Winter Session: ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಮಹೂರ್ತ ಫಿಕ್ಸ್, ರಾಜ್ಯಪಾಲರ ಭಾಷಣದತ್ತ ಎಲ್ಲರ ಚಿತ್ತ
ಬೆಂಗಳೂರು, ನವೆಂಬರ್ 19: ಕರ್ನಾಟಕದಲ್ಲಿ ಚಳಿಗಾಲ ಅಧಿವೇಶನಕ್ಕೆ ಮಹೂರ್ತ ಫಿಕ್ಸ್ ಆಗಿದೆ. ಇದೇ ಡಿಸೆಂಬರ್ 09 ರಿಂದ ಹತ್ತು ದಿನಗಳ ಕಾಲ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನಗಳು ಜರುಗಲಿವೆ. ಈ ವರ್ಷ ಸರ್ಕಾರ vs ರಾಜ್ಯಪಾಲರ ಜಟಾಪಟಿಯು ಸದನದಲ್ಲಿ ಭಾರೀ ಸದ್ದು ಮಾಡಲಿದೆ. ಬಿಜೆಪಿಯು ವಿವಿಧ ವಿಷಯಗಳ ಮೇಲೆ ಸರ್ಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿದ್ದಾರೆ. ಕಾಂಗ್ರೆಸ್ ಸಹ ತೀಕ್ಷ್ಣ ಪ್ರತ್ಯುತ್ತರ ಕೊಡಲು ಸಜ್ಜಾಗಿದೆ.
ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಅಧಿವೇಶನದ ಅಧಿಸೂಚನೆ ಪ್ರಕಟಗೊಳಿಸಿದೆ. ಈ ಕುರಿತು ಮಂಗಳವಾರ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯದಿಂದ ಆದೇಶ ನೀಡಲಾಗಿದ್ದು, ಡಿಸೆಂಬರ್ 9 ರಿಂದ 20 ರವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ.

ದಿನಾಂಕ 14 ರಂದು ಎರಡನೇ ಶನಿವಾರ ಮತ್ತು 15 ರಂದು ಭಾನುವಾರ ಹೊರತುಪಡಿಸಿ. ಉಳಿದ ಹತ್ತು ದಿನಗಳ ಕಾಲ ಸುವರ್ಣ ವಿಧಾನಸೌಧದಲ್ಲಿ ಕಾರ್ಯಕಲಾಪಗಳು ನಡೆಯಲಿವೆ. 16ನೇ ವಿಧಾನಸಭೆಯ ಚಳಿಗಾಲದ ಅಧಿವೇಶನ ಇದಾಗಿದೆ.
ಪ್ರತಿ ಭಾರಿ ಸರ್ಕಾರದ ಸಾಧನೆ ವಿವರಿಸುವ ರಾಜ್ಯಪಾಲರ ಭಾಷಣವು ಈ ಬಾರಿ ಹೇಗಿರಲಿದೆ? ಎಂಬ ಕುತೂಹಲ ಹೆಚ್ಚಾಗಲಿದೆ. ಏಕೆಂದರೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ಜಟಾಪಟಿ ಉಂಟಾಗಿತ್ತು. ರಾಜ್ಯಪಾಲರ ನಡೆಯನ್ನು ಸರ್ಕಾರ, ಸಿಎಂ ಸಿದ್ದರಾಮಯ್ಯ ಸೇರಿ ಅನೇಕರು ವಿರೋಧಿಸಿದ್ದರು. ರಾಜಕೀಯ ಕಾರಣದಿಂದ ಹೀಗೆ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ಸರ್ಕಾರದ ಬಿಲ್ ವಾಪಸ್ ಕಳುಹಿಸಲಾಗಿತ್ತು. ಸಚಿವರ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಇತ್ತೀಚೆಗೆ ರಾಜ್ಯಪಾಲರು ಸೂಚಿಸಿದ್ದರು. ಇದೆಲ್ಲ ಕಾರಣದಿಂದ ರಾಜ್ಯಪಾಲರ ಭಾಷಣದ ಮೇಲೆ ಕುತೂಹಲ ಕೆರಳಿಸುಂತಾಗಿದೆ.
ಇನ್ನೂ ಬಿಜೆಪಿಯು ರಾಜ್ಯದಲ್ಲಿ ವಕ್ಫ್ ಬೋರ್ಡ್ನಿಂದ ಬಡವರು, ರೈತರ ಆಸ್ತಿ, ಮಠಗಳು, ಶಾಲೆಗಳು ಆಸ್ತಿಯಲ್ಲಿ ವಕ್ಫ್ ಎಂದು ಉಲ್ಲೇಖಿಸತ್ತು. ಇದೂ ಉತ್ತರ ಕರ್ನಾಟಕದ ವಿಜಯಪುರದಿಂದ ಶುರುವಾಗಿತ್ತು. ಈ ವಿವಾದ, ಬಿಪಿಎಲ್ ಕಾರ್ಡ್ ರದ್ದು, ಮುಡಾ ಪ್ರಕರಣದಲ್ಲಿ ಸಿಎಂ ತನಿಖೆ, ವಾಲ್ಮಿಕಿ ಹಗರಣ, ಅಧಿಕಾರಿಗಳ ಆತ್ಮಹತ್ಯೆ ಸೇರಿದಂತೆ ವಿವಿಧ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಜ್ಜಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications