Karnataka Weather Updates: ಕರ್ನಾಟಕದಲ್ಲಿ ಚಳಿ ಅಲ್ಪ ಇಳಿಕೆ: 5 ದಿನಗಳ ಹವಾಮಾನ ವರದಿ
Karnataka Weather Updates: ಕರ್ನಾಟಕದ ವಿವಿಧ ಭಾಗದಲ್ಲಿ ಚಳಿ ಮುಂದುವರಿದಿದೆ. ಇನ್ನು ಮುಂದಿನ ಐದು ದಿನಗಳ ವರೆಗೆ ಹವಾಮಾನದಲ್ಲಿ ದೊಡ್ಡ ವ್ಯತ್ಯಾಸವಿಲ್ಲ. ಆದರೆ ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗುತ್ತಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ.
ಉತ್ತರ ಕೇರಳ ಮತ್ತು ನೆರೆಹೊರೆ ಪ್ರದೇಶಗಳ ಮೇಲ್ಭಾಗದ ವಾಯು ಚಂಡಮಾರುತ ಪರಿಚಲನೆ ಇದ್ದು, ಇದೀಗ ಸರಾಸರಿ ಸಮುದ್ರ ಮಟ್ಟದಿಂದ 15 ರಿಂದ 3.1 ಕಿ.ಮೀ ಎತ್ತರದಲ್ಲಿ ಕಂಡುಬಂದಿದೆ. ಕೇರಳ - ಕರ್ನಾಟಕ ಕರಾವಳಿಯಲ್ಲಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಟ್ರಫ್ ಕಡಿಮೆ ಗುರುತಿಸಲ್ಪಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಸಮತಟ್ಟಾದ ಪ್ರದೇಶ ಮಂಡ್ಯ ಎಡ್ಬ್ಯೂಎಸ್ನಲ್ಲಿ ಕನಿಷ್ಠ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

5 ದಿನಗಳ ಹವಾಮಾನ ಹೇಗಿದೆ
ಇನ್ನು ಮುಂದಿನ 5 ದಿನಗಳ ವರೆಗೆ ಹವಾಮಾನದಲ್ಲಿ ಹೆಚ್ಚಿನ ವ್ಯತ್ಯಾಸ ಇಲ್ಲ. ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?
ಇನ್ನು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ 48 ಗಂಟೆಯ ಅವಧಿಯಲ್ಲಿ ಶುಭ್ರ ಆಕಾಶ ಇರಲಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ ಆಗಿದ್ದು, 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್ ಆಗಿದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ 1.6 ಡಿಗ್ರಿ ಸೆಲ್ಸಿಯಸ್ನಿಂದ 3.0 ಡಿಗ್ರಿ ಸೆಲ್ಸಿಯಸ್ ಇತ್ತು. ಇನ್ನು ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಧಾರವಾಡ, ಬೀದರ್, ಬಾಗಲಕೋಟೆ, ಗದಗ ಮತ್ತು ವಿಜಯಪುರ ಮತ್ತು ಹಾಸನ, ಮಂಡ್ಯ ಎಡಬ್ಲ್ಯೂಎಸ್, ಬೆಂಗಳೂರು ಕೆಐಎಎಲ್ ಎಪಿ, ಬೆಂಗಳೂರು ಹೆಚ್ಎಎಲ್ ಇಂಟರ್ ಎಪಿ, ದಾವಣಗೆರೆ ಮತ್ತು ಶಿವಮೊಗ್ಗದ ಭಾಗದಲ್ಲಿ ಕನಿಷ್ಠ ತಾಪಮಾನವು 13.1 ಡಿಗ್ರಿ ಸೆಲ್ಸಿಯಸ್ನಿಂದ 15.5 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ.
ಉತ್ತರ ಒಳ ಕರ್ನಾಟಕದ ಹಾವೇರಿ, ಬೆಳಗಾವಿ ವಿಮಾನ ನಿಲ್ದಾಣ, ರಾಯಚೂರು, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆ. ದಕ್ಷಿಣ ಒಳ ಕರ್ನಾಟಕದ ಬೆಂಗಳೂರು ನಗರ, ಮೈಸೂರು, ಚಿತ್ರದುರ್ಗ ಸೇರಿದಂತೆ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 15.6 ಡಿಗ್ರಿ ಸೆಲ್ಸಿಯಸ್ನಿಂದ 19.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳ ಕರ್ನಾಟಕದ ಚಿಂತಾಮಣಿ ಭಾಗದಲ್ಲಿ 9.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಕರ್ನಾಟಕದ ಹೊನ್ನಾವರ, ಮಂಗಳೂರು ವಿಮಾನ ನಿಲ್ದಾಣ, ಕಾರವಾರ, ಶಕ್ತಿನಗರದ ಭಾಗದಲ್ಲಿ 21.1ರಿಂದ 24.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು












Click it and Unblock the Notifications