ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಸಹಕಾರ: ನಿರ್ಮಲಾ ಸೀತಾರಾಮನ್
ಬೆಂಗಳೂರು, ಜು. 02: "ಜೈವಿಕ ವಿಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವ ದಿಸೆಯಲ್ಲಿ ಕರ್ನಾಟಕಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಕೊಡಲಾಗುವುದು" ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಾಜ್ಯದ ಐಟಿ, ಬಿಟಿ ಮತ್ತು ವಿಜ್ಞಾನ & ತಂತ್ರಜ್ಞಾನ ಇಲಾಖೆಯು ಜೈವಿಕ ತಂತ್ರಜ್ಞಾನ ಉದ್ಯಮಿಗಳು ಹಾಗೂ ಸ್ಟಾರ್ಟ್ಅಪ್ ಪ್ರಮುಖರೊಂದಿಗೆ ಎಲೆಕ್ಟ್ರಾನಿಕ್ ಸಿಟಿಯ ಜೈವಿಕ ತಂತ್ರಜ್ಞಾನ ಪಾರ್ಕ್ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
"ವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ ಹಾಗೂ ಶೈಕ್ಷಣಿಕ ವಲಯಗಳ ನಡುವಿನ ಸಮನ್ವಯತೆಯಿಂದ ಜನರ ಬದುಕಿನ ಮಟ್ಟ ಸುಧಾರಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒತ್ತು ನೀಡಿದೆ ಎಂದರು. ಯಾವುದೇ ವೈಜ್ಞಾನಿಕ ಸಾಧನೆಗೆ ಜೀವ ವಿಜ್ಞಾನಗಳೇ ಬುನಾದಿ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಜೀವ ವಿಜ್ಞಾನ ಹಾಗೂ ಜೈವಿಕ ತಾಂತ್ರಿಕತೆಯ ಬೆಳವಣಿಗೆಗೆ ದೇಶದಲ್ಲೇ ಮಾದರಿ ಎನ್ನಿಸುವಂತಹ ವಾತಾವರಣ ಸೃಷ್ಟಿಸಿದೆ" ಎಂದರು.

ತಾಂತ್ರಿಕ ಸಂಶೋಧನೆಗೆ ಕೇಂದ್ರದ ಪ್ರೋತ್ಸಾಹ
"ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವೈಜ್ಞಾನಿಕ ಸಂಶೋಧನೆಗಳ ನಡುವೆ ಸಮನ್ವಯತೆ ಉಂಟುಮಾಡುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ. ಇದೇ ವೇಳೆ, ಯಾವುದೇ ಅಭಿಪ್ರಾಯ, ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು. ವೈಜ್ಞಾನಿಕ ಹಾಗೂ ತಾಂತ್ರಿಕ ಸಂಶೋಧನೆಗಳನ್ನು ಪ್ರೋತ್ಸಾಹಿಸುವುದೇ ಸರ್ಕಾರದ ಅಂತಿಮ ಉದ್ದೇಶ" ಎಂದು ಇದೇ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಭರವಸೆ ನೀಡಿದರು.

ಜೈವಿಕ ತಂತ್ರಜ್ಞಾನದ ತವರು
ಐಟಿ, ಬಿಟಿ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಅವರು ಸಂವಾದದಲ್ಲಿ ಭಾಗವಹಿಸಿ ಮಾತನಾಡಿ, "ಕರ್ನಾಟಕವು ಮಾಹಿತಿ ತಂತ್ರಜ್ಞಾನ ರಾಜಧಾನಿ ಮಾತ್ರವಲ್ಲದೇ ಜೈವಿಕ ತಂತ್ರಜ್ಞಾನದ ತವರೂ ಆಗಿದೆ. ಬಯೋಫಾರ್ಮಾ, ಬಯೋಫಾರ್ಮಸ್ಯೂಟಿಕಲ್, ಸಸ್ಯ ಆನುವಂಶೀಯತೆ, ವಂಶವಾಹಿನಿಗಳ ಅನುಕ್ರಮಣಿಕೆ, ಜೈವಿಕ ಸಂಸ್ಕರಣೆಗೆ ಸಂಬಂಧಿಸಿದ ಆವಿಷ್ಕಾರಗಳಿಗೆ ಬೆಂಗಳೂರು ಪ್ರಮುಖ ಕಾರ್ಯನೆಲೆಯಾಗಿದೆ" ಎಂದು ಇದೇ ಸಂದರ್ಭದಲ್ಲಿ ವಿವರಿಸಿದರು.

ನವೋದ್ಯಮಗಳಿಗೆ ಹೊಸ ಅವಕಾಶ
"ಐಟಿ, ಬಿಟಿ ಕ್ಷೇತ್ರವು ಹೆಚ್ಚಿನ ಉದ್ಯೋಗ ಸೃಷ್ಟಿಸುವ ಜೊತೆಗೆ ಉತ್ಪಾದಕತೆ ಹಾಗೂ ಸಮೃದ್ಧಿಯನ್ನು ಹೆಚ್ಚಿಸುತ್ತದೆ. ಆಹಾರ ಭದ್ರತೆ, ಆರೋಗ್ಯಸೇವೆ, ಶುದ್ಧ ಇಂಧನ, ಸ್ವಚ್ಛ ಪರಿಸರ ಇತ್ಯಾದಿ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಜೊತೆಗೆ, ಕೋವಿಡ್-19 ಸೋಂಕಿನ ಸನ್ನಿವೇಶದ ನವೋದ್ಯಮಗಳಿಗೆ ಹೊಸ ಅವಕಾಶಗಳನ್ನು ಉಂಟುಮಾಡಿವೆ. ಇದಕ್ಕೆ ಪೂರಕವಾಗಿ, ರಾಜ್ಯವು ಸ್ಪರ್ಧಾತ್ಮಕ ಸಂಸ್ಥೆಯ (ಐಎಫ್ ಸಿ) ಸಹಭಾಗಿತ್ವದಲ್ಲಿ ‘ಕರ್ನಾಟಕ ನಾವೀನ್ಯತಾ ಒಳನೋಟ-2030' ಹೊರತರಲು ತಯಾರಿ ನಡೆಸುತ್ತಿದೆ" ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಸಂವಾದದಲ್ಲಿ ವಿವರಿಸಿದರು.

ನಾವೀನ್ಯತಾ ಉತ್ಪನ್ನಗಳನ್ನು ವೀಕ್ಷಿಸಿದ ನಿರ್ಮಲಾ
ಸಂವಾದ ಕಾರ್ಯಕ್ರಮಕ್ಕೂ ಮುನ್ನ ಕೇಂದ್ರ ಸಚಿವೆ ನಿರ್ಮಾಲಾ ಸೀತಾಮಾರನ್ ಅವರು ವಿವಿಧ ಸ್ಟಾರ್ಟ್ಅಪ್ಗಳು ಅಭಿವೃದ್ಧಿಪಡಿಸಿರುವ ಸುಮಾರು 20ಕ್ಕೂ ಹೆಚ್ಚು ನಾವೀನ್ಯತಾ ಉತ್ಪನ್ನಗಳನ್ನು ವೀಕ್ಷಿಸಿದರು. ಜೊತೆಗೆ ಅವುಗಳಿಗೆ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ರಾಜಸ್ವ ಕಾರ್ಯದರ್ಶಿ ತರುಣ್ ಬಜಾಜ್ ಅವರು ಸಾಧನೆ ಆಧಾರಿತ ಪ್ರೋತ್ಸಾಹಕಗಳು, ಸಂಶೋಧನಾ ಮತ್ತು ಅಭಿವೃದ್ಧಿ ವೆಚ್ಚಗಳು ಹಾಗೂ ತೆರಿಗೆ ಸಂಬಂಧಿತ ವಿಷಯಗಳ ಕುರಿತು ವಿವರಿಸಿದರು.
ರಾಜ್ಯ ಜೈವಿಕ ತಂತ್ರಜ್ಞಾನ ಕಾರ್ಯಪಡೆ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ, ಕೇಂದ್ರದ ಕಂದಾಯ ಇಲಾಖೆ ಕಾರ್ಯದರ್ಶಿ ತರುಣ್ ಬಜಾಜ್, ಬಯೋ ಇನೋವೇಷನ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕ ಡಾ.ಜಿತೇಂದ್ರ ಕುಮಾರ್, ಸಿ ಕ್ಯಾಂಪ್ ಸಿಇಒ ಡಾ. ತಸ್ಲೀಮಾರಿಫ್ ಸೈಯ್ಯದ್, ಹೆಚ್ಚುವರಿ ಮುಖ್ಯ ಕಾಯ್ರದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಐಟಿ ನಿರ್ದೇಶಕಿ ಮೀನಾ ನಾಗರಾಜ ಮುಂತಾದವರು ಸಂವಾದದಲ್ಲಿ ಭಾಗಿಯಾಗಿದ್ದರು.
Recommended Video
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications