Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಟ್ಟ ಮಂಜು, ಶೀತಗಾಳಿ ಮುಂದುವರೆಯುವ ಮುನ್ಸೂಚನೆ
Karnataka Weather: ರಾಜ್ಯದಲ್ಲಿ ಚಳಿ ಪ್ರಮಾಣ ಮತ್ತೆ ಹೆಚ್ಚಾಗುತ್ತಲಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 20) ಬೆಳಗ್ಗೆ ಕೂಡ ದಟ್ಟ ಮಂಜು, ಶೀತಗಾಳಿ ವಾತಾವರಣ ಮುಂದುವರೆದಿತ್ತು. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ನಗರದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಮಂಜು, ಚಳಿ ಹೆಚ್ಚಿರಲಿದೆ ಎಂದು ಮನ್ಸೂಚನೆ ನೀಡಿದೆ. ಇನ್ನೂ ಇಂದು ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ ಎಂದು ತಿಳಿಸಿದೆ.

ಕೆಳೆದ ಕೆಲವು ದಿನಗಳಿಂದ ನಗರದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಪರಿಣಾಮ ಬೆಳಗ್ಗೆ ಹಾಗೂ ಸಂಜೆ ವೇಳೆ ಜನರು ಮನೆಯಿಂದ ಹೊರಗಡೆ ಬರಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೀಕರ ಶೀತಗಾಳಿ ಬೀಸಲಿದೆ ಎಂದು ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ರವಾನೆ ಮಾಡಿದೆ.
ಶೀತಗಾಳಿ ಜೊತೆ ಒಣಹವೆ ಮುಂದುವರಿಕೆ: ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಚಳಿಗಾಳಿ ಬೀಸಲಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಭೀಕರ ಚಳಿಗಾಳಿ ಮುನ್ಸೂಚನೆ: ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭೀಕರ ಚಳಿಗಾಳಿ ಬೀಸಲಿದೆ. ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಶೀತಗಾಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಭಾರೀ ಚಳಿ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳ ಜನರು ತತ್ತರಿಸಿ ಹೋಗಿದ್ದಾರೆ.
ಫೆಬ್ರವರಿ ಎಂಟ್ರಿ ಕೊಡುತ್ತಿದ್ದಂತೆ ಚಳಿ ಪ್ರಮಾಣ ತಗ್ಗಲಿದ್ದು, ಬೇಸಿಗೆ ಎಂಟ್ರಿ ಕೊಡಲಿದೆ ಎನ್ನುವ ಮುನ್ಸೂಚನೆ ಇದೆ. ಬಳಿಕ ಈ ಬಾರಿಯೂ ವಾಡಿಕೆಯಂತೆ ಮುಂಗಾರು ಜೂನ್ ಆರಂಭದಲ್ಲಿ ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಎನ್ನುವ ಮುನ್ಸೂಚನೆ ಇದೆ. ಮುಂಗಾರು ಮೊದಲು ಕೇರಳಕ್ಕೆ ಎಂಟ್ರಿ ಕೊಡಲಿದೆ ಬಳಿಕ ಕರ್ನಾಟಕಕ್ಕೆ ಆಗಮಿಸಲಿದೆ. ತದನಂತರ ದೇಶಾದ್ಯಂತ ವ್ಯಾಪಿಸುವ ಸಾಧ್ಯತೆಯಿದೆ. ಯಾಕಂದ್ರೆ ಪ್ರತಿ ಬಾರಿಯೂ ಸಹ ಮೊದಲು ಮುಂಗಾರು ಪ್ರವೇಶ ಕೊಡುವುದೇ ಕೇರಳಕ್ಕೆ, ಬಳಿಕ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳನ್ನು ಆವರಿಸಲಿದೆ.
ರಾಜ್ಯದಲ್ಲಿ ಕಳೆದ ಬಾರಿ ಉತ್ತಮ ಮಳೆಯಾದ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿಹರಿದಿದ್ದವು. ಅಷ್ಟೇ ಅಲ್ಲದೆ, ಬಹುತೇಕ ಪ್ರಮುಖ ಜಲಾಶಯಗಳು ಕೂಡ ಭರ್ತಿಯಾಗಿದ್ದು, ನೀರಿನ ಅಭಾವ ಎದುರಾಗಂತೆ ಆಗಿತ್ತು. ಇದರಿಂದ ರೈತರ ಮುಖದಲ್ಲಿ ಮಂದಹಾಸ ಹೆಚ್ಚಾಗಿತ್ತು. ಇನ್ನೂ ಈ ಬಾರಿ ಏನಾಗಲಿದೆಯೋ ಎನ್ನುವ ಯೋಚನೆಯಲ್ಲಿ ಅನ್ನದಾತರಿದ್ದಾರೆ. ಯಾಕಂದ್ರೆ, ಈಗಾಗಲೇ ಬಹುತೇಕ ಸಣ್ಣ-ಪುಟ್ಟ ಕೆರೆಗಳಲ್ಲಿ ನೀರು ಖಾಲಿಯಾಗಿವೆ. ಇವುಗಳು ಮತ್ತೆ ಯಾವಾಗ ತುಂಬುತ್ತವೆಯೋ ಎನ್ನುವ ಯೋಚನೆಯಲ್ಲಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ










Click it and Unblock the Notifications