Get Updates
Get notified of breaking news, exclusive insights, and must-see stories!

ಕರ್ನಾಟಕವು ಯಾವುದೇ ರಾಜ್ಯಕ್ಕೆ ಒಂದಿಂಚು ಭೂಮಿಯನ್ನೂ ನೀಡುವುದಿಲ್ಲ: ಸುಧಾಕರ್

ಹುಬ್ಬಳ್ಳಿ, ಡಿಸೆಂಬರ್‌ 27: ಮಹಾರಾಷ್ಟ್ರದ ಕೆಲ ರಾಜಕೀಯ ಮುಖಂಡರ ಹೇಳಿಕೆಯಿಂದ ಜನರ ನಡುವೆ ಬಾಂಧವ್ಯ ಹಾಳಾಗುವ ಅಪಾಯವಿದೆ. ಇಂತಹ ಹೇಳಿಕೆಗೆ ಕಾನೂನಿನ ಮಾನ್ಯತೆ ಇಲ್ಲ. ಕರ್ನಾಟಕವು ಯಾವುದೇ ರಾಜ್ಯಕ್ಕೆ ಒಂದಿಂಚು ಭೂಮಿಯನ್ನೂ ನೀಡುವುದಿಲ್ಲ ಎಂದು ಡಾ.ಕೆ ಸುಧಾಕರ್ ಹೇಳಿದರು.

ಈ ಕುರಿತು ಮಂಗಳವಾರ ಹುಬ್ಬಳ್ಳಿ ಮೆಡಿಕಲ್‌ ಕಾಲೇಜಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಜನರು ನಮ್ಮ ಸಹೋದರ, ಸಹೋದರಿಯರಾಗಿದ್ದಾರೆ. ಮಹಾಜನ್‌ ವರದಿ ಕೂಡ ಎಲ್ಲವನ್ನೂ ಸ್ಪಷ್ಪಡಿಸಿದೆ. ನಾವೆಲ್ಲರೂ ಮೊದಲು ಭಾರತೀಯರು, ನಂತರ ವಿವಿಧ ರಾಜ್ಯದವರು. ನೆರೆಯ ರಾಜ್ಯಗಳ ಜನರು ಈಗ ಪ್ರೀತಿ, ವಿಶ್ವಾಸದಿಂದ ಇರುವಾಗ ರಾಜಕೀಯ ಹೇಳಿಕೆಯಿಂದ ಸಂಬಂಧಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್‌ ನಾಯಕರಾದ ಡಿ.ಕೆ.ಶಿವಕುಮಾರ್‌ ಅವರು ಬಹಳ ಜ್ಯೋತಿಷ್ಯ ಶಾಸ್ತ್ರ ಕೇಳುತ್ತಾರೆ. ಆದರೆ ಈಗ ಅವರೇ ಭವಿಷ್ಯ ನುಡಿಯುತ್ತಿದ್ದಾರೆ. ರಾಹುಲ್‌ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ಹಾಗೆಯೇ, ವಿರೋಧ ಪಕ್ಷದ ನಾಯಕರೂ ಪಾದಯಾತ್ರೆ ಮಾಡಲಿ, ನಮಗೇನೂ ಅಭ್ಯಂತರವಿಲ್ಲ. 5 ವರ್ಷ ಆಡಳಿತ ಮಾಡಿದವರು ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಇದ್ದವರು ಮಹಾದಾಯಿ ಯೋಜನೆಗಾಗಿ ಏನು ಮಾಡಿದ್ದಾರೆಂದು ಸ್ಪಷ್ಟನೆ ನೀಡಲಿ ಎಂದರು.

Karnataka Will Not Give Even An Inch Of Land To Any State Sudhakar Said

ಇನ್ನೂ ಕೋವಿಡ್‌ ಹಿನ್ನೆಲೆಯಲ್ಲಿ ಜನರು ಸರ್ಕಾರದ ಕ್ರಮಗಳೊಂದಿಗೆ ಕೈ ಜೋಡಿಸಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು. ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್‌ ಲಸಿಕೆ ಲಭ್ಯವಿದ್ದು, ಎಲ್ಲರೂ 3 ನೇ ಡೋಸ್‌ ಪಡೆಯಬೇಕು ಎಂದು ಮನವಿ ಮಾಡಿದರು.

