ಕಾರವಾರದ ಕಡಲ ತೀರದಲ್ಲಿ ಬಿಗುವಿನ ಪರಿಸ್ಥಿತಿ
ಕಾರವಾರ, ನ.2: ಇಲ್ಲಿನ ಇತಿಹಾಸ ಪ್ರಸಿದ್ಧ ರವೀಂದ್ರನಾಥ್ ಠಾಗೂರ್ ಕಡಲ ತೀರದಲ್ಲಿ ಭಾನುವಾರ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಅನಧಿಕೃತ ಕಟ್ಟಡ, ಗುಡಿಸಲುಗಳನ್ನು ತೆರವುಗೊಳಿಸಲು ಬಂದಿದ್ದ ಅಧಿಕಾರಗಳ ವಿರುದ್ಧ ಸ್ಥಳೀಯ ಮೀನುಗಾರರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಆದರೆ, ಪ್ರತಿಭಟನೆ ನಡುವೆಯೂ ಹೈಕೋರ್ಟ್ ಆದೇಶದನ್ವಯ ಅಧಿಕಾರಿಗಳು ಕಡಲ ತೀರದಲ್ಲಿರುವ ಗುಡಿಸಲು ತೆರವು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಸುಮಾರು 188 ಗುಡಿಸಲುಗಳು ಜೆಸಿಬಿ ದಾಳಿಗೆ ಸಿಲುಕಿ ನೆಲಸಮಗೊಂಡಿವೆ.
ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಗುಡಿಸಲುಗಳನ್ನು ತೆರವುಗೊಳಿಸಲು ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಹಿಂಪಡೆಯುವಂತೆ ಈ ಹಿಂದೆ ಕೂಡಾ ಮೀನುಗಾರರು, ಅಖಿಲ ಭಾರತ ಕೊಂಕಣಿ ಮಹಾಜನ್ ಸಭಾ ಸೇರಿದಂತೆ ಕೆಲ ಸ್ಥಳೀಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು. ಅದರೆ, ಭಾನುವಾರ ಕಾರವಾರ ಉಪ ವಿಭಾಗಾಧಿಕಾರಿ ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ಗುಡಿಸಲುಗಳನ್ನು ತೆರವುಗೊಳಿಸಲಾಗಿದೆ.

ಸ್ಥಳಾಂತರಕ್ಕೆ ಸಮಯ ನೀಡಿಲ್ಲ?: ಏಕಾಏಕಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೀನುಗಾರರು ವಿರೋಧ ವ್ಯಕ್ತಪಡಿಸಿ ಜೆಸಿಬಿ ಯಂತ್ರಗಳನ್ನು ತಡೆಯಲು ಯತ್ನಿಸಿದರು. ಅಧಿಕಾರಗಳ ಜೊತೆ ಮಾತಿನ ಚಕಮಕಿ ಕೂಡಾ ನಡೆಯಿತು. ಅದರೆ, ಸೂಕ್ತ ಪೊಲೀಸ್ ಭದ್ರತೆ ಇದ್ದ ಕಾರಣ ಮೀನುಗಾರರು ಅಧಿಕಾರಗಳ ಮುಂದೆ ಕೈ ಕಟ್ಟಿ ನಿಲ್ಲಬೇಕಾಯಿತು.ಸ್ಥಳಾಂತರಕ್ಕೆ ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಯಾರಿಗೂ ತೊಂದರೆ ಉಂಟಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. [ಕಾರವಾರದ ಕಡಲ ಕಿನಾರೆಯಲ್ಲಿ ವಿಹರಿಸಿ]
ಇಲ್ಲಿ ಶತಮಾನಗಳಿಂದ ಕೊಂಕಣಿ ಖಾರ್ವಿ ಮೀನುಗಾರರು ನೆಲೆಸಿದ್ದಾರೆ. ಗುಡಿಸಲುಗಳಲ್ಲಿ ಮೀನುಗಾರಿಕೆಗೆ ಬೇಕಾದ ವಸ್ತುಗಳನ್ನು ಮಾತ್ರ ಇರಿಸಿರುತ್ತಾರೆ. ಇಲ್ಲಿಂದ ಸ್ಥಳಾಂತರಗೊಂಡರೆ ಅವರ ದೈನಂದಿನ ಬದುಕಿಗೆ ಭಾರಿ ಹೊಡೆತ ಬೀಳಲಿದೆ. ಇದೆಲ್ಲವೂ ತಾತ್ಕಾಲಿಕ ಡೇರೆ ಅಥವಾ ಗುಡಿಸಲುಗಳಾಗಿದ್ದು, ಯಾರೂ ಇಲ್ಲಿ ಸರ್ಕಾರದ ಜಾಗವನ್ನು ಅತಿಕ್ರಮಿಸಿಲ್ಲ ಎಂದು ಕೊಂಕಣ್ ಖಾರ್ವಿ ಮಹಾಜನ್ ಸಭಾ ಜಿಲ್ಲಾಧ್ಯಕ್ಷ ಮಹಾರುದ್ರ ಬನಾವಲಿ ಪ್ರತಿಕ್ರಿಯಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications