Karnataka Weather: ಕರಾವಳಿ-ಒಳನಾಡು ಜಿಲ್ಲೆಗಳಲ್ಲಿ ಹೆಚ್ಚುತ್ತಿದೆ ಉರಿ ಬಿಸಿಲು, ಹವಾಮಾನ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಾದ್ಯಂತ ಸಂಪೂರ್ಣವಾಗಿ ಚಳಿ ಕಡಿಮೆ ಆಗಿಲ್ಲ. ರಾಜ್ಯದಲ್ಲ ಎಲ್ಲ ಜಿಲ್ಲೆಗಳಲ್ಲೂ ಶುಷ್ಕ ವಾತಾವರಣ ನಿರ್ಮಾಣವಾಗಿಲ್ಲ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಕಂಡು ಬಂದಿದೆ. ಜನರಿಗೆ ಸೆಕೆಯ ಅನುಭವವಾಗುತ್ತಿದೆ. ಬೆಂಗಳೂರು ನಗರ ಸೇರಿ ಕೆಲವು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಬೆಳಗ್ಗೆ ಮಂಜಿನ ವಾತಾವರಣ ಹಾಗೂ ಚಳಿ ಕಂಡು ಬರುತ್ತಿದೆ. ಚಂಡಮಾರುತ ಪ್ರಸರಣ ಉಂಟಾಗಿರುವ ಕಾರಣ ಮುಂದಿನ 05 ದಿನ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಲಕ್ಷದ್ವೀಪ ಪ್ರದೇಶ ಹಾಗೂ ಕೇರಳ ಕರಾವಳಿಗೆ ಹೊಂದಿಕೊಂಡಂತೆ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ಸರಾಸರಿ ಸಮುದ್ರಮಟ್ಟದಿಂದ 0.9 ಕಿಲೋ ಮೀಟರ್ ಎತ್ತರ ಮೇಲ್ಭಾಗದಲ್ಲಿ ವಾಯು ಚಂಡಮಾರುತ ಪರಿಚಲನೆ ಉಂಟಾಗಿದೆ. ಇನ್ನೂ ಕೊಮೋರಿಯನ್ ಪ್ರದೇಶ ಹಾಗೂ ನೆರೆ ಹೊರೆಗಳಲ್ಲಿ ಸರಸಾರಿ ಸಮುದ್ರಮಟ್ಟದಿಂದ 1.5 ಕಿಲೋ ಮೀಟರ್ ವರೆಗೆ ಇನ್ನೊಂದು ವಾಯು ಚಂಡಮಾರುತ ಪರಿಚಲನೆ ಮುಂದುವರಿದಿದೆ.

ಈ ವೈಪರೀತ್ಯ ಹಾಗೂ ವಾತಾವರಣದಲ್ಲಿ ಬದಲಾವಣೆಗಳು ಸಹ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಸೇರಿದಂತೆ ಇನ್ನಿತರ ಜಿಲ್ಲೆಗಳ ಕೆಲವೆಡೆ ಚಳಿ, ತಂಪು ಗಾಳಿ ಬೀಸಲು ಕಾರಣವಾಗಿದೆ. ಹಗಲು ಒಣಹವೆ ಕಂಡು ಬರುತ್ತಿದೆ. ಆದರೆ ಬೆಳಗ್ಗೆ ಮತ್ತು ರಾತ್ರಿ ಇನ್ನೂ ಕನಿಷ್ಠ ತಾಪಮಾನ ದಾಖಲಾಗುತ್ತಿದೆ. ಇದು ಮುಂದಿನ ಮೂರರಿಂದ ಐದು ದಿನ ಮುಂದುವರಿಯಲಿದೆ. ನಂತರ ಇಲ್ಲೂ ಸಹ ಬೆಳಗ್ಗೆ, ರಾತ್ರಿ ಚಳಿ ಮುಂದುವರಿಯಬಹುದೆಂಬ ಮುನ್ಸೂಚನೆ ಇದೆ.
ಕೆಲವೆಡೆ ಚಳಿ, ಕನಿಷ್ಠ ತಾಪಮಾನದಲ್ಲಿ ಇಳಿಕೆ
ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಳನಾಡಿನ ಕೆಲವೆಡೆ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ -3.1 ಡಿಗ್ರಿ ಸೆಲ್ಸಿಯಸ್ ನಿಂದ -5.0 ಡಿ.ಸೆ.ವರೆಗೆ ಗಮನಾರ್ಹವಾಗಿ ಕಡಿಮೆಯಾಗಿದೆ. ಉತ್ತರ ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಕೆಲವು ಸ್ಥಳಗಳಲ್ಲಿ ವಾಡಿಕೆಗಿಂತ 1.6 ಡಿಗ್ರಿ ಸೆಲ್ಸಿಯಸ್ನಿಂದ -3.0 ಡಿ.ಸೆ ಕಡಿಮೆ ದಾಖಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡು ಜಿಲ್ಲೆಗಳ ಹಲವೆಡೆ ಒಂದೆರಡು ಕಡೆಗಳಲ್ಲಿ ಮಂಜಿನ ವಾತವರಣ ದಾಖಲಾಗಿದೆ. ಅಲ್ಲಿ ಚಳಿ ಹೆಚ್ಚಿತ್ತು.
ಇನ್ನುಳಿದಂತೆ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಕೊಪ್ಪಳ, ಗದಗ, ದಾರವಾಡ, ಕಲಬುರಗಿ, ವಿಜಯನಗರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮಂಡ್ಯ, ಬಳ್ಳಾರಿ ಸೇರಿ ರಾಜ್ಯಾದ್ಯಂತ ಹಣ ಹವೆ ನಿರ್ಮಾಣವಾಗಿದೆ. ಗರಿಷ್ಠ ತಾಪಮಾನ ಇನ್ನಷ್ಟು ಹೆಚ್ಚಾಗಬಹುದು. ರಾಜ್ಯಾದ್ಯಂತ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಗರಿಷ್ಠ ತಾಪಮಾನದ ಜಿಲ್ಲೆಗಳಿವು
ಕಾರವಾರದಲ್ಲಿ ಅತ್ಯಧಿಕ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇನ್ನೂ ಹೊನ್ನಾವರ 36 ಡಿಗ್ರಿ ಸೆಲ್ಸಿಯಸ್, ಮಂಗಳೂರು ಏರ್ಪೋರ್ಟ್ 33.9 ಡಿಗ್ರಿ ಸೆಲ್ಸಿಯಸ್, ಕೊಪ್ಪಳ 34 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 33.7 ಡಿಗ್ರಿ ಸೆಲ್ಸಿಯಸ್, ಕಲಬುರಗಿ 32 ಡಿಗ್ರಿ ಸೆಲ್ಸಿಯಸ್, ಬೀದರ್ 28.6 ಡಿಗ್ರಿ ಸೆಲ್ಸಿಯಸ್, ವಿಜಯಪುರ, ರಾಯಚೂರು, ಬೆಳಗಾವಿ ವಿಮಾನ ನಿಲ್ದಾಣ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತಲಾ 29. 5 ಡಿಗ್ರಿ ಸೆಲ್ಸಿಯಸ್, ಗದಗ, ಬಳ್ಳಾರಿ ಮತ್ತು ಹಾವೇರಿಯಲ್ಲಿ ತಲಾ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗುತ್ತಿದ್ದು, ಸೆಕೆ ಹಾಗೂ ಶಾಖದ ಅಲೆ ಮುನ್ಸೂಚನೆ ನೀಡಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ವರದಿಯು ತಿಳಿಸಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications