ಕೆಎಂಎಫ್ ಮಾದರಿಯಲ್ಲಿ ಮಾಂಸ ಮಾರಾಟ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ಚಿಂತನೆ
ಕರ್ನಾಟಕ ಸರ್ಕಾರವು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಹಾಲಿನ ಉತ್ಪನ್ನಗಳ ಮಾದರಿಯಲ್ಲಿ ರಾಜ್ಯಾದ್ಯಂತ ತನ್ನ ಮಳಿಗೆಗಳ ಮೂಲಕ ಪ್ಯಾಕ್ ಮಾಡಿದ ಕುರಿ ಮತ್ತು ಮೇಕೆ ಮಾಂಸವನ್ನು ಸಮರ್ಪಕ ಬೆಲೆಯಲ್ಲಿ ಮಾರಾಟ ಮಾಡಲು ಚಿಂತನೆ ನಡೆಸಿದೆ.
ಪಶುಸಂಗೋಪನಾ ಇಲಾಖೆಯಡಿ ಈ ಯೋಜನೆ ಜಾರಿ ಮಾಡಲು ಉದ್ದೇಶಿಸಿದ್ದು, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ನಿರೀಕ್ಷೆ ಮಾಡಲಾಗಿದೆ.
ನವದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯೂ ಆಗಿರುವ ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ಈ ಬಗ್ಗೆ ಮಾತನಾಡಿ, ತುಮಕೂರು ಜಿಲ್ಲೆಯ ಸಿರಾ ತಾಲ್ಲೂಕಿನ ಚೀಲನಹಳ್ಳಿಯಲ್ಲಿ ಹೈಟೆಕ್ ಕಸಾಯಿಖಾನೆಯ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಖಾಸಗಿ ಏಜೆನ್ಸಿ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಕಸಾಯಿಖಾನೆ ಜನವರಿ ವೇಳೆಗೆ ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ ಎಂದರು.

ಗುಣಮಟ್ಟದ ಮಾಂಸ ಮಾರಾಟ
ಯೋಜನೆಯ ಕುರಿತು ವಿವರಿಸಿದ ಜಯಚಂದ್ರ, ರೈತರು ತಮ್ಮ ಕುರಿ ಮತ್ತು ಮೇಕೆಗಳಿಗೆ ಉತ್ತಮ ಬೆಲೆಯನ್ನು ಪಡೆಯಲು ಮತ್ತು ಜನರಿಗೆ ಗುಣಮಟ್ಟದ ಮಾಂಸವನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ರೈತರಿಂದ ನೇರವಾಗಿ ಪ್ರಾಣಿಗಳನ್ನು ಖರೀದಿಸಲಾಗುತ್ತದೆ. ಇದು ಅವರ ಆದಾಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಎಂಎಫ್ನ ನಂದಿನಿ ಮಾದರಿಯಲ್ಲಿ ಮಾಂಸದ ಬ್ರಾಂಡ್ ನಿರ್ಮಿಸಲು ಪಶುಸಂಗೋಪನ ಇಲಾಖೆ ಶ್ರಮಿಸಲಿದೆ ಎಂದು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಕುರಿ ಮತ್ತು ಮೇಕೆ ಸಾಕುವ ರೈತರು ತಮ್ಮ ಪ್ರಾಣಿಗಳಿಗೆ ಲಾಭದಾಯಕ ಬೆಲೆಗಳನ್ನು ಪಡೆಯಬೇಕೆಂದು ನಾವು ಬಯಸುತ್ತೇವೆ. ಈ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶ ಹೊಂದಿದ್ದೇವೆ. ಮಾಂಸ ಮಾರಾಟ ಮಳಿಗೆ ಸ್ಥಾಪನೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.
ಕುರಿ ಮತ್ತು ಮೇಕೆ ಚರ್ಮದಿಂದ ಉತ್ಪನ್ನಗಳನ್ನು ತಯಾರಿಸುವ ಯೋಜನೆಯನ್ನೂ ಸರ್ಕಾರ ಹೊಂದಿದೆ. ಇಲಾಖೆಯ ಅಧಿಕಾರಿಗಳನ್ನು ತಮಿಳುನಾಡು ಮತ್ತು ಕೋಲ್ಕತ್ತಾದ ಅಂಬೂರ್ಗೆ ಕಳುಹಿಸಲಾಗುವುದು, ಅಲ್ಲಿ ಕುರಿ ಮತ್ತು ಮೇಕೆ ಚರ್ಮವನ್ನು ಬಳಸಿ ಚರ್ಮ ಮತ್ತು ಇತರ ಉತ್ಪನ್ನಗಳನ್ನು ಅಧ್ಯಯನ ಮಾಡಲಿದ್ದಾರೆ ಎಂದು ಹೇಳಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications