Karnataka Weather: ರಾಜ್ಯಾದ್ಯಂತ ತೀವ್ರ ಚಳಿ ಮುನ್ಸೂಚನೆ, ಕರಾವಳಿಯಲ್ಲಿ ಅಧಿಕ ತಾಪಮಾನ
Karnataka Cold Weather Alert: ಕರ್ನಾಟಕದಾದ್ಯಂತ ಮಳೆ ಅಬ್ಬರ ಕೊನೆಗೊಂಡಿದೆ. ಎಲ್ಲೆಡೆ ಅಧಿಕ ತಾಪಮಾನ ಹಾಗೂ ಅಲ್ಲಲ್ಲಿ ಮೈಕೊರೆವ ಚಳಿಯ ವಾತಾವರಣ ಸೃಷ್ಟಿಯಾಗಿದೆ. ಬಿಸಿಲು ಹೆಚ್ಚಾಗಿ ಕಂಡು ಬರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಮೈಕೊರೆವ ಚಳಿ ಸೃಷ್ಟಿಯಾಗಿದೆ. ಬೆಳಗ್ಗೆ ದಟ್ಟ ಮಂಜು, ಚಳಿ ಆವರಿಸಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡು ಬರಲಿದೆ. ಬೆಂಗಳೂರಿನಲ್ಲೂ ಅಧಿಕ ಚಳಿ ಮುಂದುವರಿವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಕ್ರಮೇಣ ಕಡಿಮೆಯಾದ ಬೆನ್ನಲ್ಲೆ ಚಳಿ ಆವರಿಸಿಕೊಂಡಿದೆ. ಕರಾವಳಿ ಭಾಗದಲ್ಲಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಚಳಿ ಆವರಿಸಿದೆ. ನಂತರ ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಆವರಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಚಳಿ ನಿರೀಕ್ಷೆ ಇದೆ.

ಕರಾವಳಿಯಲ್ಲಿ ರಾಜ್ಯದ ಅತ್ಯಧಿಕ ತಾಪಮಾನ!
ಉತ್ತರ ಕರ್ನಾಟಕದ ಒಂದೆರಡು ಜಿಲ್ಲೆ ಮತ್ತು ಕರಾವಳಿ ಭಾಗದಲ್ಲಿ ಅಧಿಕ ತಾಪಮಾನ ದಾಖಲಾಗಿದೆ. ಬೆಳಗ್ಗೆ ಮತ್ತು ರಾತ್ರಿ ಚಳಿ ಕಂಡು ಬರುತ್ತಿದೆ. ದಟ್ಟ ಮಂಜು ಆವರಿಸಿಕೊಳ್ಳುತ್ತದೆ. ಉಳಿದಂತೆ ಒಣಹವೆ ವಾತಾವರಣ ಸೃಷ್ಟಿಯಾಗುತ್ತಿದೆ. ಕಾರವಾರದಲ್ಲಿ 35 ಡಿಗ್ರಿ ಸೆಲ್ಸಿಯಸ್, ಹೊನ್ನಾವರ 34.9 ಡಿಗ್ರಿ ಸೆಲ್ಸಿಯಸ್, ಮಂಗಳೂರು ವಿಮಾನ ನಿಲ್ದಾಣ 32 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 33 ಡಿಗ್ರಿ ಸೆಲ್ಸಿಯಸ್, ಕಲಬುರಗಿ 32.5 ಡಿಗ್ರಿ ಸೆಲ್ಸಿಯಸ್, ಹಾವೇರಿ 30ಡಿಗ್ರಿ ಸೆಲ್ಸಿಯಸ್, ವಿಜಯಪುರ 30 ಡಿಗ್ರಿ ಸೆಲ್ಸಿಯಸ್, ರಾಯಚೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಬೆಂಗಳೂರು ಹವಾಮಾನ, ಚಳಿ ಮುನ್ಸೂಚನೆ
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾಣ ಪ್ರಮಾಣ ಹಾಗೂ ಚಳಿ ಪ್ರಮಾಣ ಹೆಚ್ಚಾಗಬಹುದೆಂದು ರಾಜ್ಯ ಹವಾಮಾನ ಇಲಾಖೆ ಅಂದಾಜಿಸಿದೆ. ಇನ್ನೂ ಬೆಂಗಳೂರಿನ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಸೃಷ್ಟಿಯಾಗಲಿದೆ. ಬೆಳಗ್ಗೆ ದಟ್ಟ ಮಂಜು ಆವರಿಸಲಿದೆ. ಹೆಚ್ಚಿನ ಚಳಿ ನಿರೀಕ್ಷಿಸಲಾಗಿದೆ. ಆಗಾಗ ಬಿಸಿಲು ಕಣ್ಮರೆಯಾಗಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ಇಂದಿನ ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications