487 ಟಾಟಾ ಬಸ್ ಖರೀದಿ ಮಾಡಲಿದೆ ಸಾರಿಗೆ ಇಲಾಖೆ
ಬೆಂಗಳೂರು, ಫೆ.17 : ಸಾರಿಗೆ ಇಲಾಖೆ 487 ಹೊಸ ಬಸ್ಸುಗಳನ್ನು ಖರೀದಿ ಮಾಡಲಿದೆ. ಇವು ಟಾಟಾ ಕಂಪೆನಿಯ ಬಸ್ಸುಗಳಾಗಿದ್ದು, ಹವಾನಿಯಂತ್ರಿತ ವ್ಯವಸ್ಥೆ ಇಲ್ಲದ ಸಾಮಾನ್ಯ ಬಸ್ಸುಗಳಾಗಿವೆ. ಪ್ರತಿ ಬಸ್ಸಿನ ಬೆಲೆ 38 ಲಕ್ಷ ರೂ.ಗಳು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ನೂತನವಾಗಿ 487 ಬಸ್ಸುಗಳನ್ನು ಖರೀದಿ ಮಾಡಲಾಗುತ್ತಿದೆ. ಆದರೆ, ಇವು ನಿಷೇಧಿತ ಮಾರ್ಕೊಪೋಲೊ ಬಸ್ಸುಗಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. [ಮತ್ತೆ ಬಸ್ ದರ ಇಳಿಸೋಲ್ಲಾ ಅಂದ್ರು ಮಿನಿಸ್ಟರ್]

ಮೊದಲು ಪ್ರಾಯೋಗಿಕ ಸಂಚಾರಕ್ಕಾಗಿ 10 ಖರೀದಿ ಮಾಡಲಾಗುತ್ತಿದ್ದು, ಅವುಗಳ ಕಾರ್ಯಕ್ಷಮತೆ ಪರಿಶೀಲಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು. ಇವು ಮುಂಭಾಗದಲ್ಲಿ ಇಂಜಿನ್ ಇರುವ ಸಾಮಾನ್ಯ ಬಸ್ಸುಗಳಾಗಿವೆ. [ಗುಜರಿ ಸೇರಲಿವೆ ಟಾಟಾದ ಮಾರ್ಕೊಪೋಲೊ ಬಸ್!]
ಕೇಂದ್ರ ಸರ್ಕಾರ ಬಸ್ ಖರೀದಿಗಾಗಿ ಶೇ 50ರಷ್ಟು ಅನುದಾನವನ್ನು ನೀಡಲಿದೆ. ಉಳಿದ ಪಾಲನ್ನು ರಾಜ್ಯ ಸರ್ಕಾರ ಪಾವತಿ ಮಾಡಿ ಖರೀದಿ ಮಾಡಲಿದೆ. ಪ್ರತಿ ಬಸ್ ಬೆಲೆ 38.05 ಲಕ್ಷವಾಗಿದೆ. ಜಿಪಿಎಸ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ವ್ಯವಸ್ಥೆ ಈ ಬಸ್ಸುಗಳಲ್ಲಿದೆ.
ಬಸ್ ಖರೀದಿಗೆ ರಾಜ್ಯ ಸರ್ಕಾರ ಕರೆದಿದ್ದ ಟೆಂಡರ್ನಲ್ಲಿ ಅಶೋಕ್ ಲೈಲ್ಯಾಂಡ್, ಟಾಟಾ ಕಂಪನಿಗಳು ಪಾಲ್ಗೊಂಡಿದ್ದವು. ಟಾಟಾ ಅತಿ ಕಡಿಮೆ ದರ ದಾಖಲಿಸಿದ್ದ ಕಾರಣ ಅದಕ್ಕೆ ಟೆಂಡರ್ ನೀಡಲಾಗಿದೆ.
ಬಸ್ ಗುಜರಿಗೆ ಹಾಕಲಾಗಿತ್ತು : ಸಾರಿಗೆ ಸಂಸ್ಥೆಗಳ ನಷ್ಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾರ್ಕೊಪೋಲೊ ಬಸ್ಸುಗಳನ್ನು ಗುಜರಿಗೆ ಹಾಕಲು ಸಚಿವ ಸಂಪುಟ ಸಭೆಯಲ್ಲಿ ಕೆಲವು ದಿನಗಳ ಹಿಂದೆ ಒಪ್ಪಿಗೆ ನೀಡಲಾಗಿತ್ತು. ಬೆಂಗಳೂರು ಮತ್ತು ಮೈಸೂರು ನಗರ ಸೇರಿ ಒಟ್ಟು 142 ಮಾರ್ಕೊಪೋಲೊ ಬಸ್ಸುಗಳಿದ್ದು ಇವು ಟಾಟಾ ಕಂಪನಿಗೆ ಸೇರಿದ್ದವು.
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications