Get Updates
Get notified of breaking news, exclusive insights, and must-see stories!

BREAKING: ಆಗಷ್ಟ್‌ 22 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜು. 01: ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ ಅಥವಾ ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ ಹಾಗೂ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ (ಜುಲೈ 01) ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ. ಆ. 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ. ಪ್ರವೇಶ ಪತ್ರಗಳನ್ನು ದಿನಾಂಕ ಆ. 12ರಿಂದ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

KARTET 2021 Which is Required to Qualify School Teachers for Grades One to Eight will be Held on August 22

Recommended Video

      The Driver - Kigali |_ಚಾಲಕ - ಕಿಗಾಲಿ | EP 04 |_OIDW | Oneindia Kannada

      ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಸುರೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+