Karnataka Weather: ಕರ್ನಾಟಕದ ಈ ಭಾಗದಲ್ಲಿ ಇನ್ನೊಂದು ವಾರ ಭಾರೀ ಮಳೆ, ಶೀತಗಾಳಿ ಎಚ್ಚರಿಕೆ!
Karnataka Weather: ಕರ್ನಾಟಕದ ವಿವಿಧ ಭಾಗದಲ್ಲಿ ಕಳೆದ ಒಂದು ವಾರದಿಂದ ಮಳೆ ಇಳಿಕೆಯಾಗಿತ್ತು. ಇದೀಗ ನವೆಂಬರ್ 16ರಿಂದ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಅಲ್ಲದೇ ಇದರೊಂದಿಗೆ ರಾಜ್ಯದ ವಿವಿಧ ಭಾಗದಲ್ಲಿ ಚಳಿ ಪ್ರಮಾಣವೂ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಹಾಗೂ ಈ ವಾರ ಕರ್ನಾಟಕದ ಹವಾಮಾನವು ಯಾವ ರೀತಿ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ನವೆಂಬರ್ 22ರ ವರೆಗೆ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ದಕ್ಷಿಣ ಶ್ರೀಲಂಕಾ ಹಾಗೂ ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮೇಲಿನ ವಾಯು ಚಂಡಮಾರುತ ಪ್ರಭಾವದ ಅಡಿಯಲ್ಲಿ ನವೆಂಬರ್ 15ರಂದು ಶ್ರೀಲಂಕಾದ ಕರಾವಳಿಯ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಂಡಿದೆ.

ಈ ವಾಯು ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿದ್ದು, ಮುಂದಿನ 24 ಗಂಟೆಯ ಅವಧಿಯಲ್ಲಿ ನಿಧಾನವಾಗಿ ಪಶ್ಚಿಮ - ಉತ್ತರ ಪಶ್ಚಿಮಕ್ಕೆ ಚಲಿಸುವ ಸಾಧ್ಯತೆ ಇದೆ. ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲಲಿ ಚಂಡಮಾರುತದ ಪರಿಚಲನೆ ಇರಲಿದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.
ತಾಪಮಾನದ ಎಚ್ಚರಿಕೆ: ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಇದರೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳ ವರೆಗೆ ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ವಿಜಯಪುರ ಹಾಗೂ ಬಾಲಕೋಟೆ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ವರೆಗೆ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ ?
ಇನ್ನು ಬೆಂಗಳೂರಿನಲ್ಲಿ ಮುಂದಿನ ವಾರದಿಂದ ಮಳೆ ಆರ್ಭಟ ಜೋರಾಗಲಿದೆ. ಬಹುತೇಕ ಮೋಡ ಕವಿದ ಆಕಾಶ ಇರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇರುತ್ತದೆ. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಮುಂದಿನ ವಾರದಿಂದ ಕರ್ನಾಟಕದಲ್ಲಿ ಭಾರೀ ಮಳೆ
ಇನ್ನು ಮೂರು ದಿನಗಳಲ್ಲಿ ರಾಜ್ಯದಲ್ಲಿ ಮಳೆ ತೀವ್ರತೆ ಹೆಚ್ಚಳವಾಗಲಿದೆ. ಅಲ್ಲಿಯ ವರೆಗೆ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ ಎಂದು ಹೇಳಲಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ನವೆಂಬರ್ 18ರಿಂದ ನವೆಂಬರ್ 21ರ ವರೆಗೆ ಮಳೆ ಆಗಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ.
ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ನವೆಂಬರ್ 17ರಿಂದ ದಕ್ಷಿಣ ಕರ್ನಾಟಕದ ವಿವಿಧ ಭಾಗದಲ್ಲೂ ಧಾರಾಕಾರ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಅಲ್ಲದೇ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications