ನಾಡಗೀತೆ ರಾಗ ಸಂಯೋಜನೆಯ ಸರ್ಕಾರದ ನಿರ್ಧಾರ ಸ್ವಾಗತಿಸಿ ಕಸಾಪ
ಬೆಂಗಳೂರು, ಸೆಪ್ಟಂಬರ್ 23: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ 'ಜಯಭಾರತ ಜನನಿಯ ತನುಜಾತೆ'ಗೆ ಸಂಗೀತ ವಿದುಷಿ ಎಚ್.ಆರ್. ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾಸಿನಂತೆ ಕಾಲಾವಧಿ ಅಂತಿಮಗೊಳಿಸಲಾಗಿದೆ. ಮೈಸೂರು ಅನಂತ ಸ್ವಾಮಿಯವರ ರಾಗ ಸಂಯೋಜನೆ ಮತ್ತು 2 ನಿಮಿಷ 20 ಸೆಕೆಂಡ್ಗಳ ಕಾಲಾವಧಿಯನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ನಿರ್ಧಾರವನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ.
ಸರ್ಕಾರದ ನಿರ್ಧಾರ ಸ್ವಾಗತಿಸಿ ಮಾತನಾಡಿರುವ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಅಧ್ಯಕ್ಷ ಡಾ. ಮಹೇಶ ಜೋಶಿ ಅವರು,
ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆ ಪರಿಹರಿಸಲಾಗಿದೆ. ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕಿಂತಲೂ ಮೊದಲು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕಿತ್ತು. ಈ ಬಗ್ಗೆ ಸರ್ಕಾರಕ್ಕೆ ಪರಿಷತ್ತು ಒತ್ತಡ ತಂದಿತ್ತು. ಇದಕ್ಕೆ ಪೂರಕವಾಗಿ ನೀರ್ಣಯ ಕೈಗೊಂಡ ಮುಖ್ಯಮಂತ್ರಿಗಳಿಗೆ ಅವರು ಅಭಿನಂದನೆ ತಿಳಿಸಿದ್ದಾರೆ.
'ಜಯಭಾರತ ಜನನಿಯ ತನುಜಾತೆ' ಕವಿತೆಯನ್ನು 1971ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ರಾಷ್ಟ್ರಕವಿ ಕುವೆಂಪು ಅವರ ಸಮ್ಮತಿ ಪಡೆದು ಎಲ್ಲಾ ಕಾರ್ಯಕ್ರಮಗಳಲ್ಲೂ ಹಾಡಿಸಿತ್ತು. ಈ ಮೂಲಕ ಪ್ರಸ್ತುತ ಗೀತೆಯನ್ನು ನಾಡಗೀತೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಘೋಷಣೆ ಮಾಡಿತ್ತು. ಮುಂದೆ ಕರ್ನಾಟಕ ಸರಕಾರ 2004ರ ಜನವರಿ 6ರಂದು ಜಯಭಾರತ ಜನನಿಯ ತನುಜಾತೆ ಈ ಹಾಡನ್ನು ಅಧಿಕೃತ ನಾಡಗೀತೆಯೆಂದು ಸರ್ಕಾರ ಘೋಷಿಸಿತ್ತು.

ನಾಡಗೀತೆ ರಾಗ ಸಂಯೋಜನೆಗಾಗಿ 4ಸಮಿತಿ ರಚನೆ
ನಾಡಗೀತೆಯನ್ನು ಯಾವ ಧಾಟಿಯಲ್ಲಿ ಹಾಡಬೇಕು ಎನ್ನುವ ಕುರಿತು ಇದುವರೆಗೂ ಕ್ರಮವಾಗಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ, ವಸಂತ ಕನಕಾಪುರ, ಡಾ. ಚೆನ್ನವೀರ ಕಣವಿ ಮತ್ತು ಡಾ.ಎಚ್.ಆರ್.ಲಿಲಾವತಿ ಅವರ ನೇತ್ರತ್ವದಲ್ಲಿ ನಾಲ್ಕು ಸಮಿತಿಗಳನ್ನು ಕಾಲಕಾಲಕ್ಕೆ ನೇಮಿಸಿ ವರದಿ ಪಡೆಯಲಾಗಿತ್ತು. ಆದರೆ ಧಾಟಿ ಅಂತಿಮ ಗೊಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪರಿಷತ್ತು ಒತ್ತಡ ಹೇರಿತ್ತು ಎಂದರು.
ಅಂತಿಮವಾಗಿ ಮೈಸೂರು ಅನಂತಸ್ವಾಮಿಯವರು ನೀಡಿದ ರಾಗ ಸಂಯೋಜನೆಯನ್ನು ಸರ್ಕಾರ ಅಂತಿಮಗೊಳಿಸಿದೆ. ಸರ್ಕಾರದ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿ ಸೌಹಾರ್ದಯುತ ವಾತಾವರಣ ಉಂಟಾಗಲು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications