Government Offices: ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿ
ರಾಜ್ಯದಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಬೇಕು ಎಂದು ಹಿಂದಿನಿಂದಲೂ ಬೇಡಿಕೆ ಇದೆ. ಅದರಲ್ಲೂ ಬೇಸಿಗೆ ಸಮಯದಲ್ಲಿ ಕಚೇರಿಗಳ ಸಮಯ ಬದಲಾಗಿದ್ದರೆ ಎಷ್ಟು ಚೆನ್ನಾಗಿರುತ್ತೆ? ಎಂದು ದೇವರಲ್ಲಿ ಪ್ರಾರ್ಥಿಸೋರೂ ಇದ್ದಾರೆ. ಬೇಸಿಗೆಯಲ್ಲಿ ಕಚೇರಿಗಳಿಗೆ ಅಲೆಯುವ ಸಾರ್ವಜನಿಕರಿಗೂ ಭಾರಿ ಸಮಸ್ಯೆ ಎದುರಾಗುತ್ತೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯವನ್ನು ಬದಲಿಸಲಾಗಿದೆ. ಇದೀಗ ಕರ್ನಾಟಕದಲ್ಲೂ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾಗುವ ಸಾಧ್ಯತೆ ಇದೆ. ಈ ಬಗ್ಗೆ ಕಾಂಗ್ರೆಸ್ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದಾರೆ.
ಹೌದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ. ರಾಯಚೂರಿನಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೇ ಬಿಸಿಲು ಹೆಚ್ಚಾಗಿ ತಾಪಮಾನವು 43ರಿಂದ 44 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪುತ್ತಿದೆ. ಈ ಹಿನ್ನೆಲೆ ಸಾರ್ವಜನಿಕರು ಜನರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಇನ್ನು ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಾಹ್ನ 12ರಿಂದ 3ರವರೆಗೆ ಹೊರಗೆ ಕೆಲಸ ಮಾಡಬೇಡಿ. ಮನೆ ಅಥವಾ ಕಚೇರಿಯಲ್ಲೇ ಇರಿ ಎಂದು ಸಲಹೆ ನೀಡಿದ್ದಾರೆ.

ಈಗ ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯ ಬದಲಾಯಿಸಬೇಕು ಎಂಬ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಧ್ಯಾಹ್ನದ ವೇಳೆ ಅಧಿಕಾರಿಗಳು ಫೀಲ್ಡ್ ವಿಸಿಟ್ ಮಾಡೋದನ್ನು ನಿಲ್ಲಿಸಿ. ಸರ್ಕಾರಿ ಅಧಿಕಾರಿಗಳು ಮಧ್ಯಾಹ್ನ 12ರಿಂದ 3ರವರೆಗೆ ಯಾವುದೇ ಫೀಲ್ಡ್ ವಿಸಿಟ್ ಮಾಡಬೇಡಿ. ಬೆಳಿಗ್ಗೆ ಅಥವಾ ಸಂಜೆ ವೇಳೆ ಮಾಡಿಕೊಳ್ಳುವುದು ಉತ್ತಮ. ಬಿಸಿಲು ಹೆಚ್ಚಾಗಿರುವುದಕ್ಕೆ ನಾನು ಸರ್ಕಾರ ರಜೆ ಕೊಡಬೇಕು ಎಂದು ಹೇಳಲ್ಲ. ಇದಕ್ಕೆ ಬದಲಾಗಿ ಸಮಯ ಬದಲಾವಣೆ ಮಾಡಿಕೊಳ್ಳುವುದೇ ಒಳ್ಳೆಯದು ಎಂದು ಅಭಿಪ್ರಾಯ ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ 44 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪಿದೆ. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಮಧ್ಯಾಹ್ನ ಸಮಯದಲ್ಲಿ ಮನೆಯೊಳಗೆ ಇರುವುದು ಒಳ್ಳೆಯದು. ಬಿಸಿಲಿನ ಬಗ್ಗೆ ಶಾಲೆಗಳು ಕೂಡ ಗಮನ ಕೊಟ್ಟರೆ ಒಳ್ಳೆಯದು. ಸೇವಿಸುವ ಆಹಾರದ ಬಗ್ಗೆಯೂ ಗಮನ ಕೊಡಿ. ಬೇಸಿಗೆಯಿಂದ ತಪ್ಪಿಸಿಕೊಳ್ಳಲು ಹೆಚ್ಚಾಗಿ ನೀರು ಕುಡಿಯಿರಿ. ಬಿಸಿಲಿನ ತಾಪ ಹೆಚ್ಚಳದ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ನ ಅಗತ್ಯವೇನಿಲ್ಲ. ಆದರೆ ನಮ್ಮಲ್ಲಿ ಎಲ್ಲ ಸೌಲಭ್ಯಗಳಿವೆ ಎಂದು ಹೇಳಿದ್ದಾರೆ.

ಎಂಟು ನೂತನ ಆರೋಗ್ಯ ಕೇಂದ್ರ: ರಾಯಚೂರು ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಮತ್ತು ಪ್ರತಿಯೊಬ್ಬರಿಗೂ ಗುಣಮಟ್ಟದ ಚಿಕಿತ್ಸೆ ದೊರೆಯುವಂತೆ ಮಾಡಲು ಜಿಲ್ಲೆಗೆ ಎಂಟು ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನೀಡಲಾಗಿದೆ. ಹೊಸ ತಾಲ್ಲೂಕಿಗೆ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದೆ. ಕಳೆದ ಒಂದು ವರ್ಷದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಹಲವು ಆರೋಗ್ಯ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ನಮ್ಮ ಕಾರ್ಯಗಳು ಸೂಚಿಸುತ್ತವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications