BREAKING: ಆಗಷ್ಟ್ 22 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು, ಜು. 01: ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ ಅಥವಾ ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ ಹಾಗೂ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ (ಜುಲೈ 01) ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ. ಆ. 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ. ಪ್ರವೇಶ ಪತ್ರಗಳನ್ನು ದಿನಾಂಕ ಆ. 12ರಿಂದ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Recommended Video
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಸುರೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications