರ್ಕಾರ ಹಾಗೂ ಸಾರ್ವಜನಿಕರ ಸಹಕಾರದಿಂದ ನಗರಾಭಿವೃದ್ಧಿಗೆ ಮುಂದಾಗಬೇಕು. [ಸಿದ್ದು ಬಜೆಟಿನಲ್ಲಿ ಐಟಿ-ಬಿಟಿ ಕ್ಷೇತ್ರಕ್ಕೆ ಮತ್ತೆ ನಿರಾಶೆ]

ಐಟಿ ಪಾರ್ಕಿಗೆ ಬಂಡವಾಳ ಹೂಡಲು ಬಹಳಷ್ಟು ಉದ್ಯಮಿಗಳು ಮುಂದೆ ಬಂದಿದ್ದಾರೆ. ಆದರೆ, ಅಗತ್ಯ ಮೂಲಸೌಲಭ್ಯವಿಲ್ಲದೆ ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ಸಾಲುತ್ತಿಲ್ಲ ಎಂದು ಶಾಸಕ ಬಾವಾ ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಭಿವೃದ್ಧಿ ವಿಷಯದಲ್ಲಿ ಏನೆಲ್ಲಾ ಸಾಧ್ಯವೋ ಅಷ್ಟನ್ನು ಸರ್ಕಾರ ಮಾಡುತ್ತದೆ. ಬೆಂಗಳೂರಿನಂತೆ ಇತರ ಮೈಸೂರು, ಮಂಗಳೂರು, ಧಾರವಾಡ ನಗರಗಳಲ್ಲಿ ಐಟಿ ಪಾರ್ಕ್ ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ.
ಆಯಾ ನಗರಗಳ ಸ್ವರೂಪಕ್ಕೆ ಅನುಗುಣವಾಗಿ ಐಟಿ ಪಾರ್ಕ್ ವಿನ್ಯಾಸಗೊಳಿಸಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಸಕರು, ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಐಟಿ ಪಾರ್ಕ್ಗಳನ್ನು ಅಭಿವೃದ್ದಿ ಪಡಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications