KEA UGNEET: ಯುಜಿನೀಟ್ ತಾತ್ಕಾಲಿಕ ಸೀಟು ಹಂಚಿಕೆಗೆ ಹೈಕೋರ್ಟ್ ತಡೆ..
KEA UGNEET 2025: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) UGNEET2025 ಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬಿಡುಗಡೆ ಮಾಡಿದ್ದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶದ ತಾತ್ಕಾಲಿಕ ಸೀಟು ಹಂಚಿಕೆಗೆ ಹೈಕೋರ್ಟ್ ತಡೆ ನೀಡಿದೆ. ಮುಂದಿನ ಪ್ರಕ್ರಿಯೆಯ ಕುರಿತು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.
UGNEET 25 ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕಳೆದ ಅಕ್ಟೋಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 3ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪಲಿತಾಂಶ ಪ್ರಕಟಿಸಿತ್ತು. ಇದರ ವಿರುದ್ಧ ಭಾರತದ ಸಂವಿಧಾನದ ಆರ್ಟಿಕಲ್ 226 ರ ಅಡಿ ಅರ್ಜಿಯನ್ನು ಸಲ್ಲಿಸಲಾಗಿದೆ. ಅದರಲ್ಲಿ ಯುಜಿನೀಟ್2025 ವೈದ್ಯಕೀಯ 3ನೇ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿ (24/10/2025) (ಪೂರ್ಣ ಕ್ರೋಢೀಕರಣ) ರದ್ದುಪಡಿಸಲು ಕೋರಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ಹೈಕೋರ್ಟ್ ತ್ರಿಸದಸ್ಯ ಪೀಠ ಶುಕ್ರವಾರ ಪಲಿತಾಂಶ ರದ್ದುಪಡಿಸಿ ಆದೇಶಿಸಿದೆ.

ಅರ್ಜಿದಾರರು ಸೇರಿದಂತೆ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಎಲ್ಲಾ ಖಾಲಿ ಆಸನಗಳಿಗೆ ಯುಜಿ-ನೀಟ್ ಮತ್ತು ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ 2025 ರ 3 ನೇ ಸುತ್ತಿನ ಕೌನ್ಸೆಲಿಂಗ್ನಲ್ಲಿ ಭಾಗವಹಿಸಲು ಅರ್ಜಿದಾರರಿಗೆ ಅನುಮತಿ ನೀಡುವಂತೆ ಸೂಚಿಸಿ ಕೋರ್ಟ್ ಆದೇಶಿಸಿದೆ.
ಹೈಕೋರ್ಟ್ ಆದೇಶದ ಪ್ರಕಾರ ಪರಿಷ್ಕೃತ ತಾತ್ಕಾಲಿಕ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕ್ರಿಯೆ ಆರಂಭಿಸಿದೆ. ಸದ್ಯದಲ್ಲೇ ಫಲಿತಾಂಶ ಪ್ರಕಟಿಸಲಿದೆ ಎಂದರು.
ಕಾಲೇಜು ಪ್ರವೇಶಕ್ಕೆ ಡಿಸೆಂಬರ್ 7 ಕೊನೆ ದಿನ..!
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಸ್ನಾತಕೋತ್ತರ) PGNEET 2025 ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದೆ. ಪ್ರವೇಶ ಪ್ರಕ್ರಿಯೆಗೆ ದಿನಾಂಕಗಳನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಆಯ್ಕೆ ದಾಖಲಿಸಲು ಡಿಸೆಂಬರ್ 4ರಂದು ಸಂಜೆ 4ರವರೆಗೆ ಅವಕಾಶ ನೀಡಲಾಗಿತ್ತು. ಆಯ್ಕೆ 1 ಮತ್ತು 2 ದಾಖಲಿಸಿದವರು ಡಿ.5ರೊಳಗೆ ಶುಲ್ಕ ಪಾವತಿಸಬೇಕು. ಛಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಡಿಸೆಂಬರ್ 6ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಬೇಕು. ಮೂಲ ದಾಖಲೆ ಸಲ್ಲಿಸಿದ ನಂತರ ಡಿಸೆಂಬರ್ 7ರೊಳಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications