Karnataka Weather: ಮುಂದಿನ 7 ದಿನ ವ್ಯಾಪಕ ಬಿಸಿಲು ಮುನ್ಸೂಚನೆ, ಕನಿಷ್ಠ ತಾಪಮಾನಲ್ಲಿ 3-5 ಡಿಸೆ ಇಳಿಕೆ
ಬೆಂಗಳೂರು: ಕರ್ನಾಟಕದ ಹಲವೆಡೆ ಬೆಳಗ್ಗೆ ಚಳಿ ಮತ್ತು ಮಂಜಿನ ವಾತಾವರಣ ಕಂಡು ಬರಲಿದೆ. ಇಂದು ಭಾನುವಾರ (ಜನವರಿ 31) ದಿಂದ ರಾಜ್ಯದೆಲ್ಲಡೆ ಒಣಹವೆ ಉಂಟಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಸೇರಿ ಹಲವೆಡೆ ಕನಿಷ್ಠ ತಾಪಮಾನದಲ್ಲಿ ಬದಲಾವಣೆ ಆದರೂ ಸಹಿತ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗಲಿದ್ದು, ಶುಷ್ಕ ವಾತಾವರಣ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ತಾಪಮಾನ ಕುಸಿತವಾಗಿದ್ದು, ಚಳಿ ಕಂಡು ಬಂದಿದೆ. ಅದರ ವಿವರ ಮುಂದಿದೆ.
ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯ ವಾಡಿಕೆ ಕನಿಷ್ಠ ತಾಪಮಾನಕ್ಕಿಂತ ಕಡಿಮೆ -3.1 ರಿಂದ 5.0 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿಕೆ ಆಗುವ ಮೂಲಕ ಕೆಲವೆಡೆ ಹೆಚ್ಚಿನ ಚಳಿ ಅನುಭವವಾಗಿದೆ. ಇದೇ ಉತ್ತರ ಕರ್ನಾಟಕದ ಒಂದೆರಡು ಭಾಗಗಳಲ್ಲಿ ಗರಿಷ್ಠ ತಾಪಮಾನ 3.1 ರಿಂದ 5.0 ರಷ್ಟು ವಾಡಿಕೆಗಿಂತ ಅಧಿಕ ದಾಖಲಾಗುವ ಮೂಲಕ ಇಲ್ಲಿ ಚಳಿ ಮತ್ತು ಶಾಖದ ಅನುಭವ ನೀಡಿದೆ.

ಕಳೆದ ವಾರ ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಹಗುರ ಮಳೆ ಆಗಿತ್ತು. ಆದರೆ ಮುಂದಿನ ಒಂದು ವಾರ ಎಲ್ಲಿಯೂ ಮಳೆ ಮುನ್ಸೂಚನೆ ಇಲ್ಲ. ಸಂಪೂರ್ಣ ನೀಲಿ ಆಕಾಶ ಕಂಡು ಬರಲಿದ್ದು, ಒಣಹವೆ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿ ಒಳನಾಡಿನ ಕೆಲವೆಡೆ ಬೆಳಗ್ಗೆ, ರಾತ್ರಿ ಚಳಿ ಗಾಳಿ ಬೀಸಬಹುದು. ಇದರಿಂದಿಗೆ ಯಾವುದೇ ಗಂಭೀರ ಸ್ವರೂಪದ ಹವಾಮಾನ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಇನ್ನೂ ಚಳಿ ಇರುವ ಜಿಲ್ಲೆಗಳು ಯಾವುವು?
ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಹೀಗಿದ್ದರು ಚಳಿ ಪ್ರಮಾಣದ ಕೆಲವೆಡೆ ಕಡಿಮೆ ಆಗಿಲ್ಲ. ಆ ಪೈಕಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಹೌದು. ಇಲ್ಲಿ ಕ್ರಮವಾಗಿ 9.7 ಮತ್ತು 9.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಉಳಿದಂತೆ ಕೋಲಾರದಲ್ಲಿ 7.9 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ 8.7 ಡಿಗ್ರಿ ಸೆಲ್ಸಿಯಸ್, ತುಮಕೂರು 8.9 ಡಿಗ್ರಿ ಸೆಲ್ಸಿಯಸ್, ಹಾಸನ 10.2 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು 10.8 ಡಿಗ್ರಿ ಸೆಲ್ಸಿಯಸ್, ಮೈಸೂರು 10.7 ಡಿಗ್ರಿ ಸೆಲ್ಸಿಯಸ್, ಮಂಡ್ಯ 10.8 ಡಿಗ್ರಿ ಸೆಲ್ಸಿಯಸ್, ಬೆಳಗಾವಿ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಇದೇ ಪ್ರದೇಶಗಳಲ್ಲಿ ಹಗಲು ತಾಪಮಾನದಲ್ಲಿ ಏರಿಕೆ ಆಗಿದೆ. ಈಗಾಗಲೇ ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಖದ ಅಲೆ ವಾತಾವರಣ ನಿರ್ಮಾಣವಾಗಿದೆ ಎಂದು ಐಎಂಡಿ ತಿಳಿಸಿದೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ












Click it and Unblock the Notifications