Karnataka Weather Report: ಹವಾಮಾನ ಇಲಾಖೆಯ ಮಹತ್ವದ ಸೂಚನೆ
ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನ ಬೇಗೆಯಲ್ಲಿ ಬೆಂದಿರುವ ಜನತೆ ಮಳೆಗಾಗಿ ಕಾದು ಕೂತಿದ್ದಾರೆ, ಈ ನಡುವೆಯೇ ಹವಾಮಾನ ಇಲಾಖೆ ಒಳ್ಳೆಯ ಸುದ್ದಿ ನೀಡಿದೆ.
ಏಪ್ರಿಲ್ 21 ರಿಂದ ಏಪ್ರಿಲ್ 25 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 21, 22 ಮತ್ತು ಏಪ್ರಿಲ್ 25 ರಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಕೂಡ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 23ರಂದು ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು, ಉಳಿದ ನಾಲ್ಕು ದಿನಗಳು ಮಳೆಯಾಗಬಹುದು ಎಂದು ಹೇಳಿದೆ. ಗುಡುಗು ಮಿಂಚಿನ ಬಗ್ಗೆ ಎಚ್ಚರದಿಂದ ಇರುವಂತೆ ಜನರಿಗೆ ಮನವಿ ಮಾಡಿದೆ.
ದಕ್ಷಿಣ ಒಳನಾಡಿನಲ್ಲಿ ವರುಣನ ಸಿಂಚನ
ದಕ್ಷಿಣ ಒಳನಾಡಿನಲ್ಲಿ ಮಳೆಯ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 21ರಂದು ಸಂಜೆ ಅಥವಾ ರಾತ್ರಿ ದಕ್ಷಿಣ ಒಳನಾಡಿನ 17 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ನಿರಂತರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಿದ್ದು, ಮೋಡ ಕವಿದ ವಾತಾವರಣ ಇರಲಿದ್ದು, ಶುಕ್ರವಾರ ರಾತ್ರಿ ನಗರದ ಗಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಿದೆ. ಅದರಲ್ಲೂ ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿನ ಹೊರ ವಲಯಗಳಲ್ಲೆ ಹೆಚ್ಚಿನ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications