ಚೌಕಾಶಿಗೆ ಇಳಿದರೇ ಕೋಡಿಹಳ್ಳಿ, ಸಾರಿಗೆ ನೌಕರರ ಮುಷ್ಕರ ಸದ್ಯದಲ್ಲೇ ಅಂತ್ಯ?
ಬೆಂಗಳೂರು, ಏಪ್ರಿಲ್ 20: ಸಾರಿಗೆ ನೌಕರ ಮುಷ್ಕರ ಹದಿನಾಲ್ಕನೇ ದಿನಕ್ಕೆ ಕಾಲಿಡುತ್ತಿರುವುದು ಒಂದು ಕಡೆಯಾದರೆ, ಕೆಲಸಕ್ಕೆ ಹಾಜರಾಗುತ್ತಿರುವವರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ.
ಕೆಲಸಕ್ಕೆ ಹಾಜರಾದರೆ ಮಾತ್ರ ಮಾತುಕತೆ ಎನ್ನುವ ತನ್ನ ಕಠಿಣ ನಿಲುವಿನಿಂದ ಹಿಂದಕ್ಕೆ ಸರಿಯದ ಸರಕಾರದ ವಿರುದ್ದ ಆರಂಭದಲ್ಲಿ ಸೆಡ್ಡು ಹೊಡೆದಿದ್ದ ಮುಖಂಡರುಗಳು ಸಚಿವರನ್ನು ಆಹ್ವಾನವಿಲ್ಲದೆಯೇ ಭೇಟಿಯಾಗುತ್ತಿದ್ದಾರೆ.
ಸಹದ್ಯೋಗಿಗಳ ಕೆಲಸದಿಂದ ವಜಾ, ಅಮಾನತು, ವರ್ಗಾವಣೆ ಕ್ರಮದಿಂದ ಸಂಸ್ಥೆಯ ನೌಕರರಿಗೆ ಭಯ ಆರಂಭವಾಗಿದ್ದು, ತಮ್ಮ ಮುಖಂಡರುಗಳ ಮಾತಿಗೆ ಸೊಪ್ಪು ಹಾಕದೇ ಕೆಲಸಕ್ಕೆ ಹಾಜರಾಗುತ್ತಿದ್ದಾರೆ.
ಬಸ್ ಮೇಲೆ ಕಲ್ಲು ತೂರಾಟ ಮತ್ತು ಇದರಿಂದ ಇಬ್ಬರು ಸಂಸ್ಥೆಯ ನೌಕರರ ಸಾವಿನಿಂದ ನೌಕರರ ಮುಷ್ಕರಕ್ಕೆ ವ್ಯಾಪಕ ವಿರೋಧವೂ ಆರಂಭವಾಗಿತ್ತು. ಪ್ರಯಾಣಿಕರು ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಶಾಪ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು. ಬೊಮ್ಮಾಯಿ ಭೇಟಿಯಾಗಿ ಸುಳ್ಳು ಹೇಳಿದರೇ ಕೋಡಿಹಳ್ಳಿ ಚಂದ್ರಶೇಖರ್..

ಬೊಮ್ಮಾಯಿ ಭೇಟಿಯಾದ ಕೋಡಿಹಳ್ಳಿ ಚಂದ್ರಶೇಖರ್
ಸೋಮವಾರದಂದು (ಏ 19) ಕೋಡಿಹಳ್ಳಿ ಚಂದ್ರಶೇಖರ್ ಅವರು ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ, ಮೊದಲು ಕೆಲಸಕ್ಕೆ ಹಾಜರಾಗಿ, ನೀವು ಮುಷ್ಕರ ನಡೆಸುತ್ತಿರುವ ಸಮಯ ಸರಿಯಿಲ್ಲ. ಕೊರೊನಾ ಮಿತಿಮೀರಿ ಹೋಗುತ್ತಿರುವ ಸಂದರ್ಭದಲ್ಲಿ ಮುಷ್ಕರ ಬೇಡ ಎಂದು ಬೊಮ್ಮಾಯಿ, ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದರು.

