ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್
ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಎಂಬ ಸಂಸ್ಥೆ ದೇಶದ 20 ಪ್ರಮುಖ ರಾಜ್ಯಗಳಲ್ಲಿ ಇತ್ತೀಚೆಗೆ ತಾನು ಸಮೀಕ್ಷಾ ವರದಿಯಲ್ಲಿ ಪ್ರಸ್ತಾಪ.
ನವದೆಹಲಿ, ಏಪ್ರಿಲ್ 28: ಮಾಧ್ಯಮ ಅಧ್ಯಯನ ಸಂಸ್ಥೆಯೊಂದು ದೇಶದಾದ್ಯಂತ ನಡೆಸಿರುವ ಸಮೀಕ್ಷೆಯಲ್ಲಿ ಕರ್ನಾಟಕ ದೇಶದ ಅತಿ ಭ್ರಷ್ಟ ರಾಜ್ಯವೆಂಬ ಕೆಟ್ಟ ಸಾಧನೆಗೆ ಪಾತ್ರವಾಗಿದೆ.
ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಎಂಬ ಸಂಸ್ಥೆ ದೇಶದ 20 ಪ್ರಮುಖ ರಾಜ್ಯಗಳಲ್ಲಿ ಇತ್ತೀಚೆಗೆ ತಾನು ಸಮೀಕ್ಷೆ ನಡೆಸಿದ್ದಾಗಿ ಹೇಳಿದೆ. ಎಲ್ಲಾ ರಾಜ್ಯಗಳಲ್ಲಿ ಗ್ರಾಮೀಣ ಹಾಗೂ ನಗರ ವಾಸಿಗಳು ಸೇರಿದಂತೆ ಸುಮಾರು 3 ಸಾವಿರ ವ್ಯಕ್ತಿಗಳನ್ನು ಸಮೀಕ್ಷೆಯ ವೇಳೆ ಸಂದರ್ಶಿಸಲಾಗಿದೆ ಎಂದು ತನ್ನ ಸಮೀಕ್ಷಾ ವರದಿಯಲ್ಲಿ ಸಂಸ್ಥೆ ಹೇಳಿಕೊಂಡಿದೆ.[ಲಂಚ ಸ್ವೀಕರಿಸುತ್ತಿದ್ದ ಚಿತ್ರದುರ್ಗದ ಸರ್ವೆ ಅಧಿಕಾರಿಯ ಬಂಧನ]

ಅದರಂತೆ, ಕರ್ನಾಟಕ ರಾಜ್ಯ ಅತ್ಯಂತ ಭ್ರಷ್ಟ ರಾಜ್ಯವೆಂಬ ಹಣೆಪಟ್ಟಿ ಗಳಿಸಿದ್ದು, ಆನಂತರದ ಸ್ಥಾನಗಳಲ್ಲಿ ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಿವೆ.
ಹಿಮಾಚಲ ಪ್ರದೇಶ, ಛತ್ತೀಸ್ ಗಢ ಹಾಗೂ ಕೇರಳ ರಾಜ್ಯಗಳು ಅತಿ ಕಡಿಮೆ ಭ್ರಷ್ಟಾಚಾರ ಇರುವ ರಾಜ್ಯಗಳೆಂದು ಪರಿಗಣಿಸಲ್ಪಟ್ಟಿವೆ.[ಎಸಿಬಿ ಬಲೆಗೆ ಬಿದ್ದ ಯಲಬುರ್ಗಾ ಪಟ್ಟಣ ಪಂಚಾಯತ್ ಅಧಿಕಾರಿಗಳು]
ಕರ್ನಾಟಕದಲ್ಲಿ ಶೇ. 75 ರಷ್ಟು ಜನರು ಯಾವುದೇ ಸರ್ಕಾರಿ ಕೆಲಸ, ಕಾರ್ಯಗಳನ್ನು ಮಾಡಿಸಲು ಮುಂದಾದಾಗ ಅವರು ಲಂಚ ಕೊಡಲೇಬೇಕಾದ ಪರಿಸ್ಥಿತಿಯಿದೆ ಎಂದು ದೂರಿದ್ದಾರೆ. ಆದರೆ, ಕಳೆದ ವರ್ಷಾಂತ್ಯಕ್ಕೆ ಕೇಂದ್ರ ಸರ್ಕಾರ ಕೈಗೊಂಡಿದ್ದ ಅಪನಗದೀಕರಣದಿಂದಾಗಿ ಭ್ರಷ್ಚಾಚಾರ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದೆ ಎಂದು ಜನರು ಪ್ರತಿಕ್ರಿಯಿಸಿರುವುದಾಗಿ ಸಂಸ್ಥೆ ಹೇಳಿದೆ.
ಸಮೀಕ್ಷೆ ನಡೆಸಲಾದ ಸುಮಾರು 20 ರಾಜ್ಯಗಳಲ್ಲಿ 2015ರ ಹೊತ್ತಿಗೆ ಹರಿದಾಡಿದ ಲಂಚದ ಪ್ರಮಾಣ ಒಟ್ಟು 20,500 ಕೋಟಿ ರು. ಆಗಿತ್ತು. ಆದರೆ, ಅಪನಗದೀಕರಣದಿಂದಾಗಿ 2017ರ ಆರಂಭದಿಂದ ಈವರೆಗೆ 6,350 ಕೋಟಿ ರು. ಮಾತ್ರ ಹರಿದಾಡಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.[ಸಮೀಕ್ಷಾ ವರದಿಗಾಗಿ ಇಲ್ಲಿ ಕ್ಲಿಕ್ಕಿಸಿ]
ಸಮೀಕ್ಷಾ ವರದಿಯಂತೆ, ಟಾಪ್ 5 ಲಂಚಕೋರ ರಾಜ್ಯಗಳ ಪಟ್ಟಿ ಇಲ್ಲಿದೆ.
1. ಕರ್ನಾಟಕ
2. ಆಂಧ್ರ ಪ್ರದೇಶ
3. ತಮಿಳುನಾಡು
4. ಮಹಾರಾಷ್ಟ್ರ
5. ಜಮ್ಮು ಮತ್ತು ಕಾಶ್ಮೀರ
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications