Get Updates
Get notified of breaking news, exclusive insights, and must-see stories!

Karnataka Weather Feb 17: ಕರ್ನಾಟಕದಲ್ಲಿ ಬಿಸಿಲು ಅಲ್ಪ ಹೆಚ್ಚಳ; ಬೆಂಗಳೂರು ಸೇರಿ ವಿವಿಧ ಭಾಗದಲ್ಲಿ ಹೇಗಿದೆ ಹವಾಮಾನ

Karnataka Weather Feb 17: ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಮುಂದಿನ ಮೂರರಿಂದ ಐದು ದಿನಗಳ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇದೇ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಫೆಬ್ರವರಿ 17ರ ಹವಾಮಾನ ಹೇಗಿದೆ ಹಾಗೂ ಮುಂದಿನ ಮೂರು ದಿನಗಳ ವರೆಗೆ ಹವಾಮಾನ ಹೇಗಿರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದೆ. ಹಿಂದೂ ಮಹಾಸಾಗರದ ಪೂರ್ವ ಸಮಭಾಜಕ ವೃತ್ತ ಮತ್ತು ಬಂಗಾಳ ಕೊಲ್ಲಿಯ ದಕ್ಷಿಣ ಭಾಗಕ್ಕೆ ಹೊಂದಿಕೊಂಡಿರುವ ಕೇಂದ್ರದ ಮೇಲೆ ಮೇಲಿನ ವಾಯು ಚಂಡಮಾರುತದ ಪ್ರಭಾವದಡಿಯಲ್ಲಿ ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಮೇಲ್ಭಾಗದ ವಾಯು ಚಂಡಮಾರುತವು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿದೆ. ಇದು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಫೆಬ್ರವರಿ 18, 2026ರ ಸುಮಾರಿಗೆ ನೈಋತ್ಯ ಬಂಗಾಳಕೊಲ್ಲಿ ಮತ್ತು ಪಕ್ಕದಲ್ಲಿರುವ ಪೂರ್ವ ಸಮಭಾಜಕ ವೃತ್ತದ ಮೇಲೆ ಹೆಚ್ಚು ಗಮನಾರ್ಹವಾಗುತ್ತದೆ. ಇದು ಮುಂದಿನ ದಿನಗಳಲ್ಲಿ ಮಳೆಯಾಗಿ ಬದಲಾಗುವ ಸಾಧ್ಯತೆಯೂ ಇದೆ ಎಂದು ಭಾರತೀಯ ಹವಾಮಾನ ವರದಿ ಉಲ್ಲೇಖಿಸಿದೆ.

Karnataka Weather Feb 17 Sunshine Rises Across State Bengaluru and Other Regions See Pleasant Conditions

ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ಇತ್ತು. ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದ್ದು. 3.1 ಡಿಗ್ರಿ ಸೆಲ್ಸಿಯಸ್ ನಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ 5.1 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಕಡಿಮೆ ದಾಖಲಾಗಿದೆ. ಇನ್ನುಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯವಾಗಿತ್ತು.

Karnataka Weather Feb 17: ಕರ್ನಾಟಕದ ತಾಪಮಾನ ಪರಿಸ್ಥಿತಿ

ಮುಂದಿನ 5 ದಿನಗಳ ವರೆಗೆ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳು ಇಲ್ಲ. ಇನ್ನು ಮುಂದಿನ ಎರಡು ದಿನಗಳ ವರೆಗೆ ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ಮತ್ತು ತೇವಾಂಶದ ವಾತಾವರಣ ಇರುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ ಎಂದು ಐಎಂಡಿ ತಿಳಿಸಿದೆ.

ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ

ಇನ್ನು ಬೆಂಗಳೂರಿನಲ್ಲಿ ಪ್ರಮುಖವಾಗಿ ಶುಭ್ರ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಯಲ್ಲೂ ಇದೇ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ವಿಮಾನ ನಿಲ್ದಾಣ, ಬೀದರ್, ಹಾವೇರಿ, ವಿಜಯಪುರ ಮತ್ತು ಬಾಗಲಕೋಟೆ ಎಡಬ್ಲ್ಯೂಎಸ್ ಮತ್ತು ದಕ್ಷಿಣ ಒಳನಾಡಿನ ಹಾಸನ, ದಾವಣಗೆರೆ, ಶಿವಮೊಗ್ಗ, ಮಂಡ್ಯ ಎಡಬ್ಲ್ಯೂಎಸ್, ಮೈಸೂರು ಭಾಗದಲ್ಲಿ ಕನಿಷ್ಠ ತಾಪಮಾನವು 12.1 ಡಿಗ್ರಿ ಸೆಲ್ಸಿಯಸ್‌ನಿಂದ 16.0 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು.

ಇನ್ನು ಉತ್ತರ ಒಳನಾಡಿನ ಕರ್ನಾಟಕದ ಗದಗ, ರಾಯಚೂರು, ಕೊಪ್ಪಳ ಮತ್ತು ಕಲಬುರ್ಗಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರಿನ ಬೆಂಗಳೂರು ಎಚ್‌ಎಎಲ್ ಎಪಿ, ಬೆಂಗಳೂರು ಕೆಐಎಎಲ್ ಎಪಿ, ಬೆಂಗಳೂರು ನಗರ, ಚಿತ್ರದುರ್ಗ ಮತ್ತು ಬಳ್ಳಾರಿ ಎಡಬ್ಲ್ಯೂಎಸ್‌ಗಳಲ್ಲಿ 16.7 ಡಿಗ್ರಿ ಸೆಲ್ಸಿಯಸ್‌ನಿಂದ 22.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳನಾಡಿನ ಚಿಂತಾಮಣಿ ಭಾಗದಲ್ಲಿ 11.2 ಡಿಗ್ರಿ ಸೆಲ್ಸಿಯಸ್, ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ, ಕರಾವಳಿ ಕರ್ನಾಟಕದ ಶಕ್ತಿನಗರ ಭಾಗದಲ್ಲಿ 19.2 ಡಿಗ್ರಿ ಸೆಲ್ಸಿಯಸ್‌ನಿಂದ 22.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಈ ಭಾಗಗಳಲ್ಲಿ ಕನಿಷ್ಠ ತಾಪಮಾನ ಇಳಿಕೆ

ಇನ್ನು ಕರ್ನಾಟಕದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು ಇಳಿಕೆಯಾಗಿದೆ. ದಕ್ಷಿಣ ಒಳನಾಡಿನ ಚಿಂತಾಮಣಿ ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಕನಿಷ್ಠ ತಾಪಮಾನವು ಗಮನಾರ್ಹವಾಗಿ ಕಡಿಮೆಯಾಗಿದೆ. ಉತ್ತರ ಒಳನಾಡಿನ ಕರ್ನಾಟಕದ ಬೀದರ್ ಮತ್ತು ದಕ್ಷಿಣ ಒಳನಾಡಿನ ಹಾಸನದಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಉತ್ತರ ಒಳನಾಡಿನ ವಿಜಯಪುರ, ಧಾರವಾಡ, ಹಾವೇರಿ ಮತ್ತು ರಾಯಚೂರು ಮತ್ತು ದಕ್ಷಿಣ ಒಳನಾಡಿನ ದಾವಣಗೆರೆ, ಮಂಡ್ಯ ಎಡಬ್ಲ್ಯೂಎಸ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿತ್ತು. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯವಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+