ಕರ್ನಾಟಕದಲ್ಲಿ ಓಡಾಡುವ ಓಲಾಕ್ಕೆ ಸಿಕ್ತು ಪರವಾನಗಿ
ಬೆಂಗಳೂರು, ಜೂನ್, 22: ಕ್ಯಾಬ್ ಸೇವೆಯಲ್ಲಿ ಹೆಸರು ಮಾಡಿದ ಓಲಾಕ್ಕೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಪರವಾನಗಿಯನ್ನು ನೀಡಿದೆ. 2016 ರ ಸಾರಿಗೆ ನಿಯಮಗಳ ಅನ್ವಯ ಪರವಾನಗಿಯನ್ನು ನೀಡಿದೆ.
ನಾವು ಓಲಾಕ್ಕೆ ಪರವಾನಗಿ ನೀಡಿದ್ದು ಇನ್ನು ಮುಂದೆ ಕಾನೂನು ಬದ್ಧವಾಗಿಯೇ ಸೇವೆ ನೀಡುವಂತೆ ಸೂಚನೆ ನೀಡಿದ್ದೇವೆ ಎಂದು ಸಾರಿಗೆ ಇಲಾಖೆ ಆಯುಕ್ತ ರಾಮೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.[ಆನ್ಲೈನ್ ಟ್ಯಾಕ್ಸಿ ಸಂಸ್ಥೆಗಳಿಗೆ ರಾಜ್ಯ ಸರ್ಕಾರದ ಮೂಗುದಾರ]

ಆದರೆ ಮತ್ತೊಂದು ಟ್ಯಾಕ್ಸಿ ಸೇವೆ ಉಬರ್ ಗೆ ಇನ್ನು ಪರವಾನಗಿ ಸಿಕ್ಕಿಲ್ಲ. ಲೈಸನ್ಸ್ ಸಿಕ್ಕಿದ್ದರೂ ಸಹ ಓಲಾ ಈ ಬಗ್ಗೆ ಯಾವ ಹೇಳಿಕೆಯನ್ನು ನೀಡಿಲ್ಲ. ಏಪ್ರಿಲ್ ತಿಂಗಳಿನಲ್ಲಿ ಹೈ ಕೋರ್ಟ್ ಆದೇಶದ ಅನ್ವಯ ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ವಿವಿಧ ನಿಯಮಾವಳಿಗಳನ್ನು ಬಿಡುಗಡೆ ಮಾಡಿತ್ತು. ಓಲಾ ಮತ್ತು ಉಬರ್ ಚಾಲಕರು ಮತ್ತು ಪಡೆದುಕೊಳ್ಳುತ್ತಿರುವ ಬಾಡಿಗೆ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆ ಹೆಜ್ಜೆ ಇಟ್ಟಿತ್ತು.[ಟ್ಯಾಕ್ಸಿ ಚಾಲಕರಿಗೆ ಪೊಲೀಸ್ ಇಲಾಖೆ ಸೂಚನೆಗಳೇನು?]
ಚಾಲಕರು ಕನ್ನಡ ಬಲ್ಲವರಾಗಿರಬೇಕು, ಚಾಲಕರ ವಿವರಗಳುಳ್ಳ ಫಲಕವನ್ನು ಕಡ್ಡಾಯವಾಗಿ ಅಳವಡಿಸಿರಬೇಕು ಎಂಬ ನಿಯಮಗಳನ್ನು ಹೇಳಲಾಗಿತ್ತು.
ತಂತ್ರಜ್ಞಾನ ಮತ್ತು ಮೊಬೈಲ್ ಆಧಾರಿತವಾಗಿ ಕೆಲಸ ಮಾಡುವ ಟ್ಯಾಕ್ಸಿ ಸೇವೆಗಳನ್ನು ಕಾನೂನಿನ ಅಡಿಯಲ್ಲಿ ತರುವ ಕೆಲಸ ಮಾಡಲು ಮುಂದಾದ ಸರ್ಕಾರಕ್ಕೆ ಆರಂಭಿಕ ಜಯ ಸಹ ಸಿಕ್ಕಂತೆ ಆಗಿದೆ. ಮೊಬೈಲ್ ಅಪ್ಲಿಕೇಶನ್ ಆಧಾರದಲ್ಲಿ ಕೆಲಸ ಮಾಡುತ್ತಿರುವ ಇನ್ನುಳಿದ ಸೇವೆಗಳನ್ನು ಸರ್ಕಾರ ಸದ್ಯವೇ ಕಾನೂನಿನ ಅಡಿಯಲ್ಲಿ ತರಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications