ಕರಾವಳಿ ಜಿಲ್ಲೆಯ ಜೊತೆ, ಮೈಸೂರು, ಹಾಸನದಲ್ಲಿಯೂ ಮಳೆಯ ಎಚ್ಚರಿಕೆ
ಬೆಂಗಳೂರು, ಜೂನ್ 21: ಕರಾವಳಿ ಜಿಲ್ಲೆಗಳಲ್ಲಿ ಮಾಮೂಲಿನಂತೆ ಮಳೆ ಮುಂದುವರೆಯಲಿದ್ದು, ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಹಲವು ದಿನಗಳಿಂದಲೂ ಕರಾವಳಿ ಜಿಲ್ಲೆಗಳಲ್ಲಿ ಬೀಳುತ್ತಿರುವ ಮಳೆ ಇಂದೂ ಸಹ ಕಡಿಮೆ ಆಗುವ ಸೂಚನೆ ಇಲ್ಲ, ಇಂದೂ ಸಹ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆ ಹೊರತುಪಡಿಸಿ, ಉತ್ತರ ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಇಲ್ಲ, ದಕ್ಷಿಣ ಕರ್ನಾಟಕದ ಹಾಸನ ಮತ್ತು ಮೈಸೂರು ಜಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಸಹಿತ ಸಹ ಮಳೆಯಾಗಲಿದೆ. ಚಿಕ್ಕಮಗಳೂರಿನಲ್ಲೂ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ನಗರದಲ್ಲಿ ಭಾಗಷಃ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗುಡು-ಮಿಂಚು ಸಹಿತ ಅಲ್ಪ ಮಳೆಯಾಗುವ ಸಾಧ್ಯತೆ ಇದೆ.
ದೇಶದ ಹವಾಮಾನ ನೋಡುವುದಾದರೆ ಮುಂಗಾರು ಸ್ವಲ್ಪ ಬಿಡುವು ನೀಡಲಿದ್ದು, ಮತ್ತೆ ಜೂನ್ 24ರಿಂದ ಮತ್ತೆ ಚುರುಕುಗೊಳ್ಳಲಿದೆ. ಪೂರ್ವ ಭಾರತದಲ್ಲಿ ಶೀತ ಗಾಳಿ ಮುಂದುವರೆಯಲಿದೆ. ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ.
ಜೂನ್ 23-25 ರ ಮಧ್ಯದ ವೇಳೆಗೆ ಅಸ್ಸಾಂ, ಮಹಾರಾಷ್ಟ್ರ, ಛತ್ತೀಸ್ಘಡ್, ಒಡಿಸ್ಸಾ, ಜಾರ್ಖಂಡ್, ಬಿಹಾರ, ಮಧ್ಯಪ್ರದೇಶ ಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
-
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ''












Click it and Unblock the Notifications