Karnataka Weather: ದಕ್ಷಿಣದಲ್ಲಿ ತಂಪೆರೆದ ಪೂರ್ವ ಮುಂಗಾರು, ಉತ್ತರದಲ್ಲಿ ಮುಂದುವರೆದ ಬಿಸಿಲ ಝಳ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸುಡುತ್ತಿದ್ದ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ಪೂರ್ವ ಮುಂಗಾರು ಮಳೆಯು ತಂಪೆರೆಯುವ ಮೂಲಕ ಭಾರಿ ನೆಮ್ಮದಿಯನ್ನು ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಇಂದಿನ (ಮೇ 7) ವರದಿಗಳ ಪ್ರಕಾರ, ಕರ್ನಾಟಕದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಪರಿಸ್ಥಿತಿಗಳು ಕಂಡುಬರುತ್ತಿವೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲ ಝಳ ಇನ್ನೂ ಕಡಿಮೆಯಾಗಿಲ್ಲ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ

ಹವಾಮಾನ ಇಲಾಖೆಯ ವರದಿಯಂತೆ, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಇಂದು ಬಹುತೇಕ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

Karnataka Weather

ನಗರದಲ್ಲಿ ಕನಿಷ್ಠ ಉಷ್ಣಾಂಶ 23°C ಮತ್ತು ಗರಿಷ್ಠ ಉಷ್ಣಾಂಶ 34°C ನಷ್ಟು ದಾಖಲಾಗುವ ಅಂದಾಜಿದೆ. ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ನಗರದ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದ್ದರೂ, ಏಕಾಏಕಿ ಸುರಿಯುವ ಮಳೆಯಿಂದಾಗಿ ಟ್ರಾಫಿಕ್ ಸಮಸ್ಯೆ ಮತ್ತು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

ಕರಾವಳಿ ಕರ್ನಾಟಕದ ಹವಾಮಾನ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದಲ್ಲಿ ಕೂಡ ಸಾದಾರಣ ಮಳೆಯಾಗಲಿದೆ. ಇಲ್ಲಿ ತಾಪಮಾನ 23 ಡಿಗ್ರಿ ಸೆಲ್ಸಿಯಸ್‌ನಿಂದ 33 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದ್ದು, ಸಮುದ್ರ ಮಟ್ಟದಲ್ಲಿ ಗಾಳಿಯ ವೇಗ ಮತ್ತು ಅಲೆಗಳ ಅಬ್ಬರ ಸಾಮಾನ್ಯವಾಗಿರಲಿದೆ. ಅರಬ್ಬಿ ಸಮುದ್ರದ ಭಾಗದಲ್ಲಿ ಹಾಗೂ ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಈ ಭಾಗದಲ್ಲಿ ವಾತಾವರಣ ತಂಪಾಗಿರಲಿದೆ ಎಂದು ವರದಿಗಳು ತಿಳಿಸಿವೆ.

ಉತ್ತರ ಕರ್ನಾಟಕದಲ್ಲಿ ಮುಂದುವರೆದ ಬಿಸಿಲ ಬೇಗೆ

ರಾಜ್ಯದ ದಕ್ಷಿಣ ಭಾಗ ಮಳೆಯಿಂದ ತಂಪಾಗಿದ್ದರೆ, ಉತ್ತರ ಮತ್ತು ಮಧ್ಯ ಕರ್ನಾಟಕದ ಹಲವು ಭಾಗಗಳು ಇನ್ನು ಬಿಸಿಲಿನ ತಾಪದಲ್ಲಿಯೇ ಬೇಯುತ್ತಿವೆ. ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಕಳೆದ ವಾರ ಕಲಬುರಗಿಯಲ್ಲಿ 44 ಡಿಗ್ರಿಗೂ ಹೆಚ್ಚು ತಾಪಮಾನ ದಾಖಲಾಗಿ ಆತಂಕ ಸೃಷ್ಟಿಸಿತ್ತು.

ಪೂರ್ವ ಮುಂಗಾರು ಮಳೆಯು ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ, ಬಿತ್ತನೆಗೆ ಅಣಿಯಾಗುತ್ತಿರುವ ರೈತರಿಗೆ ಆಶಾಭಾವನೆ ಮೂಡಿಸಿದೆ. ಆದರೆ ಅಕಾಲಿಕ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದ ಮಾವು ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಗಳಿರುವುದರಿಂದ ರೈತರು ಎಚ್ಚರಿಕೆ ವಹಿಸಬೇಕಾಗಿದೆ. ಮುನ್ಸೂಚನೆಯಂತೆ, ಮೇ 12 ರವರೆಗೂ ರಾಜ್ಯದ ವಿವಿಧೆಡೆ ಇದೇ ರೀತಿಯ ಮಳೆ ಹಾಗೂ ಹವಾಮಾನ ಮುಂದುವರೆಯುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+