Karnataka Weather: ಕರ್ನಾಟಕದಲ್ಲಿ ಚಳಿ ಇಳಿಕೆ, ಈಶಾನ್ಯ ಮುಂಗಾರು ಮಳೆ ಬಗ್ಗೆ ಐಎಂಡಿ ವರದಿ
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಳಿ ಪ್ರಮಾಣ ಇಳಿಕೆಯಾಗಿದ್ದು, ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿದಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಆಗಿದೆ. ರಾಜ್ಯದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿದೆಯಾದರೂ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮುಂದಿನ 2 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ ಮತ್ತು ಕರ್ನಾಟಕದ ಒಳನಾಡಿನ ಪಕ್ಕದ ಪ್ರದೇಶಗಳಲ್ಲಿ ಈಶಾನ್ಯ ಮಾನ್ಸೂನ್ ಮಳೆ ನಿಲ್ಲಲು ಪರಿಸ್ಥಿತಿಗಳು ಅನುಕೂಲಕರವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂದಿನ ಮೂರು ದಿನಗಳ ವರೆಗೆ ಕರ್ನಾಟಕದ ವಿವಿಧ ಭಾಗದಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿದಿದೆ.
5 ದಿನ ಮಹತ್ವದ ಬದಲಾವಣೆ ಇಲ್ಲ
ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಬಹುತೇಕ ಒಣಹವೆ ಇರಲಿದೆ. ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಚಳಿ ಪ್ರಮಾಣ ತುಸು ಇಳಿಕೆ ಕಂಡಿದೆ. ಕಳೆದ 15 ದಿನಗಳಿಂದಲೂ ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ ಇತ್ತು. ಇನ್ನು ಮುಂದಿನ 24 ಗಂಟೆ ಹಾಗೂ 48 ಗಂಟೆಯ ಅವಧಿಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳವರೆಗೆ: ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮುಂದಿನ 48 ಗಂಟೆಗಳವರೆಗೆ: ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿತ್ತು. ರಾಜ್ಯದಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ 5 ಸೆಂ.ಮೀ ಮಳೆಯಾಗಿದೆ. ತರೀಕೆರೆ 4 ಸೆಂ.ಮೀ, ಬೆಳಗಾವಿಯ ಹಿಡಕಲ್ ಅಣೆಕಟ್ಟು ಭಾಗದಲ್ಲಿ 4 ಸೆಂ.ಮೀ ಹಾಗೂ ಅಜ್ಜಂಪುರದಲ್ಲಿ 2 ಸೆಂ.ಮೀ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications