Karnataka Vidhan Sabha Election 2023 LIVE: ಮನೆಮನೆ ಪ್ರಚಾರಕ್ಕೆ ಸೀಮಿತ, ಹೊರಗಿನವರು ಕ್ಷೇತ್ರದಲ್ಲಿ ಇರುವಂತಿಲ್ಲ
ಬೆಂಗಳೂರು, ಮೇ 9: ಹದಿನಾರನೇ ಕರ್ನಾಟಕ ವಿಧಾನಸಭೆಗೆ ಬಹಿರಂಗ ಪ್ರಚಾರಕ್ಕೆ ಮೇ 8ರಂದು ತೆರೆಬಿದ್ದಿದೆ. ಇನ್ನೇನಿದ್ದರೂ ಮನೆಮನೆ ಪ್ರಚಾರ, ಸ್ಥಳೀಯ ಅಭ್ಯರ್ಥಿಗಳು ಮತ್ತು ಆಯಾಯ ಕ್ಷೇತ್ರದಲ್ಲಿ ಮತದಾನದ ಹಕ್ಕು ಇರುವವರು ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಮೇ 10ರಂದು ಚುನಾವಣೆ, ಮೇ 13ರಂದು ಫಲಿತಾಂಶ ಹೊರಬೀಳಲಿದೆ. 'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ.
ಕರ್ನಾಟಕ ಚುನಾವಣೆ: ಗೋವಾ ಸರ್ಕಾರದಿಂದ ಪಾವತಿ ರಜೆ ಘೋಷಣೆ
ಮತಗಟ್ಟೆ ಅಧಿಕಾರಿಗಳಿಗೆ ಕಿಟ್ ವಿತರಣೆ: ತುಷಾರ್ ಗಿರಿನಾಥ್
ಮತದಾನ; ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ
ಶಿವಮೊಗ್ಗದಲ್ಲಿ ಮತದಾನಕ್ಕೆ ಸಿದ್ಧತೆ, ಒಟ್ಟು 1782 ಮತಗಟ್ಟೆಗಳು
ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ತುಷಾರ್ ಗಿರಿ ನಾಥ್ ಭೇಟಿ
ಶಾಂತಿಯುತ ಚುನಾವಣೆಗೆ ಸಕಲ ಸಿದ್ದತೆ: ಮನೋಜ್ ಕುಮಾರ್ಮೀನಾ
ಮತದಾನಕ್ಕೆ ಕ್ಷಣಗಣನೆ: 2615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಭಾರೀ ಪ್ರಮಾಣದ ಮದ್ಯವಶ
ಚುನಾವಣೆಗೂ ಮುನ್ನ ಅಬಕಾರಿ ಇಲಾಖೆ, ಫ್ಲೈಯಿಂಗ್ ಸ್ಕ್ಯಾಡ್ ಮತ್ತು ಪೊಲೀಸರು ಭಾರೀ ಪ್ರಮಾಣದಲ್ಲಿ ಮದ್ಯ ಮತ್ತು ಡ್ರಗ್ಸ್ ಅನ್ನು ವಶ ಪಡಿಸಿಕೊಂಡಿದ್ದಾರೆ. ಜೊತೆಗೆ, ಮತದಾರರಿಗೆ ಹಂಚಲು ಇಟ್ಟಿದ್ದ ಹಣ, ಸೀರೆ, ಕುಕ್ಕರ್ ಮುಂತಾದ ವಸ್ತುಗಳನ್ನೂ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮೇ ಎಂಟರ ಸಂಜೆ ಐದರಿಂದ, ಮೇ ಹತ್ತು ಮಧ್ಯರಾತ್ರಿಯವರೆಗೆ ಮದ್ಯಮಾರಾಟಕ್ಕೆ ಚುನಾವಣಾ ಆಯೋಗ ನಿಷೇಧ ಹೇರಿದೆ.

ಚಿಕ್ಕಮಗಳೂರು ಕೌಂಟಿಂಗ್ ನಡೆಯುವ ಸ್ಥಳ
ಮೇ 13 ರಂದು ಚಿಕ್ಕಮಗಳೂರು ನಗರದಲ್ಲಿರುವ ಐಡಿಎಸ್ಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಸ್ಥಳಕ್ಕೆ ಸಾರ್ವಜನಿಕರು ವಾಹನಗಳಲ್ಲಿ ಆಗಮಿಸುವುದರಿಂದ, ಬೈಪಾಸ್ ರಸ್ತೆಯಲ್ಲಿ ಎಐಟಿ ಸರ್ಕಲ್ನಿಂದ ನರಿಗುಡ್ಡನಹಳ್ಳಿವರೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಮೈಸೂರು ಜಿಲ್ಲೆಯ ಮತದಾರರು
ಮೈಸೂರು ಜಿಲ್ಲೆಯಲ್ಲಿ ಒಟ್ಟು 2,905 ಮತಗಟ್ಟೆಗಳಿದ್ದು, 13,17,121 ಪುರುಷ ಮತದಾರರು, 13,38,637 ಮಹಿಳಾ ಮತದಾರರು ಹಾಗೂ 230 ಇತರೆ ಮತದಾರರಿದ್ದು, ಒಟ್ಟು 26,55,988 ಮತದಾರರಿದ್ದಾರೆ.












Click it and Unblock the Notifications