ಕರ್ನಾಟಕವು ಯಾವುದೇ ರಾಜ್ಯಕ್ಕೆ ಒಂದಿಂಚು ಭೂಮಿಯನ್ನೂ ನೀಡುವುದಿಲ್ಲ: ಸುಧಾಕರ್
ಹುಬ್ಬಳ್ಳಿ, ಡಿಸೆಂಬರ್ 27: ಮಹಾರಾಷ್ಟ್ರದ ಕೆಲ ರಾಜಕೀಯ ಮುಖಂಡರ ಹೇಳಿಕೆಯಿಂದ ಜನರ ನಡುವೆ ಬಾಂಧವ್ಯ ಹಾಳಾಗುವ ಅಪಾಯವಿದೆ. ಇಂತಹ ಹೇಳಿಕೆಗೆ ಕಾನೂನಿನ ಮಾನ್ಯತೆ ಇಲ್ಲ. ಕರ್ನಾಟಕವು ಯಾವುದೇ ರಾಜ್ಯಕ್ಕೆ ಒಂದಿಂಚು ಭೂಮಿಯನ್ನೂ ನೀಡುವುದಿಲ್ಲ ಎಂದು ಡಾ.ಕೆ ಸುಧಾಕರ್ ಹೇಳಿದರು.
ಈ ಕುರಿತು ಮಂಗಳವಾರ ಹುಬ್ಬಳ್ಳಿ ಮೆಡಿಕಲ್ ಕಾಲೇಜಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಜನರು ನಮ್ಮ ಸಹೋದರ, ಸಹೋದರಿಯರಾಗಿದ್ದಾರೆ. ಮಹಾಜನ್ ವರದಿ ಕೂಡ ಎಲ್ಲವನ್ನೂ ಸ್ಪಷ್ಪಡಿಸಿದೆ. ನಾವೆಲ್ಲರೂ ಮೊದಲು ಭಾರತೀಯರು, ನಂತರ ವಿವಿಧ ರಾಜ್ಯದವರು. ನೆರೆಯ ರಾಜ್ಯಗಳ ಜನರು ಈಗ ಪ್ರೀತಿ, ವಿಶ್ವಾಸದಿಂದ ಇರುವಾಗ ರಾಜಕೀಯ ಹೇಳಿಕೆಯಿಂದ ಸಂಬಂಧಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಅವರು ಬಹಳ ಜ್ಯೋತಿಷ್ಯ ಶಾಸ್ತ್ರ ಕೇಳುತ್ತಾರೆ. ಆದರೆ ಈಗ ಅವರೇ ಭವಿಷ್ಯ ನುಡಿಯುತ್ತಿದ್ದಾರೆ. ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ಹಾಗೆಯೇ, ವಿರೋಧ ಪಕ್ಷದ ನಾಯಕರೂ ಪಾದಯಾತ್ರೆ ಮಾಡಲಿ, ನಮಗೇನೂ ಅಭ್ಯಂತರವಿಲ್ಲ. 5 ವರ್ಷ ಆಡಳಿತ ಮಾಡಿದವರು ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಇದ್ದವರು ಮಹಾದಾಯಿ ಯೋಜನೆಗಾಗಿ ಏನು ಮಾಡಿದ್ದಾರೆಂದು ಸ್ಪಷ್ಟನೆ ನೀಡಲಿ ಎಂದರು.

ಇನ್ನೂ ಕೋವಿಡ್ ಹಿನ್ನೆಲೆಯಲ್ಲಿ ಜನರು ಸರ್ಕಾರದ ಕ್ರಮಗಳೊಂದಿಗೆ ಕೈ ಜೋಡಿಸಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು. ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್ ಲಸಿಕೆ ಲಭ್ಯವಿದ್ದು, ಎಲ್ಲರೂ 3 ನೇ ಡೋಸ್ ಪಡೆಯಬೇಕು ಎಂದು ಮನವಿ ಮಾಡಿದರು.
ಕೋವಿಡ್ನ ಬಿಎಫ್ 7 ವೈರಸ್ ಕೂಡ ಓಮೈಕ್ರಾನ್ನ ಮತ್ತೊಂದು ರೂಪ. ಹೊಸ ವೈರಾಣು ವೇಗವಾಗಿ ಹರಡಿದರೂ ರೋಗ ತೀವ್ರತೆ ಇಲ್ಲ. ವಿವಿಧ ಅನಾರೋಗ್ಯಗಳಿಗೆ ಒಳಗಾದವರಲ್ಲಿ ಮಾತ್ರ ರೋಗದ ತೀವ್ರತೆ ಕಂಡುಬಂದಿದೆ ಎಂದು ಹೊರ ದೇಶಗಳಲ್ಲಿ ವರದಿಯಾಗಿದೆ. ಇದಕ್ಕಾಗಿಯೇ ಮಾರ್ಗಸೂಚಿಯಲ್ಲಿ ಅಂತಹ ಜನವರ್ಗಕ್ಕೆ ಎಚ್ಚರ ನೀಡಲಾಗಿದೆ. ವೃದ್ಧರು ಹಾಗೂ ಇತರೆ ಆರೋಗ್ಯ ಸಮಸ್ಯೆ ಇರುವವರು, ಗರ್ಭಿಣಿಯರು, ಮಕ್ಕಳು ಜನಸಂದಣಿ ಇರುವ ಪ್ರದೇಶಕ್ಕೆ ಹೋಗಬಾರದು ಎಂದು ಸೂಚನೆ ನೀಡಲಾಗಿದೆ. ಹಾಗೆಯೇ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಎಚ್ಚರ ವಹಿಸಲಾಗಿದೆ ಎಂದರು.
ಪ್ರತಿ ಆಸ್ಪತ್ರೆಗಳಲ್ಲಿ 50-60 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಹುಬ್ಬಳ್ಳಿಯ ಕಿಮ್ಸ್ನಲ್ಲಿ 200 ವೆಂಟಿಲೇಟರ್ಗಳು, ಪರಿಣತ ವೈದ್ಯರ ತಂಡ, ಸಿಬ್ಬಂದಿ ಇದ್ದಾರೆ. ಔಷಧಿಯ ದಾಸ್ತಾನು ಕೂಡ ಇದೆ. 40 ಕೆಎಲ್ನ ಎರಡು ಟ್ಯಾಂಕ್ಗಳಿವೆ. ಒಂದನೇ ಮತ್ತು ಎರಡನೇ ಕೋವಿಡ್ ಅಲೆಯ ವೇಳೆ ಕಿಮ್ಸ್ ಆಸ್ಪತ್ರೆ ಬಹಳ ಯಶಸ್ವಿಯಾಗಿ ಕೆಲಸ ಮಾಡಿದೆ. ಇನ್ನು ಮುಂದೆಯೂ ಜನರಿಗೆ ಉತ್ತಮ ಸೇವೆ ನೀಡಲಿದೆ ಎಂದರು.
ಟಫ್ ರೂಲ್ಸ್ ಅಲ್ಲ, ಟಫ್ ಮೈಂಡ್ ಬೇಕು
ಸರ್ಕಾರ ಟಫ್ ರೂಲ್ಸ್ಗಳನ್ನು ಮಾಡುವ ಬದಲು ಜನರು ಟಫ್ ಮೈಂಡೆಡ್ ಆಗಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಜನರನ್ನು ರಕ್ಷಣೆ ಮಾಡಲು ಈಗಾಗಲೇ ಸರ್ಕಾರ ದೃಢಸಂಕಲ್ಪ ಮಾಡಿದೆ. ಅದೇ ರೀತಿ, ಜನರು ಕೂಡ ರೋಗವನ್ನು ಎದುರಿಸುವ ದೃಢ ಸಂಕಲ್ಪ ಮಾಡಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.
ವಿದೇಶದಿಂದ ಬರುವವರನ್ನು ವಿಮಾನ ನಿಲ್ದಾಣದಲ್ಲಿ ರಾಂಡಮ್ ಪರೀಕ್ಷೆ ಮಾಡಲಾಗುತ್ತಿದೆ. ಎರಡು-ಮೂರು ದಿನಗಳಲ್ಲಿ ಹೆಚ್ಚು ಪ್ರಕರಣ ಕಂಡುಬಂದರೆ ನಿರ್ದಿಷ್ಟ ದೇಶಗಳ ಪ್ರಯಾಣಿಕರಿಗೆ ಪರೀಕ್ಷೆ ಮಾಡಲಾಗುವುದು ಎಂದರು.
ಲಸಿಕೆ ಕೊರತೆ ಇಲ್ಲ
ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್ ಕೋವಿಡ್ ಲಸಿಕೆ ಲಭ್ಯವಿದೆ. ಇನ್ನೂ 20-25 ಲಕ್ಷ ಡೋಸ್ ತರಿಸಲಾಗುವುದು. ಕೇಂದ್ರ ಸರ್ಕಾರ ಲಸಿಕೆ ನೀಡಲು ತಯಾರಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಲಸಿಕಾಕರಣದ ಪ್ರಮಾಣ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications