ಕಾಶೀಮಠಕ್ಕೆ ಮೋಸ ಮಾಡಿದ್ದ ಮಾಜಿ ಸ್ವಾಮೀಜಿ 'ಚೋಟು' ಕೊನೆಗೂ ಬಂಧನ
ಕಾಶೀಮಠಕ್ಕೆ ನಂಬಿಕೆ ದ್ರೋಹದ ಕೆಲಸ ಮಾಡಿದ್ದ, ಮಠದ ಪದಚ್ಯುತ ಸ್ವಾಮೀಜಿ ರಾಘವೇಂದ್ರ ತೀರ್ಥ ಯಾನೆ ಶಿವಾನಂದ ಪೈಯನ್ನು ಬೆಂಗಳೂರು ಹೊರವಲಯದಲ್ಲಿ ಸೋಮವಾರ (ಮಾ 6) ಬಂಧಿಸಲಾಗಿದೆ.
ತಿರುಪತಿ, ಮಾ 6: ಅಸಂಖ್ಯಾತ ಭಕ್ತರನ್ನು ಹೊಂದಿರುವ ಶ್ರೀಕಾಶೀಮಠಕ್ಕೆ ನಂಬಿಕೆ ದ್ರೋಹದ ಕೆಲಸ ಮಾಡಿದ್ದ, ಮಠದ ಪದಚ್ಯುತ ಸ್ವಾಮೀಜಿ ರಾಘವೇಂದ್ರ ತೀರ್ಥ ಯಾನೆ ಶಿವಾನಂದ ಪೈಯನ್ನು ಬೆಂಗಳೂರು ಹೊರವಲಯದಲ್ಲಿ ಸೋಮವಾರ (ಮಾ 6) ಬಂಧಿಸಲಾಗಿದೆ.
ಮಠಕ್ಕೆ ಸೇರಿದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ವಸ್ತುಗಳನ್ನು ಅಪಹರಿಸಿ ಶಿವಾನಂದ ಪೈ ಕಳೆದ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ತಿರುಪತಿ ಮತ್ತು ಕಡಪ ನ್ಯಾಯಾಲಯ ಶ್ರೀ ಸಂಸ್ಥಾನದ ಕೋಟ್ಯಾಂತರ ಬೆಲೆಬಾಳುವ ಚಿನ್ನಾಭರಣ ಹಾಗೂ ಇತರ ಸ್ವತ್ತುಗಳನ್ನು ಸಂಸ್ಥಾನಕ್ಕೆ ಹಿಂತಿರುಗಿಸುವಂತೆ ಶಿವಾನಂದ ಪೈಗೆ ಆದೇಶ ನೀಡಿತ್ತು.

ನ್ಯಾಯಾಲಯದ ಆದೇಶಕ್ಕೆ ಬೆಲೆ ನೀಡದೇ ಶಿವಾನಂದ ಪೈ ತಲೆಮರೆಸಿಕೊಂಡಿದ್ದರಿಂದ, ಕೇರಳ ಪೋಲಿಸರು ಕೂಡಾ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಮನವಿ ಸಲ್ಲಿಸಿದ್ದರು.
ಶಿವಾನಂದ ಪೈ ವಿರುದ್ದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಕೇಸು ದಾಖಲಾಗಿತ್ತು. ಕೊನೆಗೂ, ಆಂಧ್ರದ ಸಿಐಡಿ ಪೋಲೀಸರು ಸೋಮವಾರ ರಾಘವೇಂದ್ರ ತೀರ್ಥ ಯಾನೆ ಶಿವಾನಂದ ಪೈ ಯಾನೆ 'ಚೋಟು' ವನ್ನು ಬೆಂಗಳೂರು ಹೊರವಲಯದ ಹೊಸೂರಿನಲ್ಲಿ ಪತ್ತೆ ಹಚ್ಚಿ ತಿರುಪತಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ತಿರುಪತಿ ನ್ಯಾಯಲಯವು ಮಾರ್ಚ 20ರ ವರೆಗೆ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಕಾಶೀಮಠ ಸಂಸ್ಥಾನಕ್ಕೆ ಸೇರಿದ 500 ವರ್ಷಗಳಿಗೂ ಹಳೆಯದಾದ ಅತ್ಯಮೂಲ್ಯ ವಸ್ತುಗಳನ್ನು ಉಚ್ಚಾಟಿತ ಯತಿ ಮಠಕ್ಕೆ ಮರಳಿಸಿರಲಿಲ್ಲ ಎನ್ನುವ ಗುರುತರ ಆರೋಪ ಈತನ ಮೇಲಿದೆ.
ಮಠದ ಉಚ್ಚಾಟಿತ ಯತಿ ಕೇರಳದ ವಯನಾಡಿನ ಆಶ್ರಮವೊಂದರಲ್ಲಿ ಆಶ್ರಯ ಪಡೆದಿದ್ದ ಎನ್ನುವ ಮಾಹಿತಿ ಈ ಹಿಂದೆ ಆಂಧ್ರ ಪೊಲೀಸರಿಗೆ ಲಭ್ಯವಾಗಿತ್ತು. ಆದರೆ ಆಂಧ್ರ ಮತ್ತು ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರೂ ಶಿವಾನಂದ ಪೈ ಸೆರೆ ಹಿಡಿಯುವಲ್ಲಿ ಪೊಲೀಸರು ವಿಫಲರಾಗಿದ್ದರು.
ಇದಾದ ನಂತರ ಸಿಬಿಐ ಈತನ ವಿರುದ್ದ ' ರೆಡ್ ಕಾರ್ನರ್' ನೋಟಿಸ್ ಹೊರಡಿಸಿ, ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿತ್ತು. (ಚಿತ್ರ: ಮಂಜು ನೀರೇಶ್ವಾಲ್ಯ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications