ರಮೇಶ್ ಆತ್ಮಹತ್ಯೆ ಪ್ರಕರಣ: ಭೀಮಾ ನಾಯ್ಕ್ ಬಂಧನ
ಬೆಂಗಳೂರು, ಡಿಸೆಂಬರ್. 11 : ಗಾಲಿ ಜನಾರ್ದನ ರೆಡ್ಡಿ ಮಗಳ ಮದುವೆಗೆ ಸರಿ ಸುಮಾರು 100 ಕೋಟಿ ರು ಹಳೆ ನೋಟುಗಳನ್ನು ಹೊಸ ನೋಟುಗಳಾಗಿ ಪರಿವರ್ತಿಸಿ ಕೊಟ್ಟಿದ್ದಾರೆಂಬ ಆರೋಪ ಎದುರಿಸುತ್ತಿರುವ ಬೆಂಗಳೂರಿನ ವಿಶೇಷ ಭೂ ಸ್ವಾಧೀನಾಧಿಕಾರಿ ಭೀಮಾ ನಾಯ್ಕ್ ಅವರನ್ನು ಪೊಲೀಸರು ಭಾನುವಾರ ಬೆಳಗ್ಗೆ ಕಲಬುರಗಿಯಲ್ಲಿ ಬಂಧಿಸಿದ್ದಾರೆ.
ಬೆಂಗಳೂರು ವಿಶೇಷ ಭೂಸ್ವಾಧೀನ ಅಧಿಕಾರಿ ಭೀಮಾ ನಾಯ್ಕ್ ಅವರ ಕಚೇರಿಯಲ್ಲಿ ಕಾರು ಚಾಲಕ ಆಗಿರುವ ರಮೇಶ್ ಗೌಡ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದು, 17 ಪುಟಗಳ ಡೆತ್ ನೋಟ್ ನಲ್ಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಹೆಸರು ಪ್ರಸ್ತಾಪ ಮಾಡಿದ್ದರು. [ರಮೇಶ್ ಗೌಡ ಬರೆದ ಡೆತ್ ನೋಟ್ ನಲ್ಲಿ ಏನಿದೆ?]
Karnataka: Mandya District Police arrests KAS officer Bheema Naik in connection with the suicide of his driver Ramesh Gowda pic.twitter.com/RvkU5IeYSc
— ANI (@ANI_news) December 11, 2016
ಡಿಸೆಂಬರ್ 6 ರಿಂದ ಭೀಮಾನಾಯಕ್ ನಾಪತ್ತೆಯಾಗಿದ್ದರು. ಜನಾರ್ದನ ರೆಡ್ಡಿಯ ಸುಮಾರು 100 ಕೋಟಿ ರೂಪಾಯಿಯಷ್ಟು ಕಪ್ಪು ಹಣವನ್ನು ಭೀಮಾ ನಾಯ್ಕ್ ಅವರು ಶೇ.20ರಷ್ಟು ಕಮಿಷನ್ ಪಡೆದು ವೈಟ್ ಆಗಿ ಮಾಡಿಕೊಟ್ಟಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು. ಆ ಬಳಿಕ ಭೀಮಾ ನಾಯ್ಕ ತಲೆ ಮರೆಸಿಕೊಂಡಿದ್ದರು. ['ಇಲ್ಲಿ ನೂರು ಕೋಟಿ, ಅಲ್ಲಿನ 70 ಕೋಟಿ ಜನಾ ರೆಡ್ಡಿಯದೇ'