ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್
ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಎಂಬ ಸಂಸ್ಥೆ ದೇಶದ 20 ಪ್ರಮುಖ ರಾಜ್ಯಗಳಲ್ಲಿ ಇತ್ತೀಚೆಗೆ ತಾನು ಸಮೀಕ್ಷಾ ವರದಿಯಲ್ಲಿ ಪ್ರಸ್ತಾಪ.
ನವದೆಹಲಿ, ಏಪ್ರಿಲ್ 28: ಮಾಧ್ಯಮ ಅಧ್ಯಯನ ಸಂಸ್ಥೆಯೊಂದು ದೇಶದಾದ್ಯಂತ ನಡೆಸಿರುವ ಸಮೀಕ್ಷೆಯಲ್ಲಿ ಕರ್ನಾಟಕ ದೇಶದ ಅತಿ ಭ್ರಷ್ಟ ರಾಜ್ಯವೆಂಬ ಕೆಟ್ಟ ಸಾಧನೆಗೆ ಪಾತ್ರವಾಗಿದೆ.
ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಎಂಬ ಸಂಸ್ಥೆ ದೇಶದ 20 ಪ್ರಮುಖ ರಾಜ್ಯಗಳಲ್ಲಿ ಇತ್ತೀಚೆಗೆ ತಾನು ಸಮೀಕ್ಷೆ ನಡೆಸಿದ್ದಾಗಿ ಹೇಳಿದೆ. ಎಲ್ಲಾ ರಾಜ್ಯಗಳಲ್ಲಿ ಗ್ರಾಮೀಣ ಹಾಗೂ ನಗರ ವಾಸಿಗಳು ಸೇರಿದಂತೆ ಸುಮಾರು 3 ಸಾವಿರ ವ್ಯಕ್ತಿಗಳನ್ನು ಸಮೀಕ್ಷೆಯ ವೇಳೆ ಸಂದರ್ಶಿಸಲಾಗಿದೆ ಎಂದು ತನ್ನ ಸಮೀಕ್ಷಾ ವರದಿಯಲ್ಲಿ ಸಂಸ್ಥೆ ಹೇಳಿಕೊಂಡಿದೆ.[ಲಂಚ ಸ್ವೀಕರಿಸುತ್ತಿದ್ದ ಚಿತ್ರದುರ್ಗದ ಸರ್ವೆ ಅಧಿಕಾರಿಯ ಬಂಧನ]

ಅದರಂತೆ, ಕರ್ನಾಟಕ ರಾಜ್ಯ ಅತ್ಯಂತ ಭ್ರಷ್ಟ ರಾಜ್ಯವೆಂಬ ಹಣೆಪಟ್ಟಿ ಗಳಿಸಿದ್ದು, ಆನಂತರದ ಸ್ಥಾನಗಳಲ್ಲಿ ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಿವೆ.
ಹಿಮಾಚಲ ಪ್ರದೇಶ, ಛತ್ತೀಸ್ ಗಢ ಹಾಗೂ ಕೇರಳ ರಾಜ್ಯಗಳು ಅತಿ ಕಡಿಮೆ ಭ್ರಷ್ಟಾಚಾರ ಇರುವ ರಾಜ್ಯಗಳೆಂದು ಪರಿಗಣಿಸಲ್ಪಟ್ಟಿವೆ.[ಎಸಿಬಿ ಬಲೆಗೆ ಬಿದ್ದ ಯಲಬುರ್ಗಾ ಪಟ್ಟಣ ಪಂಚಾಯತ್ ಅಧಿಕಾರಿಗಳು]
ಕರ್ನಾಟಕದಲ್ಲಿ ಶೇ. 75 ರಷ್ಟು ಜನರು ಯಾವುದೇ ಸರ್ಕಾರಿ ಕೆಲಸ, ಕಾರ್ಯಗಳನ್ನು ಮಾಡಿಸಲು ಮುಂದಾದಾಗ ಅವರು ಲಂಚ ಕೊಡಲೇಬೇಕಾದ ಪರಿಸ್ಥಿತಿಯಿದೆ ಎಂದು ದೂರಿದ್ದಾರೆ. ಆದರೆ, ಕಳೆದ ವರ್ಷಾಂತ್ಯಕ್ಕೆ ಕೇಂದ್ರ ಸರ್ಕಾರ ಕೈಗೊಂಡಿದ್ದ ಅಪನಗದೀಕರಣದಿಂದಾಗಿ ಭ್ರಷ್ಚಾಚಾರ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದೆ ಎಂದು ಜನರು ಪ್ರತಿಕ್ರಿಯಿಸಿರುವುದಾಗಿ ಸಂಸ್ಥೆ ಹೇಳಿದೆ.
ಸಮೀಕ್ಷೆ ನಡೆಸಲಾದ ಸುಮಾರು 20 ರಾಜ್ಯಗಳಲ್ಲಿ 2015ರ ಹೊತ್ತಿಗೆ ಹರಿದಾಡಿದ ಲಂಚದ ಪ್ರಮಾಣ ಒಟ್ಟು 20,500 ಕೋಟಿ ರು. ಆಗಿತ್ತು. ಆದರೆ, ಅಪನಗದೀಕರಣದಿಂದಾಗಿ 2017ರ ಆರಂಭದಿಂದ ಈವರೆಗೆ 6,350 ಕೋಟಿ ರು. ಮಾತ್ರ ಹರಿದಾಡಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.[ಸಮೀಕ್ಷಾ ವರದಿಗಾಗಿ ಇಲ್ಲಿ ಕ್ಲಿಕ್ಕಿಸಿ]
ಸಮೀಕ್ಷಾ ವರದಿಯಂತೆ, ಟಾಪ್ 5 ಲಂಚಕೋರ ರಾಜ್ಯಗಳ ಪಟ್ಟಿ ಇಲ್ಲಿದೆ.
1. ಕರ್ನಾಟಕ
2. ಆಂಧ್ರ ಪ್ರದೇಶ
3. ತಮಿಳುನಾಡು
4. ಮಹಾರಾಷ್ಟ್ರ
5. ಜಮ್ಮು ಮತ್ತು ಕಾಶ್ಮೀರ
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications