ಶಿರಾಡಿ ಘಾಟ್ನಲ್ಲಿ ಕರ್ನಾಟಕದ ಮೊದಲ ಸುರಂಗ ಮಾರ್ಗ ತೆರೆಯಲು ಚಿಂತನೆ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು, ಜೂನ್ 26: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೆಚ್ಚುವರಿ ಮಾರ್ಗವಾಗಿ ಶಿರಾಡಿ ಘಾಟ್ ಪ್ರದೇಶದಲ್ಲಿ ಕರ್ನಾಟಕದ ಮೊದಲ ಸುರಂಗ ಮಾರ್ಗವನ್ನು ನಿರ್ಮಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇದು ಈ ಪ್ರದೇಶದಲ್ಲಿ ಅಪಘಾತಗಳನ್ನು ಕಡಿಮೆ ಮಾಡಲು ಶಾಶ್ವತ ಪರಿಹಾರವಲ್ಲ, ಆದರೆ ಸಮಯವನ್ನು ಉಳಿಸುತ್ತದೆ. ಈ ಸಂಬಂಧ ಅನುಮತಿ ಪಡೆಯಲು ಸೋಮವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ರಾಷ್ಟ್ರೀಯ ಹೆದ್ದಾರಿ 75ರ ಹಾಸನ-ಸಕಲೇಶಪುರ ರಸ್ತೆ ಹಾಗೂ ಶಿರಾಡಿ ಘಾಟ್ ರಸ್ತೆಯ ಚತುಷ್ಪಥ ಕಾಮಗಾರಿಯನ್ನು ಪರಿಶೀಲಿಸಿದ ಅವರು ಈ ವಿಚಾರವನ್ನು ಬಹಿರಂಗಪಡಿಸಿದರು. ಶಿರಾಡಿ ಘಾಟ್ನ 30 ಕಿ.ಮೀ ವ್ಯಾಪ್ತಿಯಲ್ಲಿ ಮಾರನಹಳ್ಳಿ ಮತ್ತು ಅಡ್ಡೆಹೊಳೆ ನಡುವೆ 10 ಕಿ.ಮೀ ಮೇಲ್ಸೇತುವೆ ಮತ್ತು 3.8 ಕಿ.ಮೀ ದೂರಕ್ಕೆ ಮೂರು ಸುರಂಗಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ. ಇದನ್ನು ಸಕಲೇಶಪುರದಿಂದ ಮಂಗಳೂರಿಗೆ ಏಕಮುಖ ಸಂಚಾರಕ್ಕೆ ಬಳಸಬಹುದು ಎಂದು ಸಚಿವರು ಹೇಳಿದರು.
NH 75 ಅನ್ನು ಮಂಗಳೂರಿನಿಂದ ಸಕಲೇಶಪುರಕ್ಕೆ ಏಕಮುಖ ಸಂಚಾರಕ್ಕಾಗಿ ಬಳಸಬಹುದು. ಅರಣ್ಯ ಪ್ರದೇಶಗಳಲ್ಲಿ ಕಾಶ್ಮೀರ ಮತ್ತು ಇತರ ರಾಜ್ಯಗಳಲ್ಲಿ ಇಂತಹ ಸುರಂಗಗಳಿವೆ. ಹಲವಾರು ರೈಲ್ವೆ ಸುರಂಗಗಳಿವೆ, ಆದರೆ ಇದು ರಾಜ್ಯದ ಮೊದಲ ಸುರಂಗ ರಸ್ತೆ ಮಾರ್ಗವಾಗಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ವಿವರವಾದ ಯೋಜನಾ ವರದಿ ತಯಾರಿಸಲಾಗುತ್ತದೆ ಎಂದು ಅವರು ಹೇಳಿದರು.

ಈ ಯೋಜನೆ ಕೇವಲ 10 ಕಿಮೀ ಅರಣ್ಯ ಸಂರಕ್ಷಣಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬರುತ್ತದೆ. ಹಾಗಾಗಿ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ, ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿ ಪಡೆಯುತ್ತೇನೆ. ಇದು ಪರಿಸರಕ್ಕೆ ಹಾನಿಯಾಗದಂತೆ ಮತ್ತು ಆನೆ ಕಾರಿಡಾರ್ ಮತ್ತು ಪ್ರಾಣಿಗಳ ಚಲನವಲನದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳುವ ಮೂಲಕ ನಾವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ಜಾರಕಿಹೊಳಿ ಹೇಳಿದರು.
ಕಳೆದ ಏಳು ವರ್ಷಗಳಿಂದ ವಿಳಂಬವಾಗಿದ್ದ ಹಾಸನ-ಸಕಲೇಶಪುರ ನಡುವಿನ ಚತುಷ್ಪಥ ಕಾಮಗಾರಿ 2024ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ. ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಪದೇ ಪದೇ ಭೂಕುಸಿತ ಸಂಭವಿಸುತ್ತಿರುವ ಸ್ಥಳವನ್ನು ಪರಿಶೀಲಿಸಿ, ಸಮಸ್ಯೆ ಬಗೆಹರಿಸಲು ಶಾಶ್ವತ ಪರಿಹಾರಕ್ಕೆ ಮುಂದಾಗುಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ಸಚಿವರು ತಿಳಿಸಿದ್ದಾರೆ.












Click it and Unblock the Notifications