ಕೋವಿಡ್‌ನ ಬಿಎಫ್‌ 7 ವೈರಸ್‌ ಕೂಡ ಓಮೈಕ್ರಾನ್‌ನ ಮತ್ತೊಂದು ರೂಪ. ಹೊಸ ವೈರಾಣು ವೇಗವಾಗಿ ಹರಡಿದರೂ ರೋಗ ತೀವ್ರತೆ ಇಲ್ಲ. ವಿವಿಧ ಅನಾರೋಗ್ಯಗಳಿಗೆ ಒಳಗಾದವರಲ್ಲಿ ಮಾತ್ರ ರೋಗದ ತೀವ್ರತೆ ಕಂಡುಬಂದಿದೆ ಎಂದು ಹೊರ ದೇಶಗಳಲ್ಲಿ ವರದಿಯಾಗಿದೆ. ಇದಕ್ಕಾಗಿಯೇ ಮಾರ್ಗಸೂಚಿಯಲ್ಲಿ ಅಂತಹ ಜನವರ್ಗಕ್ಕೆ ಎಚ್ಚರ ನೀಡಲಾಗಿದೆ. ವೃದ್ಧರು ಹಾಗೂ ಇತರೆ ಆರೋಗ್ಯ ಸಮಸ್ಯೆ ಇರುವವರು, ಗರ್ಭಿಣಿಯರು, ಮಕ್ಕಳು ಜನಸಂದಣಿ ಇರುವ ಪ್ರದೇಶಕ್ಕೆ ಹೋಗಬಾರದು ಎಂದು ಸೂಚನೆ ನೀಡಲಾಗಿದೆ. ಹಾಗೆಯೇ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಎಚ್ಚರ ವಹಿಸಲಾಗಿದೆ ಎಂದರು.

ಪ್ರತಿ ಆಸ್ಪತ್ರೆಗಳಲ್ಲಿ 50-60 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ 200 ವೆಂಟಿಲೇಟರ್‌ಗಳು, ಪರಿಣತ ವೈದ್ಯರ ತಂಡ, ಸಿಬ್ಬಂದಿ ಇದ್ದಾರೆ. ಔಷಧಿಯ ದಾಸ್ತಾನು ಕೂಡ ಇದೆ. 40 ಕೆಎಲ್‌ನ ಎರಡು ಟ್ಯಾಂಕ್‌ಗಳಿವೆ. ಒಂದನೇ ಮತ್ತು ಎರಡನೇ ಕೋವಿಡ್‌ ಅಲೆಯ ವೇಳೆ ಕಿಮ್ಸ್‌ ಆಸ್ಪತ್ರೆ ಬಹಳ ಯಶಸ್ವಿಯಾಗಿ ಕೆಲಸ ಮಾಡಿದೆ. ಇನ್ನು ಮುಂದೆಯೂ ಜನರಿಗೆ ಉತ್ತಮ ಸೇವೆ ನೀಡಲಿದೆ ಎಂದರು.

ಟಫ್‌ ರೂಲ್ಸ್‌ ಅಲ್ಲ, ಟಫ್‌ ಮೈಂಡ್‌ ಬೇಕು

ಸರ್ಕಾರ ಟಫ್‌ ರೂಲ್ಸ್‌ಗಳನ್ನು ಮಾಡುವ ಬದಲು ಜನರು ಟಫ್‌ ಮೈಂಡೆಡ್‌ ಆಗಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಜನರನ್ನು ರಕ್ಷಣೆ ಮಾಡಲು ಈಗಾಗಲೇ ಸರ್ಕಾರ ದೃಢಸಂಕಲ್ಪ ಮಾಡಿದೆ. ಅದೇ ರೀತಿ, ಜನರು ಕೂಡ ರೋಗವನ್ನು ಎದುರಿಸುವ ದೃಢ ಸಂಕಲ್ಪ ಮಾಡಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.

ವಿದೇಶದಿಂದ ಬರುವವರನ್ನು ವಿಮಾನ ನಿಲ್ದಾಣದಲ್ಲಿ ರಾಂಡಮ್‌ ಪರೀಕ್ಷೆ ಮಾಡಲಾಗುತ್ತಿದೆ. ಎರಡು-ಮೂರು ದಿನಗಳಲ್ಲಿ ಹೆಚ್ಚು ಪ್ರಕರಣ ಕಂಡುಬಂದರೆ ನಿರ್ದಿಷ್ಟ ದೇಶಗಳ ಪ್ರಯಾಣಿಕರಿಗೆ ಪರೀಕ್ಷೆ ಮಾಡಲಾಗುವುದು ಎಂದರು.

ಲಸಿಕೆ ಕೊರತೆ ಇಲ್ಲ

ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್‌ ಕೋವಿಡ್‌ ಲಸಿಕೆ ಲಭ್ಯವಿದೆ. ಇನ್ನೂ 20-25 ಲಕ್ಷ ಡೋಸ್‌ ತರಿಸಲಾಗುವುದು. ಕೇಂದ್ರ ಸರ್ಕಾರ ಲಸಿಕೆ ನೀಡಲು ತಯಾರಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಲಸಿಕಾಕರಣದ ಪ್ರಮಾಣ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+