ಬದಲಾದ ಗಾಳಿಯ ದಿಕ್ಕು, ಲಾಕೋಸ್ಟ್ ಮಿಡತೆ ಹಾವಳಿಯಿಂದ ಬಚಾವಾದ ರಾಜ್ಯ!
ತುಮಕೂರು,ಜೂನ್ 01: ಗಾಳಿಯ ದಿಕ್ಕು ಬದಲಾಗಿರುವುದರಿಂದ ನಮ್ಮ ರಾಜ್ಯಕ್ಕೆ ಲಾಕೋಸ್ಟ್ ಮಿಡತೆಯಿಂದ ಯಾವುದೇ ತೊಂದರೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಗಾಳಿಯನ್ನು ಅವಲಂಬಿಸಿರುವ ಮಿಡತೆಗಳು ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ ಹೇಳಿಕೆ ಕೊಟ್ಟಿದ್ದಾರೆ.
ಬೇರೆ ರಾಜ್ಯಗಳಲ್ಲಿ ಮಿಡತೆಯ ಹಾವಳಿಯಿಂದ ನಮ್ಮ ರಾಜ್ಯವನ್ನು ಪ್ರವೇಶಿಸುವ ಆತಂಕ ಕಾಡಿತ್ತು. ಅದಕ್ಕಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೃಷಿ ಇಲಾಖೆ ಕೈಗೊಂಡಿತ್ತು. ಆದರೆ ಇದೀಗ ಈಶಾನ್ಯ ಭಾರತದತ್ತ ಗಾಳಿಯ ದಿಕ್ಕು ಬದಲಾಗಿರುವುದರಿಂದ ಮಿಡತೆ ಹಾವಳಿಯಿಂದ ರಾಜ್ಯ ಬಚಾವಾಗಿದೆ ಎಂದು ಕೃಷಿಸಚಿವ ಪಾಟೀಲ್ ಅವರು ತುಮಕೂರಿನಲ್ಲಿ ಹೇಳಿದ್ದಾರೆ.
ಸಧ್ಯಕ್ಕೆ ಮಿಡತೆ ಹಾವಳಿಯಿಂದ ರಾಜ್ಯದ ರೈತರಿಗೆ ಯಾವುದೇ ತೊಂದರೆಯಿಲ್ಲ. ರೈತರು ನಿಶ್ಚಿಂತರಾಗಿರಬೇಕು ಎಂದಿದ್ದಾರೆ. ಇನ್ನು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಹಿರಿಯ ಶಾಸಕ ಸಭೆಯ ಬಗ್ಗೆ ಮಾತನಾಡಿ, ಸೌಹಾರ್ದತೆಯಿಂದ ಆಪ್ತರು ನೆಂಟರು ಆತಿಥ್ಯ ನೀಡಿದರೆ ಅದೇ ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಯಾವುದೇ ರೀತಿಯಲ್ಲಿ ಭಿನ್ನಮತಗಳಿಲ್ಲ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರುವಂತೆ ಸರ್ಕಾರದಲ್ಲಿ ಸಣ್ಣಪುಟ್ಟ ಆಂತರಿಕ ಭಿನ್ನಾಭಿಪ್ರಾಯ ಇರುವುದು ಸಹಜವೇ. ಹಾಗಂದ ಮಾತ್ರಕ್ಕೆ ಅಸಮಾಧಾನವಾಗಲೀ ತೊಂದರೆಯಾಗಲಿ ಇದೆ ಎಂದಲ್ಲ. ನಾವೆಲ್ಲ ಬಂದ ಮೇಲೆ ಸರ್ಕಾರ ಸುಭದ್ರವಾಗಿದೆ. ಇನ್ನೂ ಮೂರುವರ್ಷ ಬಿಜೆಪಿ ಸರ್ಕಾರ ಸ್ಥಿರವಾಗಿರಲಿದೆ ಎಂದು ಬಿ.ಸಿ.ಪಾಟೀಲರು ಭವಿಷ್ಯ ನುಡಿದರು.

ಲಾಕ್ಡೌನ್ನಿಂದ ನಷ್ಟವನ್ನು ಅನುಭವಿಸಿದ ಹಣ್ಣು, ಹೂವು, ತರಕಾರಿ ಬೆಳೆದ ರೈತರಿಗೆ ಸರ್ಕಾರ ಪರಿಹಾರ ಘೋಷಿಸಿದೆ. ರೈತರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ರೈತರು ಯಾವುದೇ ಕಾರಣಕ್ಕೂ ಯಾವುದೇ ವಿಚಾರಕ್ಕೂ ಆತಂಕಕ್ಕೊಳಗಾಗುವುದು ಬೇಡ. ಸರ್ಕಾರ ಮತ್ತು ಇಲಾಖೆ ರೈತರೊಂದಿಗೆ ಸದಾ ಇರುತ್ತದೆ ಎಂದು ತಿಳಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications