ಗುಜರಿ ಸೇರಲಿವೆ ನಷ್ಟ ಮಾಡುವ ಮಾರ್ಕೊಪೋಲೊ ಬಸ್!
ಬೆಂಗಳೂರು, ಜ. 10 : ಸಾರಿಗೆ ಸಂಸ್ಥೆಗಳ ನಷ್ಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾರ್ಕೊಪೋಲೊ ಬಸ್ಸುಗಳನ್ನು ಗುಜರಿಗೆ ಹಾಕಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಬೆಂಗಳೂರು ಮತ್ತು ಮೈಸೂರು ನಗರ ಸೇರಿ ಒಟ್ಟು 142 ಮಾರ್ಕೊಪೋಲೊ ಬಸ್ಗಳು ಸಂಚರಿಸುತ್ತಿವೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಮೈಸೂರು ನಗರ ಸಾರಿಗೆಯಲ್ಲಿ ಸಂಚರಿಸುತ್ತಿರುವ ಮಾರ್ಕೊಪೋಲೊ ಬಸ್ಸುಗಳನ್ನು ಗುಜರಿಗೆ ಹಾಕಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. [ಸಾರಿಗೆ ಸಂಸ್ಥೆಗಳ ನಷ್ಟ, ಎಚ್ಡಿಕೆ ಪ್ರಶ್ನೆಗಳು]

2009ರಲ್ಲಿ ಬಿಎಂಟಿಸಿಗಾಗಿ 98 ಹವಾನಿಯಂತ್ರಿತ ಮಾರ್ಕೊಪೋಲೊ ಬಸ್ ಮತ್ತು ಮೈಸೂರಿನಲ್ಲಿ 44 ಹವಾನಿಯಂತ್ರಿತವಲ್ಲದ ಬಸ್ಸುಗಳನ್ನು ಖರೀದಿ ಮಾಡಲಾಗಿತ್ತು. ಸದ್ಯ ಇವುಗಳ ನಿರ್ವಹಣಾ ವೆಚ್ಚವೇ ಅಧಿಕವಾಗಿರುವ ಹಿನ್ನಲೆಯಲ್ಲಿ ಅವುಗಳನ್ನು ಗುಜರಿಗೆ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ. [ಸಚಿವ ಸಂಪುಟ ಸಭೆಯ ತೀರ್ಮಾನಗಳು]
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಜೆನರ್ಮ್ ಯೋಜನೆಯಡಿ 31 ಲಕ್ಷ ರೂ. ನೀಡಿ ಪ್ರತಿ ಮಾರ್ಕೊಪೋಲೊ ಬಸ್ ಖರೀದಿ ಮಾಡಲಾಗಿತ್ತು. ಈ ಬಸ್ಗಳಿಂದ ತಿಂಗಳಿಗೆ 1.56 ಕೋಟಿ ನಷ್ಟ ಆಗುತ್ತಿದೆ. ಆದ್ದರಿಂದ ಇವುಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮಾರ್ಕೊಪೋಲೊ ಬಸ್ಸುಗಳನ್ನು ಸಂಚಾರದಿಂದ ಹಿಂದಕ್ಕೆ ಪಡೆದು ಗುಜರಿಗೆ ಕಳುಹಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಸ್ಸುಗಳು ನಿತ್ಯವೂ ಕೆಟ್ಟು ನಿಲ್ಲುತ್ತಿವೆ. ತಾಂತ್ರಿಕ ಗುಣಮಟ್ಟವೂ ಉತ್ತಮವಾಗಿಲ್ಲ. ದುರಸ್ತಿ ಮಾಡಿ, ಸಂಚಾರಕ್ಕೆ ಬಿಟ್ಟರೂ ನಷ್ಟವಾಗಲಿದೆ ಎಂದು ತಿಳಿಸಿದರು.
ಖರೀದಿ ಏಕೆ : ಬೆಂಗಳೂರಿನ ರಸ್ತೆಗಳಿಗೆ ಮಾರ್ಕೊಪೋಪೊ ಬಸ್ಸುಗಳು ಸರಿ ಹೊಂದುವುದಿಲ್ಲ. ಆದರೂ ಏಕೆ ಖರೀದಿ ಮಾಡಲಾಗಿದೆ? ಎಂಬುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಜಯಚಂದ್ರ ಅವರು ಹೇಳಿದರು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications