ದಾಂಡೇಲಿ ಕವಳ ಗುಹೆ ಕಾರ್ಪೋರೇಟ್ ಸಂಸ್ಥೆಗೆ ದತ್ತು
ಬೆಂಗಳೂರು, ಆಗಸ್ಟ್. 07: ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ರಾಜ್ಯ ಸರ್ಕಾರ ಕಾರ್ಪೋರೇಟ್ ಸಂಸ್ಥೆಗಳ ಸಹಭಾಗಿತ್ವವನ್ನು ಪಡೆದುಕೊಳ್ಳುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಕವಳ ಗುಹೆಗಳ ಪ್ರದೇಶ ನಿರ್ವಹಣೆ ಜವಾಬ್ದಾರಿಯನ್ನು ಬೆಂಗಳೂರಿನ ಮೆ. ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್, ಲಿಮಿಟೆಡ್ ಕಂಪನಿಗೆ 5 ವರ್ಷಗಳ ಅವಧಿಗೆ ದತ್ತು ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ.[ರಾಜ್ಯದ ಪ್ರವಾಸಿ ತಾಣಗಳಿಗೆ ಕಾರ್ಪೊರೇಟ್ ಶ್ರೀರಕ್ಷೆ]
ಈ ದತ್ತು ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯ ಕವಳ ಗುಹೆ ಪ್ರವಾಸಿ ತಾಣಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ, ಬದಲಾಗಿ ಸದರಿ ಪ್ರವಾಸಿ ತಾಣದಲ್ಲಿ ಪ್ರವಾಸಿಗರಿಗೆ ಅವಶ್ಯಕವಾಗಿರುವ ಸೌಲಭ್ಯಗಳನ್ನು ಒದಗಿಸುವುದು ಮಾತ್ರ ಈ ಯೋಜನೆಯ ಉದ್ದೇಶವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.[ದಾಂಡೇಲಿ ಕುರಿತು ಸಮಗ್ರ ಮಾಹಿತಿ]
ಕರಾರು ಏನು ಹೇಳುತ್ತದೆ?
* ಕಾರ್ಪೊರೇಟ್ ಸಂಸ್ಥೆಗಳು ರಾಜ್ಯದ ಪ್ರವಾಸಿ ತಾಣಗಳನ್ನು ದತ್ತು ತೆಗೆದುಕೊಂಡು ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ನಿರ್ವಹಿಸಲಿವೆ.
* ಕರಾರಿನ ಅನ್ವಯ ದತ್ತು ಪಡೆದ ಸಂಸ್ಥೆಯು ದತ್ತು ಪಡೆದ ಪ್ರದೇಶದಲ್ಲಿ ಸಫಾರಿ ಸ್ವಾಗತ ಕಮಾನು, ಮಾರ್ಗಸೂಚಿ ಫಲಕಗಳು, ನಾಲ್ಕು ಪ್ರವೇಶ ದ್ವಾರಗಳ ರಸ್ತೆಗಳಲ್ಲಿ ಕಮಾನು ನಿರ್ಮಾಣ, ಅಡಿಟೋರಿಯಂ ಅಭಿವೃದ್ಧಿ ಮಾಡಬೇಕು
* ವಿದ್ಯಾರ್ಥಿಗಳಿಗೆ ಅರಿವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಕ್ಕೆ ಹಾಗೂ ನಿರ್ವಹಿಸುವುದಕ್ಕೂ ಒತ್ತು ನೀಡಬೇಕು
* ದತ್ತು ಪಡೆದ ಸಂಸ್ಥೆಯು ಆ ಪ್ರದೇಶದಲ್ಲಿ ಯಾವುದೇ ಹೆಚ್ಚುವರಿ ಕಟ್ಟಡಗಳನ್ನು ಅಥವಾ ಗುಹೆಗಳಿಗೆ ಧಕ್ಕೆ ತರುವಂತಹ ಯಾವುದೇ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ.
* ಯಾವುದೇ ಚಟುವಟಿಕೆಗಳನ್ನು ನಡೆಸಬೇಕಾದಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ













Click it and Unblock the Notifications