ಬೊಮ್ಮಾಯಿ ಮತ್ತು ಸವದಿ ಸ್ಪಷ್ಟನೆ
ಆದರೆ, ಬೊಮ್ಮಾಯಿ ಜೊತೆಗಿನ ಮಾತುಕತೆಯ ನಂತರ ನೌಕರರಿಗೆ ಶೇ.10ರಷ್ಟು ವೇತನ ಹೆಚ್ಚಾಗಲಿದೆ. ಆರನೇ ವೇತನ ಆಯೋಗದ ಶಿಫಾರಸಿನ ಬಗ್ಗೆ ಸಿಎಂ ಮತ್ತು ಸಾರಿಗೆ ಸಚಿವರ ಜೊತೆ ಮಾತುಕತೆ ನಡೆಸಿ, ಜಾರಿಗೊಳಿಸುವ ಬಗ್ಗೆ ಬೊಮ್ಮಾಯಿಯವರು ಭರವಸೆ ನೀಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಕರಪತ್ರವನ್ನು ಹಂಚಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಬೊಮ್ಮಾಯಿ ಮತ್ತು ಸವದಿ ಸ್ಪಷ್ಟನೆಯನ್ನು ನೀಡಿ, "ಅಂತಹ ಯಾವ ಭರವಸೆಯನ್ನು ಸರಕಾರ ನೀಡಿಲ್ಲ"ಎಂದಿದ್ದಾರೆ.

ಕೆಲಸಕ್ಕೂ ತೊಂದರೆ ಮಾಡಿಕೊಳ್ಳಬೇಕಾದೀತು ಎನ್ನುವ ಭೀತಿ
ಸರಕಾರ ತಮ್ಮ ನಿಲುವಿನಿಂದ ಹಿಂದಕ್ಕೆ ಸರಿಯದೇ ಇರುವುದರಿಂದ ಜಗ್ಗಿದಂತೆ ಕಂಡು ಬಂದಿರುವ ನೌಕರರ ಸಂಘಟನೆಯ ಮುಖಂಡರು ಸಚಿವರುಗಳನ್ನು ತಾವೇ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಮುಖಂಡರ ಮಾತನ್ನು ಕೇಳಿದರೆ ಇರುವ ಕೆಲಸಕ್ಕೂ ತೊಂದರೆ ಮಾಡಿಕೊಳ್ಳಬೇಕಾದೀತು ಎನ್ನುವ ಭೀತಿ ನೌಕರರಿಗೆ ಕಾಡಲಾರಂಭಿಸಿರುವ ಸೂಚಕವಂತೆ ಹಾಜರಾತಿಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
Recommended Video

ಸಾರಿಗೆ ನೌಕರರ ಮುಷ್ಕರ ಸದ್ಯದಲ್ಲೇ ಅಂತ್ಯ?
ಇದಕ್ಕೆ ಪೂರಕ ಎನ್ನುವಂತೆ, ನೌಕರರ ಮುಷ್ಕರ ಸದ್ಯದಲ್ಲೇ ಮುಕ್ತಾಯಗೊಳ್ಳಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆರನೇ ವೇತನ ಆಯೋಗವೇ ಮುಖ್ಯ ಎನ್ನುತ್ತಿದ್ದ ಕೋಡಿಹಳ್ಳಿಯವರು, ಮೂರು ಆಯ್ಕೆಗಳಲ್ಲಿ ಒಂದನ್ನಾದರೂ ಈಡೇರಿಸಲಿ ಎನ್ನುವ ಚೌಕಾಶಿಗೆ ಇಳಿದಿದ್ದಾರೆ. ಸಚಿವರು ಸಿಎಂ ಜೊತೆ ಮಾತುಕತೆ ನಡೆಸುತ್ತೇನೆ ಎಂದಿದ್ದಾರೆ, ನೋಡೋಣ ಏನಾಗುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications