Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಬಿಸಿಯಾದ ವಾತಾವರಣ ಸಾಧ್ಯತೆ
ಬೆಂಗಳೂರು: ರಾಜ್ಯದಾದ್ಯಂತ ಒಣಹವಾಮಾನ ಮುಂದುವರಿದಿದ್ದು, ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ತಾಪಮಾನದಲ್ಲಿ ತುಸು ಇಳಿಕೆ ಕಂಡುಬಂದಿದೆ. ದಾವಣಗೆರೆ ಜಿಲ್ಲೆಯಲ್ಲಿ 11 ಡಿಗ್ರಿ ಸೆಲ್ಸಿಯಸ್ ಅತಿ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳು ಬಿಸಿ ಹಾಗೂ ತೇವಾಂಶದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಮುಂದಿನ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯತೆ ಕಡಿಮೆ. ಬೆಂಗಳೂರು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಆಕಾಶವು ಮುಖ್ಯವಾಗಿ ನಿರ್ಮಲವಾಗಿರಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಹೊತ್ತಿನಲ್ಲಿ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ ಸುಮಾರು 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ಸುಮಾರು 14 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕನಿಷ್ಠ ತಾಪಮಾನ ಕಡಿಮೆ
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಒಳನಾಡು ಕರ್ನಾಟಕದ ಅನೇಕ ಪ್ರದೇಶಗಳಲ್ಲಿ 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್ ಮಟ್ಟಿಗೆ ಕಡಿಮೆ ದಾಖಲಾಗಿದೆ. ಉಳಿದ ಕೆಲವು ಪ್ರದೇಶಗಳಲ್ಲಿ 1.6 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಳಿಕೆಯಾಗಿದ್ದು, ಬೇರೆಕಡೆ ಸಾಮಾನ್ಯ ಮಟ್ಟದಲ್ಲೇ ಇದೆ.
ಜಿಲ್ಲಾವಾರು ತಾಪಮಾನ ವಿವರ
ಉತ್ತರ ಒಳನಾಡು ಕರ್ನಾಟಕದ ಬೀದರ್, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ,ರಾಯಚೂರು ಜಿಲ್ಲೆಗಳು. ದಕ್ಷಿಣ ಒಳನಾಡು ಕರ್ನಾಟಕದ ಹಾಸನ, ದಾವಣಗೆರೆ, ಮಂಡ್ಯ, ಶಿವಮೊಗ್ಗ, ಬೆಂಗಳೂರು, ಚಿತ್ರದುರ್ಗ, ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ಕನಿಷ್ಠ ತಾಪಮಾನವು 11 ಡಿಗ್ರಿ ಸೆಲ್ಸಿಯಸ್ನಿಂದ 15 ಡಿಗ್ರಿ ಸೆಲ್ಸಿಯಸ್ ನಡುವೆ ವರದಿಯಾಗಿದೆ. ಬೆಳಗಾವಿ ವಿಮಾನ ನಿಲ್ದಾಣ, ಕೊಪ್ಪಳ, ಕಲಬುರಗಿ, ಬಳ್ಳಾರಿ, ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣಗಳಲ್ಲಿಯೂ ಕಡಿಮೆ ತಾಪಮಾನ ದಾಖಲಾಗಿದೆ.
ಕಳೆದ 24 ಗಂಟೆಗಳಲ್ಲಿ ರಾಯಚೂರು, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಮಂಡ್ಯ ಮತ್ತು ಚಿತ್ರದುರ್ಗ ಪ್ರದೇಶಗಳಲ್ಲಿ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಕರಾವಳಿ ಪ್ರದೇಶದ ಹೊನ್ನಾವರದಲ್ಲಿ ಸ್ವಲ್ಪ ಏರಿಕೆ ದಾಖಲಾಗಿದೆ. ಉಳಿದ ಕಡೆಗಳಲ್ಲಿ ಯಾವುದೇ ದೊಡ್ಡ ಬದಲಾವಣೆ ಕಂಡುಬಂದಿಲ್ಲ.
ಹಿಂದೂ ಮಹಾಸಾಗರ ಹಾಗೂ ದಕ್ಷಿಣ-ಪೂರ್ವ ಬಂಗಾಳ ಕೊಲ್ಲಿಯ ಭಾಗದಲ್ಲಿ ಮೇಲ್ಮಟ್ಟದ ಚಂಡಮಾರುತದ ಪರಿಚಲನೆ ಇದ್ದು, ಇದು ಸಮುದ್ರಮಟ್ಟದಿಂದ ಸುಮಾರು 5.8 ಕಿಮೀ ಎತ್ತರದವರೆಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಫೆಬ್ರವರಿ 15ರ ಸುಮಾರಿಗೆ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ, ದಕ್ಷಿಣ ತಮಿಳುನಾಡು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 1.5 ಕಿಮೀ ಎತ್ತರದಲ್ಲಿ ಮತ್ತೊಂದು ವಾಯುಚಂಡಮಾರುತ ಅಸ್ತಿತ್ವದಲ್ಲಿದೆ ಎಂದು ಮಾಹಿತಿ ನೀಡಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಬೆಂಗಳೂರಿಗರೇ ಎಚ್ಚರ; ಸೂರ್ಯನ ಪ್ರತಾಪಕ್ಕೆ ಕೂಲ್ ಸಿಟಿ ಕಂಗಾಲು: ಮುಂದಿನ ಎರಡು ದಿನ ತಾಪಮಾನ ಮತ್ತಷ್ಟು ಏರಿಕೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications