Karnataka Weather Updates: ಕರ್ನಾಟಕದಲ್ಲಿ ಚಳಿ ಅಲ್ಪ ಇಳಿಕೆ: 5 ದಿನಗಳ ಹವಾಮಾನ ವರದಿ
Karnataka Weather Updates: ಕರ್ನಾಟಕದ ವಿವಿಧ ಭಾಗದಲ್ಲಿ ಚಳಿ ಮುಂದುವರಿದಿದೆ. ಇನ್ನು ಮುಂದಿನ ಐದು ದಿನಗಳ ವರೆಗೆ ಹವಾಮಾನದಲ್ಲಿ ದೊಡ್ಡ ವ್ಯತ್ಯಾಸವಿಲ್ಲ. ಆದರೆ ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗುತ್ತಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ.
ಉತ್ತರ ಕೇರಳ ಮತ್ತು ನೆರೆಹೊರೆ ಪ್ರದೇಶಗಳ ಮೇಲ್ಭಾಗದ ವಾಯು ಚಂಡಮಾರುತ ಪರಿಚಲನೆ ಇದ್ದು, ಇದೀಗ ಸರಾಸರಿ ಸಮುದ್ರ ಮಟ್ಟದಿಂದ 15 ರಿಂದ 3.1 ಕಿ.ಮೀ ಎತ್ತರದಲ್ಲಿ ಕಂಡುಬಂದಿದೆ. ಕೇರಳ - ಕರ್ನಾಟಕ ಕರಾವಳಿಯಲ್ಲಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಟ್ರಫ್ ಕಡಿಮೆ ಗುರುತಿಸಲ್ಪಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಸಮತಟ್ಟಾದ ಪ್ರದೇಶ ಮಂಡ್ಯ ಎಡ್ಬ್ಯೂಎಸ್ನಲ್ಲಿ ಕನಿಷ್ಠ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

5 ದಿನಗಳ ಹವಾಮಾನ ಹೇಗಿದೆ
ಇನ್ನು ಮುಂದಿನ 5 ದಿನಗಳ ವರೆಗೆ ಹವಾಮಾನದಲ್ಲಿ ಹೆಚ್ಚಿನ ವ್ಯತ್ಯಾಸ ಇಲ್ಲ. ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?
ಇನ್ನು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ 48 ಗಂಟೆಯ ಅವಧಿಯಲ್ಲಿ ಶುಭ್ರ ಆಕಾಶ ಇರಲಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ ಆಗಿದ್ದು, 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್ ಆಗಿದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ 1.6 ಡಿಗ್ರಿ ಸೆಲ್ಸಿಯಸ್ನಿಂದ 3.0 ಡಿಗ್ರಿ ಸೆಲ್ಸಿಯಸ್ ಇತ್ತು. ಇನ್ನು ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಧಾರವಾಡ, ಬೀದರ್, ಬಾಗಲಕೋಟೆ, ಗದಗ ಮತ್ತು ವಿಜಯಪುರ ಮತ್ತು ಹಾಸನ, ಮಂಡ್ಯ ಎಡಬ್ಲ್ಯೂಎಸ್, ಬೆಂಗಳೂರು ಕೆಐಎಎಲ್ ಎಪಿ, ಬೆಂಗಳೂರು ಹೆಚ್ಎಎಲ್ ಇಂಟರ್ ಎಪಿ, ದಾವಣಗೆರೆ ಮತ್ತು ಶಿವಮೊಗ್ಗದ ಭಾಗದಲ್ಲಿ ಕನಿಷ್ಠ ತಾಪಮಾನವು 13.1 ಡಿಗ್ರಿ ಸೆಲ್ಸಿಯಸ್ನಿಂದ 15.5 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ.
ಉತ್ತರ ಒಳ ಕರ್ನಾಟಕದ ಹಾವೇರಿ, ಬೆಳಗಾವಿ ವಿಮಾನ ನಿಲ್ದಾಣ, ರಾಯಚೂರು, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆ. ದಕ್ಷಿಣ ಒಳ ಕರ್ನಾಟಕದ ಬೆಂಗಳೂರು ನಗರ, ಮೈಸೂರು, ಚಿತ್ರದುರ್ಗ ಸೇರಿದಂತೆ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 15.6 ಡಿಗ್ರಿ ಸೆಲ್ಸಿಯಸ್ನಿಂದ 19.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳ ಕರ್ನಾಟಕದ ಚಿಂತಾಮಣಿ ಭಾಗದಲ್ಲಿ 9.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಕರ್ನಾಟಕದ ಹೊನ್ನಾವರ, ಮಂಗಳೂರು ವಿಮಾನ ನಿಲ್ದಾಣ, ಕಾರವಾರ, ಶಕ್ತಿನಗರದ ಭಾಗದಲ್ಲಿ 21.1ರಿಂದ 24.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
-
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications