Karnataka Weather: ಇಂದಿನಿಂದ ಜುಲೈ 5ರವರೆಗೆ ಕರ್ನಾಟಕ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ

ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆಯ ಚಟುವಟಿಕೆಗಳು ಏರಿಳಿತದಿಂದ ಕೂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ಸಾಮಾನ್ಯ ಸ್ಥಿತಿಯಲ್ಲಿದ್ದರೆ, ದಕ್ಷಿಣ ಒಳನಾಡಿನಲ್ಲಿ ಕೊಂಚ ಕ್ಷೀಣಿಸಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈ ವಾರ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಜುಲೈ 5ರವರೆಗೆ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ?

ಕರಾವಳಿ ತೀರದ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಜುಲೈ 5ರವರೆಗೆ ಈ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇದರೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಸತತವಾಗಿ ಬಲವಾದ ಗಾಳಿ ಬೀಸಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ.

Karnataka Weather

ಉತ್ತರ ಕರ್ನಾಟಕದ ಭಾಗಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬಿದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಿಡಿಲು ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ಈ ವೇಳೆ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಮಲೆನಾಡಿನ ಹಸಿರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ, ಬಯಲು ಸೀಮೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.

Karnataka Rain: ನಿಮ್ಮೂರಲ್ಲಿ ಮುಂದಿನ 3 ದಿನ ಮಳೆ ಇರುತ್ತಾ? ಇಲ್ಲಿದೆ ಹವಾಮಾನ ಇಲಾಖೆಯ ಪಕ್ಕಾ ವರದಿ
Karnataka Rain: ನಿಮ್ಮೂರಲ್ಲಿ ಮುಂದಿನ 3 ದಿನ ಮಳೆ ಇರುತ್ತಾ? ಇಲ್ಲಿದೆ ಹವಾಮಾನ ಇಲಾಖೆಯ ಪಕ್ಕಾ ವರದಿ

ಮುಂಗಾರು ಚಲನೆ ಹೇಗಿದೆ?

ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ದೇಶದಾದ್ಯಂತ ಹಾಗೂ ರಾಜ್ಯದ ಹವಾಮಾನ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳು ಕಂಡುಬಂದಿವೆ. ನೈರುತ್ಯ ಮುಂಗಾರು (Southwest Monsoon) ದೇಶದ ಇತರ ಭಾಗಗಳಿಗೆ ವೇಗವಾಗಿ ಮುನ್ನಡೆಯುತ್ತಿದ್ದು, ಪ್ರಸ್ತುತ ಸೂರತ್, ಇಂದೋರ್, ಮಾಂಡ್ಲಾ, ದಾಲ್ತೊಂಗಂಜ್, ಮೋತಿಹಾರಿ ಮಾರ್ಗವಾಗಿ ಹಾದುಹೋಗುತ್ತಿದೆ. ಮುಂಬರುವ 48 ಗಂಟೆಗಳಲ್ಲಿ ಉತ್ತರ ಅರೇಬಿಯನ್ ಸಮುದ್ರ, ಗುಜರಾತ್, ಮಧ್ಯಪ್ರದೇಶದ ಕೆಲವು ಭಾಗಗಳು, ಛತ್ತೀಸ್‌ಗಢ, ಜಾರ್ಖಂಡ್, ಬಿಹಾರದ ಉಳಿದ ಭಾಗಗಳು ಹಾಗೂ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಪ್ರದೇಶಗಳಿಗೆ ಮುಂಗಾರು ಮತ್ತಷ್ಟು ವ್ಯಾಪಿಸಲು ವಾತಾವರಣ ಪೂರಕವಾಗಿದೆ.

ನಂತರದ ದಿನಗಳಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ಆಗ್ನೇಯ ರಾಜಸ್ಥಾನ ಮತ್ತು ಗುಜರಾತ್‌ನ ಉಳಿದ ಭಾಗಗಳಿಗೆ ಮುಂಗಾರು ಸಂಪೂರ್ಣವಾಗಿ ಪ್ರವೇಶಿಸಲಿದೆ. ಸಮುದ್ರ ಮಟ್ಟದಿಂದ ಮೇಲಿನ ವಾತಾವರಣದಲ್ಲಿ ಎರಡು ಪ್ರಮುಖ ಸೈಕ್ಲೋನಿಕ್ ಪರಿಚಲನೆಗಳು ಸಕ್ರಿಯವಾಗಿದ್ದು, ಇವು ಮುಂಗಾರು ಮಾರುತಗಳಿಗೆ ಶಕ್ತಿ ತುಂಬುತ್ತಿವೆ. ಮಹಾರಾಷ್ಟ್ರ ಕರಾವಳಿಯ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಮೇಲ್ಮೈ ಗಾಳಿಯ ಚಂಡಮಾರುತದ ಪರಿಚಲನೆಯು ಮುಂದುವರಿದಿದ್ದು, ಇದು ಸದ್ಯ ಸಮುದ್ರ ಮಟ್ಟದಿಂದ 5.8 ಕಿಲೋಮೀಟರ್ ಎತ್ತರದಲ್ಲಿ ಕಂಡುಬರುತ್ತಿದೆ. ಇದು ಕರಾವಳಿ ಕರ್ನಾಟಕಕ್ಕೆ ಪೂರಕ ಗಾಳಿಯನ್ನು ತರುತ್ತಿದೆ.

ಉತ್ತರ ತೆಲಂಗಾಣ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಮೇಲಿನ ವಾತಾವರಣದಲ್ಲೂ ಸುಳಿಗಾಳಿ ಮುಂದುವರಿದಿದ್ದು, ಇದು ಕೂಡ ಸಮುದ್ರ ಮಟ್ಟದಿಂದ 5.8 ಕಿಲೋಮೀಟರ್ ಎತ್ತರದಲ್ಲಿದೆ. ಕಳೆದ ಕೆಲವು ದಿನಗಳಿಂದ ಮಳೆಗೆ ಕಾರಣವಾಗಿದ್ದ ಪ್ರಮುಖ ಮೇಲ್ಮೈ ಸುಳಿಗಾಳಿ ಈಗ ದುರ್ಬಲಗೊಂಡಿವೆ. ಉತ್ತರ ಒಳನಾಡಿನಿಂದ ರಾಯಲಸೀಮೆ, ದಕ್ಷಿಣ ಒಳನಾಡು ಮತ್ತು ತಮಿಳುನಾಡು ಮಾರ್ಗವಾಗಿ ಕೊಮೊರಿನ್ ಪ್ರದೇಶದವರೆಗೆ ವ್ಯಾಪಿಸಿದ್ದ ಗಾಳಿಯ ಟ್ರಫ್ ಕೂಡ ಸದ್ಯ ಕ್ಷೀಣಿಸಿದೆ. ಇದೇ ಕಾರಣದಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಕೊಂಚ ದುರ್ಬಲಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+