Karnataka Weather: ರಾಜ್ಯ ಹವಾಮಾನ ವರದಿ: ಒಳನಾಡು ಜಿಲ್ಲೆಗಳಿಗೆ ಶೀತ ಅಲೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಶೀತ ಅಲೆಯ ಪ್ರಭಾವ ಮುಂದುವರಿದಿದೆ. ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಚಳಿ ದಾಖಲಾಗಿದೆ. ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸಿದೆ. ಇದು ಮುಂದಿನ ಒಂದು ವಾರ ಕಾಲ ಹೀಗೆಯೇ ಇರಲಿದೆ. ಕರಾವಳಿ ಭಾಗದಲ್ಲಿ ತಾಪಮಾನದಲ್ಲಿ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಕರ್ನಾಟಕ ಕೇಂದ್ರವು ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಉಷ್ಣಮಟ್ಟದಲ್ಲಿ ಉತ್ತರ ಪೂರ್ವದಿಂದ ಪೂರ್ವ ದಿಕ್ಕಿಗೆ ತೇವಭರಿತ ಗಾಳಿ ಬೀಸಲಿದೆ. ಒಳನಾಡು ಕರ್ನಾಟಕದ ಎರಡು ಜಿಲ್ಲೆಗಳಾದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಾಮಾನ್ಯ ಕನಿಷ್ಠ ತಾಪಮಾನದಲ್ಲಿ 5-7 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ ಆಗಿದೆ. ಇದರಿಂದಾಗಿ ದಟ್ಟ ಮಂಜು ಸಹಿತ ವ್ಯಾಪಕ ಚಳಿ ಕಂಡು ಬಂದಿದೆ. ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಇದೇ ರೀತಿಯ ಗರಿಷ್ಠ ಚಳಿ ಮುಂದುವರಿಯಲಿದ್ದು, ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ಕೊಟ್ಟಿದ್ದಾರೆ.

ಇನ್ನುಳಿದಂತೆ ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬೆಳಗಾವಿ, ವಿಜಯನಗರ, ಬಳ್ಳಾರಿ, ದಾವಣಗೆರೆ ವ್ಯಾಪ್ತಿಯಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಲಿದೆ. ಹೀಗಾಗಿ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಮತ್ತು ಚಳಿ ವಾತಾವರಣ ನಿರ್ಮಾಣವಾಗಲಿದೆ. ಉಳಿದಂತೆ ರಾಜ್ಯಾದ್ಯಂತ ಇತರ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. ಈಗಿರುವ ಹವಾಮಾನ ಸ್ಥಿತಿಯೇ ಮುಂದುವರಿಯಲಿದೆ.
ರಾಜ್ಯದಲ್ಲಿ ಒಣ ಹವೆ ಅಲರ್ಟ್
ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗಲು ಗರಿಷ್ಠ ತಾಪಮಾನ ಕಂಡು ಬರಲಿದ್ದು, ಎಲ್ಲೆಡೆ ಒಣಹವೆ ಕಂಡು ಬರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಕೆಲವು ಬಡಾವಣೆಗಳಲ್ಲಿ ಬೆಳಗ್ಗೆ ದಟ್ಟ ಮಂಜು ಆವರಿಸುವ ಸಂಭವವಿದೆ. ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇದರ ಹೊರತು ಹೆಚ್ಚಿನ ಚಳಿ ಮತ್ತು ಶಿತ ಅಲೆಯ ಎಚ್ಚರಿಕೆ ಸದ್ಯಕ್ಕೆ ಇಲ್ಲ.
ಚಳಿಗಾಲ: ಆರೋಗ್ಯ ಇಲಾಖೆ ಅಲರ್ಟ್
ಚಳಿಗಾಲದಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಇನ್ಫ್ಲುಯೆಂಜ್ಜಾ ಕಾಯಿಲೆಗಳು, ಉಸಿರಾಟದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇದೆ. ಶಿತ, ಚಳಿ, ಜ್ವರ, ಕೆಮ್ಮು ಹಾಗೂ ಇನ್ನಿತರ ಉಸಿರಾಟದ ತೊಂದರೆಗಳು ಉಂಟಾಗದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕಣ್ಗಾವಲು ಹೆಚ್ಚಿಸುವ ಜೊತೆಗೆ ವೆಂಟಿಲೇಟರ್ಗಳು ಕಾರ್ಯ ನಿರ್ವಹಣೆ, ಎನ್95 ಮಾಸ್ಕ್ ಸೇರಿದಂತೆ ಚಿಕಿತ್ಸೆಗೆ ಬೇಕಾದ ಎಲ್ಲ ಸಾಧನಗಳನ್ನು ಖಚಿತಪಡಿಸಿಕೊಳ್ಳಬೇಕು. ಚಳಿಗಾದಲ್ಲಿ ಆರೋಗ್ಯ ಕಾಳಜಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ರಾಜ್ಯ ಆರೋಗ್ಯ ಇಲಾಖೆ ಎಲ್ಲ ಜಿಲ್ಲೆಗಳಿಗೂ ಮಾರ್ಗಸೂಚಿ ಹೊರಡಿಸಿ ನಿರ್ದೇಶನ ನೀಡಿದೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications