487 ಟಾಟಾ ಬಸ್ ಖರೀದಿ ಮಾಡಲಿದೆ ಸಾರಿಗೆ ಇಲಾಖೆ
ಬೆಂಗಳೂರು, ಫೆ.17 : ಸಾರಿಗೆ ಇಲಾಖೆ 487 ಹೊಸ ಬಸ್ಸುಗಳನ್ನು ಖರೀದಿ ಮಾಡಲಿದೆ. ಇವು ಟಾಟಾ ಕಂಪೆನಿಯ ಬಸ್ಸುಗಳಾಗಿದ್ದು, ಹವಾನಿಯಂತ್ರಿತ ವ್ಯವಸ್ಥೆ ಇಲ್ಲದ ಸಾಮಾನ್ಯ ಬಸ್ಸುಗಳಾಗಿವೆ. ಪ್ರತಿ ಬಸ್ಸಿನ ಬೆಲೆ 38 ಲಕ್ಷ ರೂ.ಗಳು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ನೂತನವಾಗಿ 487 ಬಸ್ಸುಗಳನ್ನು ಖರೀದಿ ಮಾಡಲಾಗುತ್ತಿದೆ. ಆದರೆ, ಇವು ನಿಷೇಧಿತ ಮಾರ್ಕೊಪೋಲೊ ಬಸ್ಸುಗಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. [ಮತ್ತೆ ಬಸ್ ದರ ಇಳಿಸೋಲ್ಲಾ ಅಂದ್ರು ಮಿನಿಸ್ಟರ್]

ಮೊದಲು ಪ್ರಾಯೋಗಿಕ ಸಂಚಾರಕ್ಕಾಗಿ 10 ಖರೀದಿ ಮಾಡಲಾಗುತ್ತಿದ್ದು, ಅವುಗಳ ಕಾರ್ಯಕ್ಷಮತೆ ಪರಿಶೀಲಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು. ಇವು ಮುಂಭಾಗದಲ್ಲಿ ಇಂಜಿನ್ ಇರುವ ಸಾಮಾನ್ಯ ಬಸ್ಸುಗಳಾಗಿವೆ. [ಗುಜರಿ ಸೇರಲಿವೆ ಟಾಟಾದ ಮಾರ್ಕೊಪೋಲೊ ಬಸ್!]
ಕೇಂದ್ರ ಸರ್ಕಾರ ಬಸ್ ಖರೀದಿಗಾಗಿ ಶೇ 50ರಷ್ಟು ಅನುದಾನವನ್ನು ನೀಡಲಿದೆ. ಉಳಿದ ಪಾಲನ್ನು ರಾಜ್ಯ ಸರ್ಕಾರ ಪಾವತಿ ಮಾಡಿ ಖರೀದಿ ಮಾಡಲಿದೆ. ಪ್ರತಿ ಬಸ್ ಬೆಲೆ 38.05 ಲಕ್ಷವಾಗಿದೆ. ಜಿಪಿಎಸ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ವ್ಯವಸ್ಥೆ ಈ ಬಸ್ಸುಗಳಲ್ಲಿದೆ.
ಬಸ್ ಖರೀದಿಗೆ ರಾಜ್ಯ ಸರ್ಕಾರ ಕರೆದಿದ್ದ ಟೆಂಡರ್ನಲ್ಲಿ ಅಶೋಕ್ ಲೈಲ್ಯಾಂಡ್, ಟಾಟಾ ಕಂಪನಿಗಳು ಪಾಲ್ಗೊಂಡಿದ್ದವು. ಟಾಟಾ ಅತಿ ಕಡಿಮೆ ದರ ದಾಖಲಿಸಿದ್ದ ಕಾರಣ ಅದಕ್ಕೆ ಟೆಂಡರ್ ನೀಡಲಾಗಿದೆ.
ಬಸ್ ಗುಜರಿಗೆ ಹಾಕಲಾಗಿತ್ತು : ಸಾರಿಗೆ ಸಂಸ್ಥೆಗಳ ನಷ್ಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾರ್ಕೊಪೋಲೊ ಬಸ್ಸುಗಳನ್ನು ಗುಜರಿಗೆ ಹಾಕಲು ಸಚಿವ ಸಂಪುಟ ಸಭೆಯಲ್ಲಿ ಕೆಲವು ದಿನಗಳ ಹಿಂದೆ ಒಪ್ಪಿಗೆ ನೀಡಲಾಗಿತ್ತು. ಬೆಂಗಳೂರು ಮತ್ತು ಮೈಸೂರು ನಗರ ಸೇರಿ ಒಟ್ಟು 142 ಮಾರ್ಕೊಪೋಲೊ ಬಸ್ಸುಗಳಿದ್ದು ಇವು ಟಾಟಾ ಕಂಪನಿಗೆ ಸೇರಿದ್ದವು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications