Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್
Karnataka Weather Mar 12: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಿಸಿಲು ಹೆಚ್ಚಾಗುತ್ತಿದೆ. ಮುಂದಿನ ವಾರದಿಂದ ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ, ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಮತ್ತು ಶ್ರೀಲಂಕಾದ ಉತ್ತರ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ದಕ್ಷಿಣ ಜಾರ್ಖಂಡ್ ಮತ್ತು ಛತ್ತೀಸ್ಗಢದ ಪಕ್ಕದಲ್ಲಿರುವ ಉತ್ತರ ಭಾಗದಿಂದ ಕರ್ನಾಟಕದ ದಕ್ಷಿಣ ಒಳನಾಡಿನವರೆಗಿನ ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ. ಇನ್ನು ಲಕ್ಷದ್ವೀಪದ ಪೂರ್ವದಲ್ಲಿ 75°E ಉದ್ದಕ್ಕೂ ಅಕ್ಷಾಂಶ 6°N ನ ಉತ್ತರಕ್ಕೆ ತಗ್ಗು ಪ್ರದೇಶವು ಪಶ್ಚಿಮಕ್ಕೆ ಚಲಿಸಿದೆ ಹೀಗಾಗಿ, ಕರ್ನಾಟಕದಾದ್ಯಂತ 7 ದಿನಗಳ ಅವಧಿಗೆ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಇದೇ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮಳೆ
ಇನ್ನು ಕರ್ನಾಟಕದ ವಿವಿಧ ಭಾಗದಲ್ಲಿ ಈ ವಾರದಿಂದ ಮಳೆ ಪ್ರಾರಂಭವಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಾರ್ಚ್ 15ರಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಇನ್ನು ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶ ಶಿವಮೊಗ್ಗದಲ್ಲಿ ಕನಿಷ್ಠ ತಾಪಮಾನವು 15.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕರಾವಳಿಯ ಹಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಆದಾಗ್ಯೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿ ಸೆಲ್ಸಿಯಸ್ ಇದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್ ಗಮನಾರ್ಹವಾಗಿ ಕಡಿಮೆಯಾಗಿದೆ. ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿತ್ತು.
ಬೆಂಗಳೂರು - ಕರ್ನಾಟಕದಲ್ಲಿ ತಾಪಮಾನ ಹೇಗಿದೆ
ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಅವಧಿಗೆ ಒಣಹವೆ ಇರಲಿದೆ. ಮುಂದಿನ ಎರಡು ದಿನಗಳ ವರೆಗೆ ಕರಾವಳಿಯಲ್ಲಿ ಬಿಸಿ ಹಾಗೂ ತೇವಾಂಶದ ವಾತಾವರಣ ಇರುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳಲ್ಲಿ ಅಲ್ಲಲ್ಲಿ ಬಿಸಿಲು ಹೆಚ್ಚಾಗಲಿದೆಯಾದರೂ, ರಾಜ್ಯದಲ್ಲಿ ಮಳೆ ಆಗುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಹುತೇಕ ಶುಭ್ರ ಆಕಾಶ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಹಾಗೂ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications