KSRTC: ಮಾರ್ಚ್ 7ಕ್ಕೆ ಸಾರಿಗೆ ನೌಕರರ ಜತೆ ರಾಮಲಿಂಗಾ ರೆಡ್ಡಿ ಮಹತ್ವದ ಸಭೆ
ಬೆಂಗಳೂರು, ಮಾರ್ಚ್ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸೇರಿದಂತೆ ಒಟ್ಟು ನಾಲ್ಕು ಸಾರಿಗೆ ನಿಗಮದ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸುತ್ತಿದ್ದಾರೆ. ಇದರ ಬೆನ್ನಲ್ಲೆ ಸರ್ಕಾರ ಕೊಟ್ಟ ಭರವಸೆಯಂತೆ ನೌಕರರ ಜತೆ ಮಾತುಕತೆಗೆ ಮುಂದಾಗಿದೆ. ಈ ಸಂಬಂಧ ನಾಳೆ ಗುರುವಾರ ಮಾರ್ಚ್ 7ರಂದು ಮಹತ್ವದ ಸಭೆ ಕರೆದಿದೆ.
ಕರ್ನಾಟಕ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಡೆಯಲಿದೆ. ಈ ಹಿಂದೆ ವೇತನ ತಾರತಮ್ಯ ಸರಿಪಡಿಸಬೇಕು, ಸಮಾನ ವೇತನ ನೀಡಬೇಕು, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ಕೈಗೊಂಡಿದ್ದ ಎಲ್ಲ ಸಾರಿಗೆ ನೌಕರರ ಸಂಘಟನೆಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

ಇದೇ ವಿಚಾರವಾಗಿ 2020 ಮತ್ತು 2021ರಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಆಗ ಹಲವರ ಮೇಲೆ ಕೇಸು ದಾಖಲಾಗಿದ್ದು, ಸೇವೆಯಿಂದ ಅಮಾನತು, ವಜಾದಂತಹ ಶಿಕ್ಷೆ ಅನುಭವಿಸಿದ್ದರು. ಅಂದು ಇದ್ದ ಬಿಜೆಪಿ ಸರ್ಕಾರ ನೌಕರರ ಮೂಗಿಗೆ ತುಪ್ಪ ಸವರಿತ್ತು.
ಬೆಂಗಳೂರು ಚಲೋ ಘೋಷಿಸಿದ್ದ ನೌಕರರು
ಬೇಡಿಕೆ ಈಡೇರದ ಕಾರಣ ಸಾರಿಗೆ ಎಲ್ಲ ನೌಕರರು ಮತ್ತೆ ಪ್ರತಿಭಟನೆಗೆ ಚಿಂತನೆ ನಡೆಸಿದ್ದಾರೆ. ಎಲ್ಲ ನಿಗಮಗಳ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಮುಖಸ್ಥರು ಇದೇ ಮಾರ್ಚ್ 4ರಂದು ಬೆಂಗಳೂರು ಚಲೋ, ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಹೇಳಿದ್ದರು. ಆದರೆ ಕಾರಣಾಂತರಗಳಿಂದ ಅವು ನಡೆದಿಲ್ಲ.
ಇದೆಲ್ಲ ಬೆಳವಣಿಗೆ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆಯು ಈ ಹಿಂದೆ ತಾನು ಬೇಡಿಕೆ ಈಡೇರಿಕೆಗಾಗಿ ನೌಕರರ ಜೊತೆಗೆ ಮಾತುಕತೆ ನಡೆಸುವುದಾಗಿ ತಿಳಿಸಿತ್ತು. ಅದರಂತೆ ಸಾರಿಗೆ ಸಚಿವರು ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿದೆ. ಈ ಮೂಲಕ ಸಚಿವರು ನೌಕರರ ಕುಂದು ಕೊರತೆ ಆಲಿಸಲಿದ್ದಾರೆ. ಇದು ಪ್ರಾಥಮಿಕ ಹಂತದ ಸಭೆಯಾಗಿರಲಿದ್ದು, ಇಲ್ಲಿ ಮಹತ್ವದ ನೀರ್ಣಯ ಕೈಗೊಳ್ಳುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಸಭೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KKRTC) ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ನೌಕರರ ಮುಖ್ಯಸ್ಥರಿಗೆ, ವಿವಿಧ ನೌಕರರ ವೇದಿಕೆ, ಸಂಘಟನೆಗಳ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಿ ಸಭೆ ಸೂಚನಾ ಪತ್ರ ಹೊರಡಿಸಲಾಗಿದೆ.
ಶಿವರಾತ್ರಿಗೆ ವಿಶೇಷ ಬಸ್ ವ್ಯವಸ್ಥೆ
ಮಾರ್ಚ್ 8ರಂದು ಶಿವರಾತ್ರಿ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮಾರ್ಚ್ 7ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳನ್ನು ಬಿಡಲಿದೆ. ಇದರಿಂದ ಬೆಂಗಳೂರಿನಿಂದ ರಾಜ್ಯದ ಬೇರೆ ಬೇರೆ ಸ್ಥಳಗಳಿಗೆ ತೆರಳುವ ನೌಕರರಿಗೆ ಅನುಕೂಲವಾಗಲಿದೆ.
ಬೆಂಗಳೂರಿನಿಂದ ಹೈದರಾಬಾದ್, ತೆಲಂಗಾಣ, ಮಂಗಳೂರು, ಕಾರವಾರ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು, ಕೊಪ್ಪಳ್ಳ, ಕಲಬುರಗಿ, ಶೃಂಗೇರಿ, ಹೊರನಾಡು, ದಾವಣಗೆರೆ, ಧಾರವಾಡ, ಗೋಕರ್ಣ, ಶಿರಸಿ, ಯಾದಗಿರಿ, ತಿರುಪತಿ ಸೇರಿದಂತೆ ವಿವಿಧೆಡೆ ಈ ಬಸ್ಗಳು ಮೂರು ದಿನ ಸೇವೆ ನೀಡಲಿವೆ ಎಂದು KSRTC ಮಾಹಿತಿ ನೀಡಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications