ಕಾರವಾರ : ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ವಂಚಿಸಿದ ಕಂಪನಿ
ಕಾರವಾರ, ಸೆಪ್ಟೆಂಬರ್ 24 : ಉದ್ಯೋಗ ಮೇಳದ ಹೆಸರಿನಲ್ಲಿ ವಂಚನೆ ಮಾಡಿರುವ ಪ್ರಕರಣ ಕಾರವಾರಲ್ಲಿ ಬೆಳಕಿಗೆ ಬಂದಿದೆ. ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 2016ರಲ್ಲಿ ನಡೆದಿದ್ದ ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಸಂದರ್ಶನ ನಡೆಸಿದ ಕಂಪನಿ ಅಭ್ಯರ್ಥಿಗಳಿಗೆ ಕೆಲಸ ಕೊಟ್ಟಿಲ್ಲ. ಆದರೆ, ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದೆ.
ಉತ್ತರ ಕನ್ನಡ ಜಿಲ್ಲಾಡಳಿತವು ನವೆಂಬರ್ 12 ಮತ್ತು 13 ರಂದು ಆಯೋಜಿಸಿದ್ದ ಎರಡು ದಿನಗಳ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ರಾಜ್ಯ ಹಾಗೂ ನೆರೆ ರಾಜ್ಯಗಳ ಸುಮಾರು 100ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಿದ್ದವು.

ಜಿಲ್ಲೆಯಿಂದ ಮಾತ್ರವಲ್ಲದೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ, ಸಂದರ್ಶನ ನೀಡಿದ್ದರು. ಅದರಲ್ಲಿ, ಕೆಲವು ಕಂಪೆನಿಗಳು ಮೊದಲು ತರಬೇತಿ ನೀಡಿ ಬಳಿಕ ನೇಮಕಾರಿ ಮಾಡಿಕೊಳ್ಳುವ ಭರವಸೆಯನ್ನು ನೀಡಿದ್ದವು.
ಮೆರಿಡಿಯನ್ ಕಂಪೆನಿ : ಬೆಳಗಾವಿಯ ಮೆರಿಡಿಯನ್ ಅಕಾಡೆಮಿ ಆಫ್ ಕಮರ್ಷಿಯಲ್ ಶಿಪ್ಪಿಂಗ್ ಎಂಡ್ ಲಾಜಿಸ್ಟಿಕ್ ಎಂಬ ಕಂಪೆನಿ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿತ್ತು. ಈಗ ಕಂಪನಿ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲು ಸತಾಯಿಸುತ್ತಿರುವ ಬಗ್ಗೆ ಅಭ್ಯರ್ಥಿಗಳು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಉದ್ಯೋಗ ಮೇಳದಲ್ಲಿ ಸಂದರ್ಶನ ಎದುರಿಸಿದ ಕಾರವಾರ, ಅಂಕೋಲಾ, ಶಿರಸಿ, ಕುಮಟಾ, ಭಟ್ಕಳ, ಯಲ್ಲಾಪುರ ಹಾಗೂ ಹುಬ್ಬಳ್ಳಿಯ ಸುಮಾರು 25 ಅಭ್ಯರ್ಥಿಗಳನ್ನು ಕಂಪೆನಿ ಆಯ್ಕೆ ಮಾಡಿಕೊಂಡಿತ್ತು. ಆದರೆ, ಇವರಿಗೆ ಉದ್ಯೋಗ ನೀಡದೆ ಕಂಪನಿ ವಂಚನೆ ಮಾಡಿದೆ.
15 ಸಾವಿರ ಹಿಂತಿರುಗಿಸಲು ವಿಳಂಬ : 15 ದಿನ ತರಬೇತಿ ನೀಡಿದ ಬಳಿಕ ಉದ್ಯೋಗ ನೀಡುವುದಾಗಿ ತಿಳಿಸಿದ್ದ ಕಂಪನಿ ಆಯ್ಕೆಯಾದ ಪ್ರತಿಯೊಬ್ಬರಿಂದ 15 ಸಾವಿರ ಕಟ್ಟಿಸಿಕೊಂಡಿದೆ. ಆದರೆ, ಇದೀಗ ಒಂದು ವರ್ಷ ಕಳೆದರು ಉದ್ಯೋಗವನ್ನೂ ನೀಡದೆ, ಹಣವನ್ನೂ ಮರಳಿಸದೆ ಕಂಪನಿ ಸತಾಯಿಸುತ್ತಿದೆ.
ಅಧಿಕೃತ ಮೊಹರಿಲ್ಲದ ಪ್ರಮಾಣ ಪತ್ರ : ಬೆಳಗಾವಿಯಲ್ಲಿ 15 ದಿನ ತರಬೇತಿ ನೀಡಿದ ಕಂಪೆನಿ ಈವರೆಗೂ ಉದ್ಯೋಗ ನೀಡಿಲ್ಲ. ಈ ಬಗ್ಗೆ ಕಂಪೆನಿಯವರನ್ನು ಕೇಳಿದರೆ ನಾವು ಉದ್ಯೋಗ ಈಗ ಕೊಡಲು ಆಗುವುದಿಲ್ಲ. ನಿಮ್ಮ ಹಣವನ್ನು ವಾಪಸ್ಸು ಮಾಡುವುದಿಲ್ಲ ಎನ್ನುತ್ತಾರೆ.
'ಅಲ್ಲದೆ ಫೋನ್ ಮಾಡಿದಾಗಲೆಲ್ಲ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ವರ್ಷದ ಹಿಂದೆ ತರಬೇತಿ ಪಡೆದ ಪ್ರಮಾಣ ಪತ್ರವನ್ನು ವಾರದ ಹಿಂದೆ ಕಳುಹಿಸಿದ್ದು, ಅದರಲ್ಲಿ ಕೂಡ ಯಾವುದೇ ಅಧಿಕೃತವಾದ ಮೊಹರು ಇಲ್ಲ. ಇದೀಗ ನಮಗೆ ಬೇರೆ ಕಡೆ ಉದ್ಯೋಗಕ್ಕೆ ತೆರಳುವುದು ಕಷ್ಟವಾಗಿದೆ' ಎನ್ನುತ್ತಾರೆ ತರಬೇತಿ ಪಡೆದ ಕಾರವಾರದ ವಿಶಾಲ್.
ಈ ಅನ್ಯಾಯದ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದರೆ ಅವರು ತಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ. ಬೆಳಗಾವಿಯಲ್ಲಿ ಕಂಪೆನಿ ಇರುವುದರಿಂದ ಅಲ್ಲಿಗೆ ತೆರಳಿ ದೂರು ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ, ಉದ್ಯೋಗ ಮೇಳ ನಡೆದಿರುವುದು ಕಾರವಾರದಲ್ಲಿ ಆದ್ದರಿಂದ, ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಜಿಲ್ಲಾಧಿಕಾರಿ ಸ್ಪಂದನೆ : 'ಉದ್ಯೋಗ ಮೇಳದಲ್ಲಿ ಸಂದರ್ಶಿಸಿದ ಕಂಪೆನಿ ಉದ್ಯೋಗ ನೀಡದಿರುವ ಬಗ್ಗೆ ದೂರು ಬಂದಿದ್ದು, ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ' ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications