ಕರ್ನಾಟಕದ ಜಲಾಶಯಗಳ ಶನಿವಾರದ ನೀರಿನ ಮಟ್ಟ
ಬೆಂಗಳೂರು, ಸೆಪ್ಟೆಂಬರ್ 09 : ರಾಜ್ಯದೆಲ್ಲೆಡೆ ಅತ್ಯುತ್ತಮವಾಗಿ ಮಳೆಯಾಗುತ್ತಿದ್ದು, ಕರ್ನಾಟಕದ ಬಹುತೇಕ ಅಣೆಕಟ್ಟುಗಳು ತುಂಬುವ ಹಂತಕ್ಕೆ ಬಂದು ತಲುಪಿವೆ. ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದರಾದರೂ ಹಿಂಗಾರು ಮಳೆ ಕೊಂಚ ರೈತರಲ್ಲಿ ಸಂತಸ ತಂದಿದೆ.
ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜನರನ್ನು ಕಂಗೆಡಿಸಿದೆ. ಶುಕ್ರವಾರ ಮಧ್ಯಾಹ್ನ ಹಾಗೂ ರಾತ್ರಿ ಸುರಿದ ಮಳೆ ನಾಲ್ವರನ್ನು ಬಲಿ ತೆಗೆದುಕೊಂಡಿದೆ. ಶಿವಾನಂದ ಸರ್ಕಲ್ ಬಳಿ ಯುವಕನೊಬ್ಬ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರೆ, ಮಿನರ್ವ ಸರ್ಕಲ್ ಬಳಿ ಮರವೊಂದು ಕಾರೊಂದರ ಮೇಲೆ ಉರುಳಿಬಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಉತ್ತರ ಕರ್ನಾಟಕದಲ್ಲಿಯೂ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷ್ಣಾ, ಮಲಪ್ರಭಾ, ವರದಾ ನದಿ ಸೇರಿದಂತೆ ಹಲವಾರು ನದಿಗಳು ಉಕ್ಕಿ ಹರಿಯುತ್ತಿವೆ.
ಕೆಲ ಜಲಾಶಯಗಳ ಒಳ ಹರಿವು ಹೆಚ್ಚಾಗಿದ್ದರಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಕಲಬುರಗಿಯ ಬೆಣ್ಣೆತೋರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಯಲ್ಲಿ ಅಲ್ಲಿನ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಇರುವ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕೆಳಗಿನಂತಿದೆ.
| ಅಣೆಕಟ್ಟುಗಳು | ಗರಿಷ್ಠ ಮಟ್ಟ | ಇಂದಿನ ಮಟ್ಟ |
| ಲಿಂಗನಮಕ್ಕಿ | 1819.00 | 1,795.10 |
| ಸುಪಾ | 1849.92 | 1793.18 |
| ವಾರಾಹಿ | 1949.50 | 1923.82 |
| ಹಾರಂಗಿ | 2859.00 | 2857.10 |
| ಹೇಮಾವತಿ | 2922.00 | 2,890.75 |
| ಕೆಆರ್ಎಸ್ | 124.80 | 102.65 |
| ಕಬಿನಿ | 2284.00 | 2.278.45 |
| ಭದ್ರಾ | 2158.00 | 2134.33 |
| ತುಂಗಭದ್ರಾ | 1633.00 | 1624.89 |
| ಘಟಪ್ರಭಾ | 2175.00 | 2153.45 |
| ಮಲಪ್ರಭಾ | 2079.50 | 2054.90 |
| ಆಲಮಟ್ಟಿ | 1704.81 | 1704.81 |
| ನಾರಾಯಣಪುರ | 1615.00 | 1614.84 |
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications