ಕರ್ನಾಟಕದಲ್ಲಿ 52 ವರ್ಷದಲ್ಲೇ ಅತಿ ಕಡಿಮೆ ಮಳೆ
ಬೆಂಗಳೂರು, ಜು.9: ಐವತ್ತೆರಡು ವರ್ಷಗಳಲ್ಲಿ ಈ ಬಾರಿ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.
ಶೂನ್ಯ ವೇಳೆಯಲ್ಲಿ ವಿಧಾನಸಭೆಯಲ್ಲಿ ಬಿಜೆಪಿಯ ಗುರುಪಾದಪ್ಪ ನಾಗಮಾರಪಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ವಾಡಿಕೆ ಪ್ರಕಾರ ಬೀಳಬೇಕಾದ ಮಳೆಯಲ್ಲಿ ಈ ಬಾರಿ ಕಡಿಮೆ ಮಳೆಯಾಗಿದ್ದು, ಬರ ಪರಿಸ್ಥಿತಿ ತಲೆದೋರಿದೆ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಕಷ್ಟ ಎದುರಾಗಲಿದೆ. ಪರಿಸ್ಥಿತಿಯ ಗಂಭೀರತೆ ಅರಿತು ರಾಜ್ಯ ಸರ್ಕಾರ ಪರ್ಯಾಯ ಸಿದ್ಧತೆಯಲ್ಲಿ ತೊಡಗಿದೆ ಎಂದು ತಿಳಿಸಿದರು.[ಭಾರತದಲ್ಲಿ ಮುಂಗಾರು ಮಳೆ ಶೇ.45 ಕುಸಿತ]

ರೈತರಿಗೆ ರಿಯಾಯಿತಿ ದರದಲ್ಲಿ ಬೀಜ: ಸರಿಯಾದ ಸಮಯಕ್ಕೆ ಮಳೆಯಾಗದೇ ಬೀಜ ಮೊಳಕೆಯೊಡೆಯದಿದ್ದರೆ ರೈತರಿಗೆ ರಿಯಾಯಿತಿ ದರದಲ್ಲಿ ಮತ್ತೊಮ್ಮೆ ಬಿತ್ತನೆ ಬೀಜವನ್ನು ವಿತರಿಸಲಾಗುವುದೆಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. [ಬೆಂಗಳೂರು: ಮಳೆ ಕೊರತೆ - ತರಕಾರಿ ಬೆಲೆ ಏರಿಕೆ]
ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಸದಸ್ಯರಾದ ಡಾ. ಮತ್ತಿಕಟ್ಟಿ ವೀರಣ್ಣ ಹಾಗೂ ಮೃತ್ಯುಂಜಯ ಜಿನಗಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮುಂಗಾರು ಹಿನ್ನೆಡೆಯಿಂದ ಬೆಳೆ ಹಾನಿಯಾದರೆ ಅದಕ್ಕೆ ಪರ್ಯಾಯವಾಗಿ ಅಲ್ಪಾವಧಿ ಮತ್ತು ಮಧ್ಯಮಾವಧಿಗೆ ಬೆಳೆಯಬಹುದಾದ ಬೆಳೆಗಳ ಕುರಿತ ಸರ್ಕಾರ ಈಗಾಗಲೇ ಪುಸ್ತಕವನ್ನು ಸಿದ್ಧಪಡಿಸಿಕೊಂಡಿದೆ ಎಂದು ತಿಳಿಸಿದರು.
ಹವಾಮಾನ ಇಲಾಖೆಯವರು ಏಳೆಂಟು ದಿನಗಳಲ್ಲಿ ಮಳೆಯಾಗಬಹುದೆಂದು ತಿಳಿಸಿದ್ದಾರೆ. ಆದರೂ ಮಳೆಯಾಗದಿದ್ದರೆ, ರೈತರಿಗೆ ಪರ್ಯಾಯವಾಗಿ ಅಲ್ಪಾವಧಿ ಹಾಗೂ ಮಧ್ಯಮಾವಧಿಗೆ ಬೆಳೆಯಬಹುದಾದ ಬೆಳೆಗಳ ಬಿತ್ತನೆ ಬೀಜಗಳನ್ನು ಹಾಗೂ ರಸಗೊಬ್ಬರವನ್ನು ಒದಗಿಸುವ ಸಲುವಾಗಿ ಈಗಾಗಲೇ ದಾಸ್ತಾನು ಮಾಡಲಾಗಿದೆ ಎಂದರು.[ಜೂನ್ ಮಳೆ: 113 ವರ್ಷದ ಇತಿಹಾಸದಲ್ಲಿ ಕಡಿಮೆ ಮಳೆ]
ಅಲ್ಪಾವಧಿ ಹಾಗೂ ಮಧ್ಯಮಾವಧಿಯಲ್ಲಿ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಕುರಿತು ಪುಸಕ್ತವನ್ನು ಸಿದ್ಧಪಡಿಸಿರುವುದಲ್ಲದೆ, ಇಲಾಖೆಯಲ್ಲಿ ಇದಕ್ಕಾಗಿ ಈಗಾಗಲೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ರೈತರಿಗೆ ಪರ್ಯಾಯ ಬೆಳೆಗಳ ಬಗ್ಗೆ ಮಾಹಿತಿಯನ್ನು ನೀಡುವ ಸಲುವಾಗಿ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಳ್ಳಲಿದೆ. ಒಟ್ಟಿನಲ್ಲಿ ಮುಂಗಾರು ಮಳೆಯ ಹಿನ್ನೆಡೆಯಿಂದ ರೈತರಿಗಾಗುವ ನಷ್ಟವನ್ನು ತಡೆಯಲು ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸದಸ್ಯರಿಗೆ ಮಾಹಿತಿ ನೀಡಿದರು.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications