Heavy Rain: ಶಿರಸಿಯಲ್ಲಿ ಭಾರೀ ಗಾಳಿ- ಮಳೆ; ಹಾರಿಹೋದ ಮಾರಿಕಾಂಬಾ ಜಾತ್ರಾ ಚಪ್ಪರ
ಶಿರಸಿ, ಮಾರ್ಚ್ 18: ಬಿರು ಬೇಸಿಗೆಯಲ್ಲೂ ಶಿರಸಿಯಲ್ಲಿ ಭಾರೀ ಗುಡುಗು- ಮಳೆಯಾಗಿದ್ದು, ಪರಿಣಾಮ ಶಿರಸಿಯ ಮಾರಿಕಾಂಬಾ ಜಾತ್ರೆ ಪೇಟೆಯಲ್ಲಿ ಅಂಗಡಿಗಳೆಲ್ಲ ಅಸ್ತವ್ಯಸ್ತವಾಗಿದೆ. ಮಳೆಗೂ ಮುನ್ನವೇ ಶುರುವಾದ ಗಾಳಿಯಿಂದಾಗಿ ಗದ್ದುಗೆಯ ಜಾತ್ರಾ ಚಪ್ಪರ ಹಾಗೂ ಸ್ವಾಗತ ಕಮಾನು ಹಾರಿ ಹೋಗಿದೆ.
ಶುಕ್ರವಾರ ಬೆಳಗ್ಗಿನಿಂದ ಬಿರು ಬೇಸಿಗೆಯಿದ್ದ ಶಿರಸಿಯಲ್ಲಿ ಸೆಕೆಗೆ ಜನ ಹೈರಾಣಾಗಿದ್ದರು. ಶಿರಸಿ ಜಾತ್ರೆ ಪೇಟೆಯಲ್ಲೂ ಬಿಸಿಲಿನ ನಡುವೆಯೂ ಜನ ತಿರುಗಾಟ ನಡೆಸುತ್ತಿದ್ದು, ಎಂದಿನಂತೆ ವ್ಯಾಪಾರ- ವಹಿವಾಟು ನಡೆಯುತ್ತಿತ್ತು. ಆದರೆ ಸಂಜೆ 5.30ರ ಸುಮಾರಿಗೆ ಮೋಡ ಕವಿದು ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಪೇಟೆಯಲ್ಲಿದ್ದ ಜನರು ಹಾಗೂ ಅಂಗಡಿಗಳನ್ನಿಟ್ಟುಕೊಂಡಿದ್ದ ವ್ಯಾಪಾರಸ್ಥರು ಗಾಳಿ- ಮಳೆಯಿಂದಾಗಿ ಕಂಗಾಲಾದರು.
ವ್ಯಾಪಾರಸ್ಥರ ಅಂಗಡಿಯಲ್ಲಿದ್ದ ಆಟಿಕೆ, ಬಟ್ಟೆ ಸೇರಿದಂತೆ ಇತರ ಮಾರಾಟದ ವಸ್ತುಗಳಿಗೆ ಟಾರ್ಪಲ್ ಹೊದಿಸಿದ್ದರೂ ಗಾಳಿಗೆ ಹೊದಿಕೆಗಳೆಲ್ಲ ಹಾರಿಹೋಗಿವೆ. ಅಂಗಡಿಗಳಿಗೆಲ್ಲ ನೀರು ನುಗ್ಗಿ ಹಾನಿಯಾಗಿದೆ. ಒಟ್ಟಾರೆ ಜಾತ್ರಾ ಪೇಟೆ ಚೆಲ್ಲಾಪಿಲ್ಲಿಯಾಗಿದೆ.

ಇನ್ನು ಕೋಟೆಕೆರೆಯಲ್ಲಿದ್ದ ತೊಟ್ಟಿಲಿನ ಭಾರಕ್ಕೆ ಮಳೆಯಿಂದಾಗಿ ಮಣ್ಣು ಕುಸಿಯುವ ಭೀತಿ ಎದುರಾಗಿದ್ದ ಕಾರಣ ತೊಟ್ಟಿಗಲುಗಳ ಕೆಲ ಬುಟ್ಟಿಗಳನ್ನು ಮುಂಜಾಗ್ರತಾ ಕ್ರಮವಾಗಿ ಕಳಚಿಡಲಾಯಿತು. ಒಂದರ್ಧ ಗಂಟೆ ಕೊಂಚ ಬಿಡುವು ನೀಡಿದ್ದ ಮಳೆ ಮತ್ತೆ 6.30ರ ನಂತರವೂ ಮುಂದುವರಿದಿದ್ದು, ಜಾತ್ರೆಗೆ ಬಂದಿದ್ದವರೆಲ್ಲ ವಾಪಸ್ಸಾಗುವಂತಾಗಿದೆ. ಕೇವಲ ಶಿರಸಿಯಷ್ಟೇ ಅಲ್ಲದೇ, ಹಳಿಯಾಳ, ಸಿದ್ದಾಪುರದಲ್ಲೂ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೋರು ಗಾಳಿ- ಮಳೆ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭಾರೀ ಗಾಳಿ-ಮಳೆಗೆ ಮರ, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವರ್ಷದ ಮೊದಲ ಮಳೆ ಮಲೆನಾಡಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದೆ. ಭಾರೀ ಗಾಳಿ- ಮಳೆಗೆ ಕಬ್ಬಿಣದ ಶೀಟ್ಗಳು ಹಾರಿ ಹೋಗಿವೆ. ಗಾಳಿಗೆ ತೆಂಗಿನ ಮರದಿಂದ ಸೋಗೆ ಗರಿಗಳು ಮುರಿದು ಬೀಳುತ್ತಿವೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮೇಲಂಗಡಿ ಗ್ರಾಮದಲ್ಲಿ ಭಾರೀ ಗಾಳಿ- ಮಳೆಗೆ ರಾಜಶೇಖರ್ ಎಂಬುವರಿಗೆ ಸೇರಿದ ಮನೆ ಮೇಲೆ ತೆಂಗಿನ ಮರ ಉರುಳಿದ ಬಿದ್ದಿದೆ. ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications