ಕೆಎಸ್ಆರ್ಟಿಸಿ ಪ್ರಯಾಣ ದರ ಇಳಿಕೆ, ಸಚಿವರ ಸುಳಿವು
ಬೆಳಗಾವಿ, ಡಿ.17 : ಪ್ರತಿಪಕ್ಷ ಮತ್ತು ಜನರ ಒತ್ತಾಯಕ್ಕೆ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವನ್ನು ಇಳಿಸಲು ಚಿಂತನೆ ನಡೆಸಿದೆ. ಇಂದು ಸಂಜೆ ಅಥವ ಗುರುವಾರ ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಪ್ರಯಾಣ ದರ ಎಷ್ಟು ಕಡಿಮೆಯಾಗಲಿದೆ? ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಕಳೆದ ಮೂರು-ನಾಲ್ಕು ತಿಂಗಳಲ್ಲಿ ಡೀಸೆಲ್ ದರ ಒಟ್ಟಾರೆ 8 ರೂ. ಇಳಿಕೆಯಾಗಿದ್ದರೂ ಸರ್ಕಾರ ಬಸ್ ಪ್ರಯಾಣ ದರ ಕಡಿಮೆ ಮಾಡಿರಲಿಲ್ಲ. ಚಾಲಕರ ವೇತನ ಹೆಚ್ಚಳ, ಭತ್ಯೆ ಹೆಸರಿನಲ್ಲಿ ನಷ್ಟ ಎಂದು ಹೇಳಿದ್ದ ಇಲಾಖೆ ದರ ಕಡಿಮೆ ಮಾಡಲು ಸಾಧ್ಯವಿಲ್ಲವೆಂದು ಹೇಳಿ ಜನರ ಆಕ್ರೋಶಕ್ಕೆ ತುತ್ತಾಗಿತ್ತು. [ಬಸ್ ದರ ಇಳಿಕೆ ಅಸಾಧ್ಯ, ಸಚಿವರು ನೀಡಿದ ಕಾರಣಗಳು]

ಸದ್ಯ, ಜನರ ಮತ್ತು ಪ್ರತಿಪಕ್ಷಗಳ ಒತ್ತಾಯಕ್ಕೆ ಸರ್ಕಾರ ಮಣಿದಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ಪ್ರಯಾಣ ದರ ಎಷ್ಟು ಇಳಿಕೆ ಮಾಡಬಹುದು? ಎನ್ನುವುದರ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. [ಮತ್ತೆ ಇಳಿಯಿತು ಡೀಸೆಲ್, ಪೆಟ್ರೋಲ್ ಬೆಲೆ]
ಒಂದೆರಡು ದಿನಗಳಲ್ಲಿ ಪ್ರಸ್ತಾವನೆ ಸಚಿವರಿಗೆ ಸಲ್ಲಿಕೆಯಾಗಲಿದ್ದು, ನಂತರ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ. ಪ್ರಯಾಣ ದರ ಇಳಿಸುವ ಬೇಡಿಕೆಯನ್ನು ಸೋಮವಾರ ವಿಧಾನ ಪರಿಷತ್ನಲ್ಲಿ ಸಿ.ಎಂ ಸಿದ್ದರಾಮಯ್ಯ, ಸಚಿವ ರಾಮಲಿಂಗಾ ರೆಡ್ಡಿ ತಳ್ಳಿ ಹಾಕಿದ್ದರು. ಆದರೆ, ಮಂಗಳವಾರ ಸರ್ಕಾರ ಈ ವಿಚಾರದಲ್ಲಿ ಚಿಂತನೆ ಆರಂಭಿಸಿದೆ.
ಬಿಜೆಪಿಗೆ ಟಾಂಗ್ : ಪ್ರಯಾಣ ದರವನ್ನು ಕಡಿಮೆ ಮಾಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದ ಪ್ರತಿಪಕ್ಷ ಬಿಜೆಪಿಗೆ ಟಾಂಗ್ ನೀಡಿದ್ದ ಸಚಿವರು, ಪ್ರಧಾನಿ ಮೋದಿ ರಾಜ್ಯದಲ್ಲಿ ಬಸ್ ಪ್ರಯಾಣ ದರ ಕಡಿಮೆ ಮಾಡಲಿ. ನಂತರ ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನ ಕಡಿಮೆ ಮಾಡೋಣ ಹೇಳಿದ್ದರು.
ರಾಮಲಿಂಗಾ ರೆಡ್ಡಿ ಅವರ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದರು, ದೇಶದಲ್ಲಿ ಎಲ್ಲಿಯೂ ಬಸ್ ಪ್ರಯಾಣ ದರ ಇಳಿಕೆಯಾಗಿಲ್ಲ. ರಾಜ್ಯದಲ್ಲೂ ಬಸ್ ಪ್ರಯಾಣ ದರ ಇಳಿಕೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ ಈಗ ಸರ್ಕಾರ ಯೂ-ಟರ್ನ್ ತೆಗೆದುಕೊಂಡಿದೆ.
-
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ











Click it and Unblock the Notifications