Get Updates
Get notified of breaking news, exclusive insights, and must-see stories!

Karnataka Weather: ತೀವ್ರಗೊಂಡ ಶೀತಗಾಳಿ: ಈ ಜಿಲ್ಲೆಗಳಲ್ಲಿ ಮೈನಡುಗುವ ಚಳಿ ಎಚ್ಚರಿಕೆ

ರಾಜ್ಯದಾದ್ಯಂತ ಮೈನಡುಗುವ ಚಳಿ ಶುರುವಾಗಿದೆ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮೊದಲ ದಿನ ಮತ್ತು ಎರಡನೇ ದಿನ ತೀವ್ರ ಶೀತಗಾಳಿ ಬೀಸುವ ಹಿನ್ನೆಲೆ ಚಳಿ ಮತ್ತಷ್ಟು ತೀವ್ರಗೊಳ್ಳಲಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡಿನ ಬೀದರ್ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಲ್ಲಿ ತೀವ್ರ ಶೀತಲ ಅಲೆಯ ವಾತಾವರಣ ಮುಂದುವರಿಯಲಿದೆ. ಕರ್ನಾಟಕದ ಉತ್ತರ ಒಳನಾಡಿನ ಧಾರವಾಡ, ವಿಜಯಪುರ ಜಿಲ್ಲೆಗಳಲ್ಲಿ ಶೀತಲ ಅಲೆಯ ವಾತಾವರಣ ಇರಲಿದೆ. ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಮುಖವಾಗಿ ಶುಭ್ರ ಆಕಾಶದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆ ಹೆಚ್ಚಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್‌ ಮತ್ತು 14 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ.

Karnataka Weather Alert Severe Cold Wave Warning In These Districts Today

ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಹಾಸನ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ, ಮುಂದಿನ 2 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಏರಿಕೆಯಾಗುವ ಸಾಧ್ಯತೆ ಇದ್ದು, ನಂತರ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಹೆಚ್ಚಳವಾಗಲಿದೆ. ಮುಂದಿನ 2 ದಿನಗಳವರೆಗೆ ಕರಾವಳಿ ಕರ್ನಾಟಕದಲ್ಲೂ ಹವಾಮಾನ ಇದೇ ರೀತಿ ಇರಲಿದೆ.

ಲಕ್ಷದ್ವೀಪಕ್ಕೆ ಹೊಂದಿಕೊಂಡಿರುವ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇದೆ. ರಾಜ್ಯದ ಮೇಲೆ ಕೆಳ ಉಷ್ಣವಲಯದ ಮಟ್ಟದಲ್ಲಿ ಈಶಾನ್ಯದಿಂದ ಆಗ್ನೇಯ ದಿಕ್ಕಿನ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶೀತ ಅಲೆಯಿಂದ ರಕ್ಷಿಸಿಕೊಳ್ಳುವುದು ಹೇಗೆ?

ಶೀತ ಅಲೆಯ ಅತಿಯಾದ ಪರಿಣಾಮದಿಂದಾಗಿ ಚರ್ಮವು ಹಳದಿ, ಗಟ್ಟಿಯಾಗಿ ಮತ್ತು ಮರಗಟ್ಟುವಿಕೆಗೆ ಒಳಗಾಗಬಹುದು. ಇದರಿಂದ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳಬಹುದು. ಇದು ಗಂಭೀರ ಸ್ಥಿತಿಯಾಗಿದ್ದು, ಇದನ್ನು ಗ್ಯಾಂಗ್ರೀನ್ ಎಂದೂ ಕರೆಯುತ್ತಾರೆ. ಆದ್ದರಿಂದ ಶೀತ ಅಲೆಯ ಮೊದಲ ಲಕ್ಷಣದಲ್ಲಿ ವೈದ್ಯರನ್ನು ಸಂಪರ್ಕಿಸಿ ಮತ್ತು ಅಲ್ಲಿಯವರೆಗೆ ದೇಹದ ಭಾಗಗಳನ್ನು ಬೆಚ್ಚಗಾಗಲು ಪ್ರಯತ್ನಿಸಿ ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಶೀತ ಅಲೆಯಿಂದ ದೇಹದಲ್ಲಿ ಶಾಖದ ನಷ್ಟದಿಂದಾಗಿ ನಡುಕ, ಮಾತನಾಡಲು ತೊಂದರೆ, ನಿದ್ರಾಹೀನತೆ, ಸ್ನಾಯುಗಳಲ್ಲಿ ಬಿಗಿತ, ಉಸಿರಾಟದ ತೊಂದರೆ, ಪ್ರಜ್ಞಾಹೀನ ಸ್ಥಿತಿ ಉಂಟಾಗಬಹುದು. ಇದು ತುಂಬಾ ಗಂಭೀರ ಸ್ಥಿತಿಯಾಗಿದೆ. ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು ನಿಮ್ಮ ತಲೆ, ಕುತ್ತಿಗೆ, ಬೆರಳುಗಳು ಮತ್ತು ಕಾಲ್ಬೆರಳುಗಳನ್ನು ಸರಿಯಾಗಿ ಮುಚ್ಚಿಕೊಳ್ಳಿ. ಕೈಗವಸುಗಳು, ಕ್ಯಾಪ್, ಮಫ್ಲರ್ ಮತ್ತು ನೀರು-ನಿರೋಧಕ ಬೂಟುಗಳು ಮುಂತಾದ ಸಾಕಷ್ಟು ಬೆಚ್ಚಗಿನ ಬಟ್ಟೆಗಳನ್ನು ಧರಿಸಿ. ಶೀತ ಅಲೆಯ ಸಮಯದಲ್ಲಿ ಸಾಧ್ಯವಾದಷ್ಟು ಒಳಾಂಗಣದಲ್ಲಿಯೇ ಇರಿ ಮತ್ತು ತೀರಾ ಅಗತ್ಯವಿದ್ದರೆ ಮಾತ್ರ ಹೊರಗೆ ಪ್ರಯಾಣಿಸಲು ಪ್ರಯತ್ನಿಸಿ ಎಂದು ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+